ಚಿತ್ರ ಮಂಜರಿ

ಸೀತೆಯಾಗಿ ಸಾಯಿ ಪಲ್ಲವಿ ಬಾಲಿವುಡ್ ಗೆ ಎಂಟ್ರಿ?

ಸಾಯಿ ಪಲ್ಲವಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನುವ ಮಾಹಿತಿ ಇದೆ. ಈ ಹಿಂದೆ ಈ ಪಾತ್ರಕ್ಕೆ ದೀಪಿಕಾ ಪಡುಕೋಣೆ ಹಾಗೂ ಕರೀನಾ ಕಪೂರ್ ಹೆಸರು ಕೇಳಿಬಂದಿತ್ತು. ಆದರೆ ಚಿತ್ರ ನಿರ್ಮಾಪಕರು ಸಾಯಿ ಪಲ್ಲವಿ ಅವರನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಸೌತ್​ ಸೂಪರ್​ ಸ್ಟಾರ್​ ಸಾಯಿ ಪಲ್ಲವಿ ತಮ್ಮ ಅದ್ಭುತ ಅಭಿನಯದಿಂದ ದೊಡ್ಡ ಹೆಸರು ಮಾಡಿದ್ದಾರೆ. ದಕ್ಷಿಣ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಮಿಂಚುತ್ತಿದ್ದಾರೆ. ಆಯ್ದ ಚಿತ್ರಗಳಲ್ಲಿ ಅದ್ಭುತವಾಗಿ ಅಭಿನಯಿಸುವ ಮೂಲಕ ಯುವಜನತೆ ಮಾತ್ರವಲ್ಲದೇ ಎಲ್ಲ ವರ್ಗದ ಪ್ರೇಕ್ಷಕರನ್ನೂ ತಲುಪಿದ್ದಾರೆ. ಇದೀಗ ಈ ಬ್ಯೂಟಿಫುಲ್ ನಟಿಯ ಮುಂದಿನ ಸಿನಿಮಾಗೆ ಸಂಬಂಧಿಸಿದ ಸುದ್ದಿಯೊಂದು ಸಖತ್ ವೈರಲ್ ಆಗಿದೆ. ಸಾಯಿ ಪಲ್ಲವಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರಂತೆ.
ಬಾಲಿವುಡ್​​ ಹೀರೋ ರಣ್​​ಬೀರ್ ಕಪೂರ್ ಜೊತೆ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ. ರಣಬೀರ್ ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಂಡರೆ, ಸಾಯಿ ಪಲ್ಲವಿ ಸೀತೆಯಾಗಿ ಪಾತ್ರ ವಹಿಸಲಿದ್ದಾರೆ. ಈ ಹಿಂದೆ ಈ ಪಾತ್ರಕ್ಕೆ ದೀಪಿಕಾ ಪಡುಕೋಣೆ ಹಾಗೂ ಕರೀನಾ ಕಪೂರ್ ಹೆಸರು ಕೇಳಿ ಬಂದಿತ್ತು. ಆದರೆ ಚಿತ್ರ ನಿರ್ಮಾಪಕರು ಸಾಯಿ ಪಲ್ಲವಿ ಅವರನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ.ಇನ್ನೂ ಹೃತಿಕ್ ರೋಷನ್ ಈ ಸಿನಿಮಾದಲ್ಲಿ ರಾವಣನ ಪಾತ್ರ ಮಾಡಲಿದ್ದಾರೆ. ರಾಮಾಯಣ ಆಧಾರಿತ ಈ ಸಿನಿಮಾದ ಚಿತ್ರೀಕರಣ ಮುಂದಿನ ವರ್ಷ ಆರಂಭವಾಗಲಿದ್ದು, ಈ ಯೋಜನೆಯ ಅಧಿಕೃತ ವಿವರಗಳು ಶೀಘ್ರದಲ್ಲೇ ಬಹಿರಂಗಗೊಳ್ಳಲಿವೆ.

andolanait

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

2 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

2 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

4 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

4 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

4 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

4 hours ago