ಚಿತ್ರ ಮಂಜರಿ

ಸೀತೆಯಾಗಿ ಸಾಯಿ ಪಲ್ಲವಿ ಬಾಲಿವುಡ್ ಗೆ ಎಂಟ್ರಿ?

ಸಾಯಿ ಪಲ್ಲವಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನುವ ಮಾಹಿತಿ ಇದೆ. ಈ ಹಿಂದೆ ಈ ಪಾತ್ರಕ್ಕೆ ದೀಪಿಕಾ ಪಡುಕೋಣೆ ಹಾಗೂ ಕರೀನಾ ಕಪೂರ್ ಹೆಸರು ಕೇಳಿಬಂದಿತ್ತು. ಆದರೆ ಚಿತ್ರ ನಿರ್ಮಾಪಕರು ಸಾಯಿ ಪಲ್ಲವಿ ಅವರನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಸೌತ್​ ಸೂಪರ್​ ಸ್ಟಾರ್​ ಸಾಯಿ ಪಲ್ಲವಿ ತಮ್ಮ ಅದ್ಭುತ ಅಭಿನಯದಿಂದ ದೊಡ್ಡ ಹೆಸರು ಮಾಡಿದ್ದಾರೆ. ದಕ್ಷಿಣ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಮಿಂಚುತ್ತಿದ್ದಾರೆ. ಆಯ್ದ ಚಿತ್ರಗಳಲ್ಲಿ ಅದ್ಭುತವಾಗಿ ಅಭಿನಯಿಸುವ ಮೂಲಕ ಯುವಜನತೆ ಮಾತ್ರವಲ್ಲದೇ ಎಲ್ಲ ವರ್ಗದ ಪ್ರೇಕ್ಷಕರನ್ನೂ ತಲುಪಿದ್ದಾರೆ. ಇದೀಗ ಈ ಬ್ಯೂಟಿಫುಲ್ ನಟಿಯ ಮುಂದಿನ ಸಿನಿಮಾಗೆ ಸಂಬಂಧಿಸಿದ ಸುದ್ದಿಯೊಂದು ಸಖತ್ ವೈರಲ್ ಆಗಿದೆ. ಸಾಯಿ ಪಲ್ಲವಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರಂತೆ.
ಬಾಲಿವುಡ್​​ ಹೀರೋ ರಣ್​​ಬೀರ್ ಕಪೂರ್ ಜೊತೆ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ. ರಣಬೀರ್ ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಂಡರೆ, ಸಾಯಿ ಪಲ್ಲವಿ ಸೀತೆಯಾಗಿ ಪಾತ್ರ ವಹಿಸಲಿದ್ದಾರೆ. ಈ ಹಿಂದೆ ಈ ಪಾತ್ರಕ್ಕೆ ದೀಪಿಕಾ ಪಡುಕೋಣೆ ಹಾಗೂ ಕರೀನಾ ಕಪೂರ್ ಹೆಸರು ಕೇಳಿ ಬಂದಿತ್ತು. ಆದರೆ ಚಿತ್ರ ನಿರ್ಮಾಪಕರು ಸಾಯಿ ಪಲ್ಲವಿ ಅವರನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ.ಇನ್ನೂ ಹೃತಿಕ್ ರೋಷನ್ ಈ ಸಿನಿಮಾದಲ್ಲಿ ರಾವಣನ ಪಾತ್ರ ಮಾಡಲಿದ್ದಾರೆ. ರಾಮಾಯಣ ಆಧಾರಿತ ಈ ಸಿನಿಮಾದ ಚಿತ್ರೀಕರಣ ಮುಂದಿನ ವರ್ಷ ಆರಂಭವಾಗಲಿದ್ದು, ಈ ಯೋಜನೆಯ ಅಧಿಕೃತ ವಿವರಗಳು ಶೀಘ್ರದಲ್ಲೇ ಬಹಿರಂಗಗೊಳ್ಳಲಿವೆ.

andolanait

Recent Posts

ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್‌ ರಿಲೀಫ್!

ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರೇವಣ್ಣ…

31 mins ago

ಹುಣಸೂರು ಚಿನ್ನಾಭರಣ ದರೋಡೆ ಪ್ರಕರಣ : ತನಿಖೆ ಕುರಿತು ಎಸ್ಪಿ ವಿಷ್ಣುವರ್ಧನ್ ಹೇಳಿದ್ದೇನು?

ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್‌ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…

50 mins ago

ಮುಡುಕುತೊರೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಡಾ.ಹೆಚ್.ಸಿ.ಮಹದೇವಪ್ಪ

ತಿ.ನರಸೀಪುರ : ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು…

2 hours ago

ಬಹುರೂಪಿ ಬಾಬಾ ಸಾಹೇಬ್‌ | ಜ.11 ರಿಂದ 18ರವರೆಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು‌…

2 hours ago

ಹೊಸ ವರ್ಷಾಚರಣೆ ಸಂಭ್ರಮ : ಅಹಿತಕರ ಘಟನೆ ತಡೆಗೆ ಸಿಎಂ ಸೂಚನೆ

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

5 hours ago