ಗದಗ : ನಟ ರಾಕಿಂಗ್ ಸ್ಟಾರ್ ಯಶ್ ಅವರ 38ನೇ ಹುಟ್ಟಹಬ್ಬ ಹಿನ್ನೆಲೆ ಬ್ಯಾನರ್ ಕಟ್ಟಲು ಹೋಗಿ ಮೃತಪಟ್ಟ ಯುವಕರನ್ನು ಸಾಂತ್ವಾನ ಮಾಡಲು ಗದಗಕ್ಕೆ ಭೇಟಿ ನೀಡಿದ್ದ ಸಮಯದಲ್ಲಿ ಮತ್ತೊಬ್ಬ ಯಶ್ ಅಭಿಮಾನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ರಾಖೀ ಭಯ್ ಹುಟ್ಟು ಹಬ್ಬದಂದು ಗದಗ ಜಿಲ್ಲೆಯ ಕೊರಣಗಿ ಗ್ರಾಮದ ಯುವಕರು ಬ್ಯಾನರ್ ಹಾಕುವ ಸಂದರ್ಭದಲ್ಲಿ ವಿದ್ಯತ್ ಪ್ರವಹಿಸಿ ಮೃತಪಟ್ಟಿದ್ದರು. ತಮ್ಮ ಅಭಿಮಾನಿಗಳ ಅಗಲಿಕೆಯ ನೋವನ್ನು ಸಹಿಸದ ನಟ ಯಶ್, ಮೃತರ ಕುಟುಂಬದವನ್ನು ಸಂತೈಸಲು ಯಶ್ ಗದಗಕ್ಕೆ ಭೇಟಿ ನೀಡಿದ್ದರು. ಇನ್ನು ಮೃತರ ಕುಟುಂಬದವರನ್ನು ಸಂತೈಸಿ ವಾಪಾಸ್ ತೆರಳುವ ವೇಳೆ ಮತ್ತೊಂದು ರಸ್ತೆ ಅಪಘಾತ ಸಂಭವಿಸಿದೆ.
ಆಸ್ಪತ್ರೆಯಿಂದ ಗದಗಕ್ಕೆ ಮರಳುತ್ತಿದ್ದ ಯಶ್ ಅವರನ್ನು ಅಭಿಮಾನಿ ನಿಖಿಲ್ ಎಂಬಾತ ತಮ್ಮ ನಾಯಕನನ್ನು ನೋಡಿ ಹಿಂಬಾಲಿಸಿದ್ದಾರೆ. ಈ ವೇಳೆ ಆಯಾತಪ್ಪಿ ಯಶ್ಗೆ ಭದ್ರತೆ ನೀಡುತ್ತಿದ್ದ ಪೊಲೀಸರ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಯುವಕನ ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು(ಮಂಗಳವಾರ) ಬೆಳಗ್ಗೆ ನಿಖಿಲ್ ಮೃತಪಟ್ಟಿದ್ದಾರೆ.
ಗದಗ ಮುಳುಗುಂದ ರಸ್ತೆಯಲ್ಲಿ ಯಶ್ ಬೆಂಗಾವಲು ವಾಹನಕ್ಕೆ ಬಿಂಕದಕಟ್ಟಿ ಗ್ರಾಮದ ಯಶ್ ಅಭಿಮಾನಿ ನಿಖಿಲ್ ಸ್ಕೂಟಿ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡ ಯುವಕನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಯುವಕ ನಿಖಿಲ್ ಮೃತಪಟ್ಟಿದ್ದಾರೆ..
ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…
ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…
ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…