ಚಿತ್ರ ಮಂಜರಿ

ಸಂಘಿ ವಿವಾದ: ಮಗಳ ಹೇಳಿಕೆ ಸಮರ್ಥಿಸಿಕೊಂಡ ಸೂಪರ್‌ ಸ್ಟಾರ್‌!

ಚೆನ್ನೈ: ಸೂಪರ್‌ ಸ್ಟಾರ್‌ ರಜಿನಿಕಾಂತ್ ಅವರು ಪುತ್ರಿ ಐಶ್ವರ್ಯ ಅವರ ವಿವಾದಾತ್ಮಕ ‘ಸಂಘ’ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. “ಐಶ್ವರ್ಯ ಈ ಬಗ್ಗೆ ತೀರ್ಪು ನೀಡುವ ಸ್ಥಾನದಲ್ಲಿಲ್ಲ; ತನ್ನ ತಂದೆಯನ್ನು ತಪ್ಪಾಗಿ ಲೇಬಲ್ ಮಾಡಲಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ’ ಎಂದು ರಜಿನಿಕಾಂತ್ ಹೇಳಿಕೆ ನೀಡಿದ್ದಾರೆ.

“ಸಂಘಿ ಎನ್ನುವುದು ಕೆಟ್ಟ ಪದ ಎಂದು ಐಶ್ವರ್ಯ ಎಲ್ಲೂ ಹೇಳಿಲ್ಲ. ನಾನು ಆಧ್ಯಾತ್ಮಿಕ ವ್ಯಕ್ತಿ ಎನ್ನುವುದು ಆಕೆಯ ಅಭಿಮತ. ನಾನು ಎಲ್ಲ ಧರ್ಮಗಳನ್ನು ಪ್ರೀತಿಸುತ್ತೇನೆ. ಆದರೂ ಜನ ನನ್ನನ್ನು ಸಂಘಿ ಎಂದು ಕರೆಯುತ್ತಾರೆ” ಎಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನಟ ರಜನಿಕಾಂತ್‌ ಸ್ಪಷ್ಟನೆ ನೀಡಿದ್ದಾರೆ.

ಐಶ್ವರ್ಯ ನಿರ್ದೇಶನದ ಲಾಲ್ ಸಲಾಮ್ ಚಿತ್ರದ ಆಡಿಯೊ ಬಿಡುಗಡೆ ಸಮಾರಂಭದ ವೇಳೆ ಜನವರಿ 26ರಂದು, “ನನ್ನ ತಂದೆಯನ್ನು ಸಂಘ ಎಂದು ಜನ ಕರೆಯುವುದು ನೋವು ತಂದಿದೆ” ಎಂದು ಹೇಳಿದ್ದರು. “ಅವರು ಸಂಘಿ ಆಗಿದ್ದರೆ, ಅವರು ಲಾಲ್ಸಲಾಂ ಚಿತ್ರದಲ್ಲಿ ನಟಿಸುತ್ತಿರಲಿಲ್ಲ’ ಎಂದಿದ್ದರು.

ರಜಿನಿಕಾಂತ್ ಅವರ ಟೀಕಾಕಾರರು ಐಶ್ವರ್ಯ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪಾದಸ್ಪರ್ಶ ಮಾಡಿರುವ ಚಿತ್ರಗಳನ್ನು ಹಾಗೂ ಅಯೋಧ್ಯೆ ರಾಮಮಂದಿರ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಚಿತ್ರಗಳನ್ನು ಹಂಚಿಕೊಂಡಿದ್ದರು.

andolanait

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

2 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

2 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

2 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

2 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

2 hours ago