ಚಿತ್ರ ಮಂಜರಿ

ಸಂಘಿ ವಿವಾದ: ಮಗಳ ಹೇಳಿಕೆ ಸಮರ್ಥಿಸಿಕೊಂಡ ಸೂಪರ್‌ ಸ್ಟಾರ್‌!

ಚೆನ್ನೈ: ಸೂಪರ್‌ ಸ್ಟಾರ್‌ ರಜಿನಿಕಾಂತ್ ಅವರು ಪುತ್ರಿ ಐಶ್ವರ್ಯ ಅವರ ವಿವಾದಾತ್ಮಕ ‘ಸಂಘ’ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. “ಐಶ್ವರ್ಯ ಈ ಬಗ್ಗೆ ತೀರ್ಪು ನೀಡುವ ಸ್ಥಾನದಲ್ಲಿಲ್ಲ; ತನ್ನ ತಂದೆಯನ್ನು ತಪ್ಪಾಗಿ ಲೇಬಲ್ ಮಾಡಲಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ’ ಎಂದು ರಜಿನಿಕಾಂತ್ ಹೇಳಿಕೆ ನೀಡಿದ್ದಾರೆ.

“ಸಂಘಿ ಎನ್ನುವುದು ಕೆಟ್ಟ ಪದ ಎಂದು ಐಶ್ವರ್ಯ ಎಲ್ಲೂ ಹೇಳಿಲ್ಲ. ನಾನು ಆಧ್ಯಾತ್ಮಿಕ ವ್ಯಕ್ತಿ ಎನ್ನುವುದು ಆಕೆಯ ಅಭಿಮತ. ನಾನು ಎಲ್ಲ ಧರ್ಮಗಳನ್ನು ಪ್ರೀತಿಸುತ್ತೇನೆ. ಆದರೂ ಜನ ನನ್ನನ್ನು ಸಂಘಿ ಎಂದು ಕರೆಯುತ್ತಾರೆ” ಎಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನಟ ರಜನಿಕಾಂತ್‌ ಸ್ಪಷ್ಟನೆ ನೀಡಿದ್ದಾರೆ.

ಐಶ್ವರ್ಯ ನಿರ್ದೇಶನದ ಲಾಲ್ ಸಲಾಮ್ ಚಿತ್ರದ ಆಡಿಯೊ ಬಿಡುಗಡೆ ಸಮಾರಂಭದ ವೇಳೆ ಜನವರಿ 26ರಂದು, “ನನ್ನ ತಂದೆಯನ್ನು ಸಂಘ ಎಂದು ಜನ ಕರೆಯುವುದು ನೋವು ತಂದಿದೆ” ಎಂದು ಹೇಳಿದ್ದರು. “ಅವರು ಸಂಘಿ ಆಗಿದ್ದರೆ, ಅವರು ಲಾಲ್ಸಲಾಂ ಚಿತ್ರದಲ್ಲಿ ನಟಿಸುತ್ತಿರಲಿಲ್ಲ’ ಎಂದಿದ್ದರು.

ರಜಿನಿಕಾಂತ್ ಅವರ ಟೀಕಾಕಾರರು ಐಶ್ವರ್ಯ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪಾದಸ್ಪರ್ಶ ಮಾಡಿರುವ ಚಿತ್ರಗಳನ್ನು ಹಾಗೂ ಅಯೋಧ್ಯೆ ರಾಮಮಂದಿರ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಚಿತ್ರಗಳನ್ನು ಹಂಚಿಕೊಂಡಿದ್ದರು.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

2 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

16 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

16 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

16 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

16 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

16 hours ago