ಚಿತ್ರ ಮಂಜರಿ

ಬಹು ನಿರೀಕ್ಷಿತ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್‌ B’ ಬಿಡುಗಡೆ; ಚಿತ್ರ ನೋಡಿದ ಪ್ರೇಕ್ಷಕರು ಏನಂದ್ರು?

ಇಂದು ( ನವೆಂಬರ್‌ 17 ) ಕನ್ನಡದ ಬಹು ನಿರೀಕ್ಷಿತ ಸಿನಿಮಾ ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ ಬಿಡುಗಡೆಗೊಂಡಿದೆ. ಸೆಪ್ಟೆಂಬರ್‌ 1ರಂದು ಬಿಡುಗಡೆಯಾಗಿದ್ದ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಮೊದಲ ಭಾಗ ಸೈಡ್‌ ಎ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಬಾಕ್ಸ್‌ ಆಫೀಸ್‌ನಲ್ಲಿ 20 ಕೋಟಿಗೂ ಹೆಚ್ಚು ಗಳಿಕೆ ಮಾಡಿ ಯಶಸ್ಸು ಸಾಧಿಸಿತ್ತು.

ಕೇವಲ ಕನ್ನಡದಲ್ಲಿ ಮಾತ್ರ ಥಿಯೇಟ್ರಿಕಲ್‌ ಬಿಡುಗಡೆ ಕಂಡಿದ್ದ ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಎ ಓಟಿಟಿಯಲ್ಲಿ ಪರಭಾಷೆಗಳಿಗೂ ಸಹ ಡಬ್‌ ಆಗಿ ಆ ಪ್ರೇಕ್ಷಕರಿಂದಲೂ ಸಹ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡ ಕಾರಣ ಇದೀಗ ಎರಡನೇ ಭಾಗವನ್ನು ಚಿತ್ರತಂಡ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಿಗೂ ಸಹ ಡಬ್‌ ಮಾಡಿ ಬಿಡುಗಡೆ ಮಾಡಿದೆ.

ಇನ್ನು ನಿನ್ನೆ ಸಂಜೆಯಿಂದಲೇ ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ ಚಿತ್ರದ ಪ್ರದರ್ಶನಗಳು ಆರಂಭಗೊಂಡಿದ್ದು, ರಾಜ್ಯದ ಪ್ರಮುಖ ನಗರಗಳಲ್ಲಿ ಚಿತ್ರದ ಪ್ರೀಮಿಯರ್‌ ಶೋಗಳು ನಡೆದಿವೆ. ಇಂದಿನಿಂದ ದಕ್ಷಿಣ ಭಾರತದಾದ್ಯಂತ ಚಿತ್ರ ಬಿಡುಗಡೆಯಾಗಿದ್ದು ನಿನ್ನೆ ಹಾಗೂ ಇಂದು ಚಿತ್ರ ನೋಡಿದ ಸಿನಿ ರಸಿಕರು ಚಿತ್ರ ಹೇಗಿದೆ ಎಂಬುದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅವುಗಳ ಪಟ್ಟಿ ಈ ಕೆಳಕಂಡಂತಿದೆ..

ನಮ್ಮನ್ನು ಅಳಿಸುತ್ತೇನೆ ಎಂದು ಪ್ರಮಾಣ ಸ್ವೀಕರಿಸಿದ್ದೀರಾ?

ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ ನೋಡಿ ಹೊರಬಂದ ಸಿನಿ ರಸಿಕನೋರ್ವ ತನ್ನ ಟ್ವಿಟರ್‌ ಖಾತೆಯಲ್ಲಿ ರಕ್ಷಿತ್‌ ಶೆಟ್ಟಿ ಅವರ ಖಾತೆಯನ್ನು ಉಲ್ಲೇಖಿಸಿ ಚಿತ್ರವನ್ನು ವಿಮರ್ಶಿಸಿದ್ದಾರೆ. “ಸರ್‌ ವರ್ಷಕ್ಕೊಂದು ಬಾರಿಯಾದರೂ ನಮ್ಮನ್ನು ಅಳಿಸುತ್ತೇನೆ ಎಂಬ ಪ್ರಮಾಣವನ್ನೇನಾದರೂ ತೆಗೆದುಕೊಂಡಿದ್ದೀರಾ? ಕಳೆದ ವರ್ಷ ಚಾರ್ಲಿ ಮೂಲಕ ಅಳುವಂತೆ ಮಾಡಿದ್ರಿ, ಈ ವರ್ಷ ಈ ಚಿತ್ರದ ಮೂಲಕ ಅಳಿಸುತ್ತಿದ್ದೀರ. ಸೈಡ್‌ ಬಿ ಚಿತ್ರ ಹೃದಯ ತುಂಬಾ ಭಾರ ಎನ್ನುವಂತೆ ಮಾಡಿತು” ಎಂದು ಬರೆದುಕೊಂಡಿದ್ದಾರೆ.

 

ತಮಿಳು ಸಿನಿ ರಸಿಕರಿಂದಲೂ ಮೆಚ್ಚುಗೆ

ಇನ್ನು ಸಪ್ತ ಸಾಗರದಾಚೆ ಎಲ್ಲೋ ತಮಿಳಿನಲ್ಲಿ ʼಏಳು ಕಡಲ್‌ ದಾಂಡಿʼ ಎಂಬ ಹೆಸರಿನ ಅಡಿಯಲ್ಲಿ ಬಿಡುಗಡೆಯಾಗಿದ್ದು ಚಿತ್ರ ವೀಕ್ಷಿಸಿದ ತಮಿಳು ಸಿನಿ ಪ್ರೇಮಿಯೊಬ್ಬ “ನೋವಿನಿಂದ ಕೂಡಿದ ಲವ್‌ ಸ್ಟೋರಿ. ಸತ್ಯ ಹೇಳಬೇಕೆಂದರೆ ಹೇಳಲು ಪದಗಳೇ ಇಲ್ಲ, ಚಿತ್ರವನ್ನು ಫೀಲ್‌ ಮಾಡಿ. ರಕ್ಷಿತ್‌ ಶೆಟ್ಟಿ ಅದ್ಭುತ ನಟನೆ ಮಾಡಿದ್ದಾರೆ, ಒಳ್ಳೆಯ ಸ್ಕ್ರೀನ್‌ ಪ್ಲೇ. ಒಂದು ಬಾರಿ ನೋಡಬಹುದಾದ ಚಿತ್ರʼ ಎಂದು ಬರೆದುಕೊಂಡಿದ್ದಾರೆ.

ಪಾಸಿಟಿವ್‌ ಹೆಚ್ಚು, ನೆಗೆಟಿವ್‌ ಕಡಿಮೆ

ಕನ್ನಡ, ತಮಿಳು ಮಾತ್ರವಲ್ಲದೇ ತೆಲುಗು ಹಾಗೂ ಮಲಯಾಳಂ ಸಿನಿ ರಸಿಕರೂ ಸಹ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಲವಾರು ವಿಮರ್ಶೆಗಳನ್ನು ಬರೆದುಕೊಂಡಿದ್ದು ಚಿತ್ರಕ್ಕೆ ನೆಗೆಟಿವ್‌ಗಿಂತ ಹೆಚ್ಚು ಪಾಸಿಟಿವ್‌ ವಿಮರ್ಶೆಗಳೇ ಹರಿದು ಬಂದಿವೆ. ನೂರಾರು ಪಾಸಿಟಿವ್‌ ರಿವ್ಯೂಗಳ ನಡುವೆ ಅಲ್ಲೊಂದು ಇಲ್ಲೊಂದು ನೆಗೆಟಿವ್‌ ರಿವ್ಯೂಗಳು ಸಿಗಲಿವೆ. ಒಟ್ಟಿನಲ್ಲಿ ಸಾಲು ಸಾಲು ಗೆಲುವಿನ ಅಲೆಯಲ್ಲಿರುವ ರಕ್ಷಿತ್‌ ಶೆಟ್ಟಿಗೆ ಮತ್ತೊಂದು ಸಕ್ಸಸ್‌ ಸಿಕ್ಕಿರುವುದಂತೂ ಪಕ್ಕಾ.

andolana

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

12 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

14 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

17 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

21 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

1 day ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

1 day ago