ಚೆನ್ನೈ: ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಪುತ್ರಿ ಐಶ್ವರ್ಯ ಅವರ ವಿವಾದಾತ್ಮಕ ‘ಸಂಘ’ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. “ಐಶ್ವರ್ಯ ಈ ಬಗ್ಗೆ ತೀರ್ಪು ನೀಡುವ ಸ್ಥಾನದಲ್ಲಿಲ್ಲ; ತನ್ನ ತಂದೆಯನ್ನು ತಪ್ಪಾಗಿ ಲೇಬಲ್ ಮಾಡಲಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ’ ಎಂದು ರಜಿನಿಕಾಂತ್ ಹೇಳಿಕೆ ನೀಡಿದ್ದಾರೆ.
“ಸಂಘಿ ಎನ್ನುವುದು ಕೆಟ್ಟ ಪದ ಎಂದು ಐಶ್ವರ್ಯ ಎಲ್ಲೂ ಹೇಳಿಲ್ಲ. ನಾನು ಆಧ್ಯಾತ್ಮಿಕ ವ್ಯಕ್ತಿ ಎನ್ನುವುದು ಆಕೆಯ ಅಭಿಮತ. ನಾನು ಎಲ್ಲ ಧರ್ಮಗಳನ್ನು ಪ್ರೀತಿಸುತ್ತೇನೆ. ಆದರೂ ಜನ ನನ್ನನ್ನು ಸಂಘಿ ಎಂದು ಕರೆಯುತ್ತಾರೆ” ಎಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನಟ ರಜನಿಕಾಂತ್ ಸ್ಪಷ್ಟನೆ ನೀಡಿದ್ದಾರೆ.
ಐಶ್ವರ್ಯ ನಿರ್ದೇಶನದ ಲಾಲ್ ಸಲಾಮ್ ಚಿತ್ರದ ಆಡಿಯೊ ಬಿಡುಗಡೆ ಸಮಾರಂಭದ ವೇಳೆ ಜನವರಿ 26ರಂದು, “ನನ್ನ ತಂದೆಯನ್ನು ಸಂಘ ಎಂದು ಜನ ಕರೆಯುವುದು ನೋವು ತಂದಿದೆ” ಎಂದು ಹೇಳಿದ್ದರು. “ಅವರು ಸಂಘಿ ಆಗಿದ್ದರೆ, ಅವರು ಲಾಲ್ಸಲಾಂ ಚಿತ್ರದಲ್ಲಿ ನಟಿಸುತ್ತಿರಲಿಲ್ಲ’ ಎಂದಿದ್ದರು.
ರಜಿನಿಕಾಂತ್ ಅವರ ಟೀಕಾಕಾರರು ಐಶ್ವರ್ಯ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪಾದಸ್ಪರ್ಶ ಮಾಡಿರುವ ಚಿತ್ರಗಳನ್ನು ಹಾಗೂ ಅಯೋಧ್ಯೆ ರಾಮಮಂದಿರ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಚಿತ್ರಗಳನ್ನು ಹಂಚಿಕೊಂಡಿದ್ದರು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್ ಬಂದ್ಗೆ ಕರೆ ನೀಡಲಾಗಿದೆ.…
ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…
ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…
ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್ ಭದ್ರತೆಯು ಈಗ ಕೇವಲ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…