ಚಿತ್ರ ಮಂಜರಿ

ಸೀತೆಯಾಗಿ ಸಾಯಿ ಪಲ್ಲವಿ ಬಾಲಿವುಡ್ ಗೆ ಎಂಟ್ರಿ?

ಸಾಯಿ ಪಲ್ಲವಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನುವ ಮಾಹಿತಿ ಇದೆ. ಈ ಹಿಂದೆ ಈ ಪಾತ್ರಕ್ಕೆ ದೀಪಿಕಾ ಪಡುಕೋಣೆ ಹಾಗೂ ಕರೀನಾ ಕಪೂರ್ ಹೆಸರು ಕೇಳಿಬಂದಿತ್ತು. ಆದರೆ ಚಿತ್ರ ನಿರ್ಮಾಪಕರು ಸಾಯಿ ಪಲ್ಲವಿ ಅವರನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಸೌತ್​ ಸೂಪರ್​ ಸ್ಟಾರ್​ ಸಾಯಿ ಪಲ್ಲವಿ ತಮ್ಮ ಅದ್ಭುತ ಅಭಿನಯದಿಂದ ದೊಡ್ಡ ಹೆಸರು ಮಾಡಿದ್ದಾರೆ. ದಕ್ಷಿಣ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಮಿಂಚುತ್ತಿದ್ದಾರೆ. ಆಯ್ದ ಚಿತ್ರಗಳಲ್ಲಿ ಅದ್ಭುತವಾಗಿ ಅಭಿನಯಿಸುವ ಮೂಲಕ ಯುವಜನತೆ ಮಾತ್ರವಲ್ಲದೇ ಎಲ್ಲ ವರ್ಗದ ಪ್ರೇಕ್ಷಕರನ್ನೂ ತಲುಪಿದ್ದಾರೆ. ಇದೀಗ ಈ ಬ್ಯೂಟಿಫುಲ್ ನಟಿಯ ಮುಂದಿನ ಸಿನಿಮಾಗೆ ಸಂಬಂಧಿಸಿದ ಸುದ್ದಿಯೊಂದು ಸಖತ್ ವೈರಲ್ ಆಗಿದೆ. ಸಾಯಿ ಪಲ್ಲವಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರಂತೆ.
ಬಾಲಿವುಡ್​​ ಹೀರೋ ರಣ್​​ಬೀರ್ ಕಪೂರ್ ಜೊತೆ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ. ರಣಬೀರ್ ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಂಡರೆ, ಸಾಯಿ ಪಲ್ಲವಿ ಸೀತೆಯಾಗಿ ಪಾತ್ರ ವಹಿಸಲಿದ್ದಾರೆ. ಈ ಹಿಂದೆ ಈ ಪಾತ್ರಕ್ಕೆ ದೀಪಿಕಾ ಪಡುಕೋಣೆ ಹಾಗೂ ಕರೀನಾ ಕಪೂರ್ ಹೆಸರು ಕೇಳಿ ಬಂದಿತ್ತು. ಆದರೆ ಚಿತ್ರ ನಿರ್ಮಾಪಕರು ಸಾಯಿ ಪಲ್ಲವಿ ಅವರನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ.ಇನ್ನೂ ಹೃತಿಕ್ ರೋಷನ್ ಈ ಸಿನಿಮಾದಲ್ಲಿ ರಾವಣನ ಪಾತ್ರ ಮಾಡಲಿದ್ದಾರೆ. ರಾಮಾಯಣ ಆಧಾರಿತ ಈ ಸಿನಿಮಾದ ಚಿತ್ರೀಕರಣ ಮುಂದಿನ ವರ್ಷ ಆರಂಭವಾಗಲಿದ್ದು, ಈ ಯೋಜನೆಯ ಅಧಿಕೃತ ವಿವರಗಳು ಶೀಘ್ರದಲ್ಲೇ ಬಹಿರಂಗಗೊಳ್ಳಲಿವೆ.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

5 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

11 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

12 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

12 hours ago