ಚಿತ್ರ ಮಂಜರಿ

ಬಹು ನಿರೀಕ್ಷಿತ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್‌ B’ ಬಿಡುಗಡೆ; ಚಿತ್ರ ನೋಡಿದ ಪ್ರೇಕ್ಷಕರು ಏನಂದ್ರು?

ಇಂದು ( ನವೆಂಬರ್‌ 17 ) ಕನ್ನಡದ ಬಹು ನಿರೀಕ್ಷಿತ ಸಿನಿಮಾ ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ ಬಿಡುಗಡೆಗೊಂಡಿದೆ. ಸೆಪ್ಟೆಂಬರ್‌ 1ರಂದು ಬಿಡುಗಡೆಯಾಗಿದ್ದ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಮೊದಲ ಭಾಗ ಸೈಡ್‌ ಎ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಬಾಕ್ಸ್‌ ಆಫೀಸ್‌ನಲ್ಲಿ 20 ಕೋಟಿಗೂ ಹೆಚ್ಚು ಗಳಿಕೆ ಮಾಡಿ ಯಶಸ್ಸು ಸಾಧಿಸಿತ್ತು.

ಕೇವಲ ಕನ್ನಡದಲ್ಲಿ ಮಾತ್ರ ಥಿಯೇಟ್ರಿಕಲ್‌ ಬಿಡುಗಡೆ ಕಂಡಿದ್ದ ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಎ ಓಟಿಟಿಯಲ್ಲಿ ಪರಭಾಷೆಗಳಿಗೂ ಸಹ ಡಬ್‌ ಆಗಿ ಆ ಪ್ರೇಕ್ಷಕರಿಂದಲೂ ಸಹ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡ ಕಾರಣ ಇದೀಗ ಎರಡನೇ ಭಾಗವನ್ನು ಚಿತ್ರತಂಡ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಿಗೂ ಸಹ ಡಬ್‌ ಮಾಡಿ ಬಿಡುಗಡೆ ಮಾಡಿದೆ.

ಇನ್ನು ನಿನ್ನೆ ಸಂಜೆಯಿಂದಲೇ ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ ಚಿತ್ರದ ಪ್ರದರ್ಶನಗಳು ಆರಂಭಗೊಂಡಿದ್ದು, ರಾಜ್ಯದ ಪ್ರಮುಖ ನಗರಗಳಲ್ಲಿ ಚಿತ್ರದ ಪ್ರೀಮಿಯರ್‌ ಶೋಗಳು ನಡೆದಿವೆ. ಇಂದಿನಿಂದ ದಕ್ಷಿಣ ಭಾರತದಾದ್ಯಂತ ಚಿತ್ರ ಬಿಡುಗಡೆಯಾಗಿದ್ದು ನಿನ್ನೆ ಹಾಗೂ ಇಂದು ಚಿತ್ರ ನೋಡಿದ ಸಿನಿ ರಸಿಕರು ಚಿತ್ರ ಹೇಗಿದೆ ಎಂಬುದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅವುಗಳ ಪಟ್ಟಿ ಈ ಕೆಳಕಂಡಂತಿದೆ..

ನಮ್ಮನ್ನು ಅಳಿಸುತ್ತೇನೆ ಎಂದು ಪ್ರಮಾಣ ಸ್ವೀಕರಿಸಿದ್ದೀರಾ?

ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ ನೋಡಿ ಹೊರಬಂದ ಸಿನಿ ರಸಿಕನೋರ್ವ ತನ್ನ ಟ್ವಿಟರ್‌ ಖಾತೆಯಲ್ಲಿ ರಕ್ಷಿತ್‌ ಶೆಟ್ಟಿ ಅವರ ಖಾತೆಯನ್ನು ಉಲ್ಲೇಖಿಸಿ ಚಿತ್ರವನ್ನು ವಿಮರ್ಶಿಸಿದ್ದಾರೆ. “ಸರ್‌ ವರ್ಷಕ್ಕೊಂದು ಬಾರಿಯಾದರೂ ನಮ್ಮನ್ನು ಅಳಿಸುತ್ತೇನೆ ಎಂಬ ಪ್ರಮಾಣವನ್ನೇನಾದರೂ ತೆಗೆದುಕೊಂಡಿದ್ದೀರಾ? ಕಳೆದ ವರ್ಷ ಚಾರ್ಲಿ ಮೂಲಕ ಅಳುವಂತೆ ಮಾಡಿದ್ರಿ, ಈ ವರ್ಷ ಈ ಚಿತ್ರದ ಮೂಲಕ ಅಳಿಸುತ್ತಿದ್ದೀರ. ಸೈಡ್‌ ಬಿ ಚಿತ್ರ ಹೃದಯ ತುಂಬಾ ಭಾರ ಎನ್ನುವಂತೆ ಮಾಡಿತು” ಎಂದು ಬರೆದುಕೊಂಡಿದ್ದಾರೆ.

 

ತಮಿಳು ಸಿನಿ ರಸಿಕರಿಂದಲೂ ಮೆಚ್ಚುಗೆ

ಇನ್ನು ಸಪ್ತ ಸಾಗರದಾಚೆ ಎಲ್ಲೋ ತಮಿಳಿನಲ್ಲಿ ʼಏಳು ಕಡಲ್‌ ದಾಂಡಿʼ ಎಂಬ ಹೆಸರಿನ ಅಡಿಯಲ್ಲಿ ಬಿಡುಗಡೆಯಾಗಿದ್ದು ಚಿತ್ರ ವೀಕ್ಷಿಸಿದ ತಮಿಳು ಸಿನಿ ಪ್ರೇಮಿಯೊಬ್ಬ “ನೋವಿನಿಂದ ಕೂಡಿದ ಲವ್‌ ಸ್ಟೋರಿ. ಸತ್ಯ ಹೇಳಬೇಕೆಂದರೆ ಹೇಳಲು ಪದಗಳೇ ಇಲ್ಲ, ಚಿತ್ರವನ್ನು ಫೀಲ್‌ ಮಾಡಿ. ರಕ್ಷಿತ್‌ ಶೆಟ್ಟಿ ಅದ್ಭುತ ನಟನೆ ಮಾಡಿದ್ದಾರೆ, ಒಳ್ಳೆಯ ಸ್ಕ್ರೀನ್‌ ಪ್ಲೇ. ಒಂದು ಬಾರಿ ನೋಡಬಹುದಾದ ಚಿತ್ರʼ ಎಂದು ಬರೆದುಕೊಂಡಿದ್ದಾರೆ.

ಪಾಸಿಟಿವ್‌ ಹೆಚ್ಚು, ನೆಗೆಟಿವ್‌ ಕಡಿಮೆ

ಕನ್ನಡ, ತಮಿಳು ಮಾತ್ರವಲ್ಲದೇ ತೆಲುಗು ಹಾಗೂ ಮಲಯಾಳಂ ಸಿನಿ ರಸಿಕರೂ ಸಹ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಲವಾರು ವಿಮರ್ಶೆಗಳನ್ನು ಬರೆದುಕೊಂಡಿದ್ದು ಚಿತ್ರಕ್ಕೆ ನೆಗೆಟಿವ್‌ಗಿಂತ ಹೆಚ್ಚು ಪಾಸಿಟಿವ್‌ ವಿಮರ್ಶೆಗಳೇ ಹರಿದು ಬಂದಿವೆ. ನೂರಾರು ಪಾಸಿಟಿವ್‌ ರಿವ್ಯೂಗಳ ನಡುವೆ ಅಲ್ಲೊಂದು ಇಲ್ಲೊಂದು ನೆಗೆಟಿವ್‌ ರಿವ್ಯೂಗಳು ಸಿಗಲಿವೆ. ಒಟ್ಟಿನಲ್ಲಿ ಸಾಲು ಸಾಲು ಗೆಲುವಿನ ಅಲೆಯಲ್ಲಿರುವ ರಕ್ಷಿತ್‌ ಶೆಟ್ಟಿಗೆ ಮತ್ತೊಂದು ಸಕ್ಸಸ್‌ ಸಿಕ್ಕಿರುವುದಂತೂ ಪಕ್ಕಾ.

andolana

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

7 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

10 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

10 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

10 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

10 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

10 hours ago