ಚಿತ್ರ ಮಂಜರಿ

ಹಿರಿಯ ನಟ ಮನದೀಪ್‌ ರಾಯ್‌ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಸ್ಯಾಂಡಲ್‌ವುಡ್‌ನ ಹಿರಿಯ ನಟ ಮನ್​ದೀಪ್​ ರಾಯ್​ ಅವರಿಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆಯೇ ಹೃದಯಾಘಾತ ಸಂಭವಿಸಿದ್ದು ಬೆಂಗಳೂರಿನ ಶೇಷಾದ್ರಿಪುರನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಮನ್​ದೀಪ್​ ರಾಯ್ ಆರೋಗ್ಯದ ಬಗ್ಗೆ ಇನ್ನೂ  ಆಸ್ಪತ್ರೆಯಿಂದ ಯಾವುದೇ ಮಾಹಿತಿ ಬಂದಿಲ್ಲ. ಮಧ್ಯಾಹ್ನ ಹೆಲ್ತ್ ಬುಲೇಟಿನ್ ರಿಲೀಸ್ ಮಾಡುವ ಸಾಧ್ಯತೆ ಇದೆ.

‘ಮನ್‌ದೀಪ್ ರಾಯ್ ಕಂಡೀಷನ್ ಸ್ಟೇಬಲ್ ಆಗಿದೆ. ಮಧ್ಯಾಹ್ನದ ನಂತರ ಪ್ರೇಸ್ ನೋಟ್ ರಿಲೀಸ್ ಮಾಡಲಾಗುತ್ತೆ.  ಸ್ಕ್ಯಾನಿಂಗ್ ಸೇರಿದಂತೆ ಎಲ್ಲವನ್ನೂ ಮಾಡಿದ್ದೇವೆ. ಬೇಕಾದ ಚಿಕಿತ್ಸೆಯನ್ನೂ ನೀಡುತ್ತಿದ್ದೀವಿ’ ಎಂದು ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಕನ್ನಡದ ಹಿರಿಯ ನಟ ಮನ್‌ದೀಪ್ 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಇಂದು ಅವರ ಚಿಕಿತ್ಸೆಗೆ ಹಣಕಾಸಿನ ಸಮಸ್ಯೆ ಎದುರಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಆರ್ಥಿಕ ನೆರವಿನ ಅವಶ್ಯಕತೆ ಇದೆ ಎನ್ನಲಾಗಿದೆ. ಮನ್​ದೀಪ್​ ರಾಯ್​ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅಭಿಮಾನಿಗಳು, ಸ್ನೇಹಿತರು ಸೇರಿದಂತೆ ಅನೇಕರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿರುವ ಮನ್‌ದೀಪ್ ಅವರು ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ದಶಕಗಳಿಂದ ಹಾಸ್ಯ ಕಲಾವಿದರಾಗಿ ಮಿಂಚಿರುವ ಮನದೀಪ್ ರಾಯ್, ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು. ಶಂಕರ್ ನಾಗ್ ಅವರ ಮಾಲ್ಗುಡಿ ಡೇಸ್ ಧಾರಾವಾಹಿಯಲ್ಲಿ ಮನ್ ದೀಪ್ ರಾಯ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಮಿಂಚಿನ ಓಟ , ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ, ಆಂಟಿ ಪ್ರೀತ್ಸೆ , ಪ್ರೀತ್ಸೋದ್ ತಪ್ಪ, ಖುಷಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣು ವರ್ಧನ್ ಸೇರಿದಂತೆ ಬಹುತೇಕ ಎಲ್ಲಾ ದಿಗ್ಗಜರ ಜೊತೆಯೂ ನಟಿಸಿರುವ ಹೆಗ್ಗಳಿಕೆ ಇವರದ್ದು.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago