ಚಿತ್ರ ಮಂಜರಿ

ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಚಿಕಿತ್ಸೆ ಫಲಿಸದೆ ಯಶ್‌ ಅಭಿಮಾನಿ ಸಾವು

ಗದಗ : ನಟ ರಾಕಿಂಗ್‌ ಸ್ಟಾರ್ ಯಶ್ ಅವರ 38ನೇ ಹುಟ್ಟಹಬ್ಬ ಹಿನ್ನೆಲೆ ಬ್ಯಾನರ್‌ ಕಟ್ಟಲು ಹೋಗಿ ಮೃತಪಟ್ಟ ಯುವಕರನ್ನು ಸಾಂತ್ವಾನ ಮಾಡಲು ಗದಗಕ್ಕೆ ಭೇಟಿ ನೀಡಿದ್ದ ಸಮಯದಲ್ಲಿ ಮತ್ತೊಬ್ಬ ಯಶ್‌ ಅಭಿಮಾನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ರಾಖೀ ಭಯ್‌ ಹುಟ್ಟು ಹಬ್ಬದಂದು ಗದಗ ಜಿಲ್ಲೆಯ ಕೊರಣಗಿ ಗ್ರಾಮದ ಯುವಕರು ಬ್ಯಾನರ್‌ ಹಾಕುವ ಸಂದರ್ಭದಲ್ಲಿ ವಿದ್ಯತ್‌ ಪ್ರವಹಿಸಿ ಮೃತಪಟ್ಟಿದ್ದರು. ತಮ್ಮ ಅಭಿಮಾನಿಗಳ ಅಗಲಿಕೆಯ ನೋವನ್ನು ಸಹಿಸದ ನಟ ಯಶ್‌, ಮೃತರ ಕುಟುಂಬದವನ್ನು ಸಂತೈಸಲು ಯಶ್‌ ಗದಗಕ್ಕೆ ಭೇಟಿ ನೀಡಿದ್ದರು. ಇನ್ನು ಮೃತರ ಕುಟುಂಬದವರನ್ನು ಸಂತೈಸಿ ವಾಪಾಸ್‌ ತೆರಳುವ ವೇಳೆ ಮತ್ತೊಂದು ರಸ್ತೆ ಅಪಘಾತ ಸಂಭವಿಸಿದೆ.

ಆಸ್ಪತ್ರೆಯಿಂದ ಗದಗಕ್ಕೆ ಮರಳುತ್ತಿದ್ದ ಯಶ್‌ ಅವರನ್ನು ಅಭಿಮಾನಿ ನಿಖಿಲ್‌ ಎಂಬಾತ ತಮ್ಮ ನಾಯಕನನ್ನು ನೋಡಿ ಹಿಂಬಾಲಿಸಿದ್ದಾರೆ. ಈ ವೇಳೆ ಆಯಾತಪ್ಪಿ ಯಶ್​ಗೆ ಭದ್ರತೆ ನೀಡುತ್ತಿದ್ದ ಪೊಲೀಸರ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಯುವಕನ ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು(ಮಂಗಳವಾರ) ಬೆಳಗ್ಗೆ ನಿಖಿಲ್ ಮೃತಪಟ್ಟಿದ್ದಾರೆ.

ಗದಗ ಮುಳುಗುಂದ ರಸ್ತೆಯಲ್ಲಿ ಯಶ್ ಬೆಂಗಾವಲು ವಾಹನಕ್ಕೆ ಬಿಂಕದಕಟ್ಟಿ ಗ್ರಾಮದ ಯಶ್‌ ಅಭಿಮಾನಿ ನಿಖಿಲ್ ಸ್ಕೂಟಿ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡ ಯುವಕನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಯುವಕ ನಿಖಿಲ್‌ ಮೃತಪಟ್ಟಿದ್ದಾರೆ..

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

42 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago