ಚಿತ್ರ ಮಂಜರಿ

ಹಿರಿಯ ನಟ ಮನದೀಪ್‌ ರಾಯ್‌ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಸ್ಯಾಂಡಲ್‌ವುಡ್‌ನ ಹಿರಿಯ ನಟ ಮನ್​ದೀಪ್​ ರಾಯ್​ ಅವರಿಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆಯೇ ಹೃದಯಾಘಾತ ಸಂಭವಿಸಿದ್ದು ಬೆಂಗಳೂರಿನ ಶೇಷಾದ್ರಿಪುರನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಮನ್​ದೀಪ್​ ರಾಯ್ ಆರೋಗ್ಯದ ಬಗ್ಗೆ ಇನ್ನೂ  ಆಸ್ಪತ್ರೆಯಿಂದ ಯಾವುದೇ ಮಾಹಿತಿ ಬಂದಿಲ್ಲ. ಮಧ್ಯಾಹ್ನ ಹೆಲ್ತ್ ಬುಲೇಟಿನ್ ರಿಲೀಸ್ ಮಾಡುವ ಸಾಧ್ಯತೆ ಇದೆ.

‘ಮನ್‌ದೀಪ್ ರಾಯ್ ಕಂಡೀಷನ್ ಸ್ಟೇಬಲ್ ಆಗಿದೆ. ಮಧ್ಯಾಹ್ನದ ನಂತರ ಪ್ರೇಸ್ ನೋಟ್ ರಿಲೀಸ್ ಮಾಡಲಾಗುತ್ತೆ.  ಸ್ಕ್ಯಾನಿಂಗ್ ಸೇರಿದಂತೆ ಎಲ್ಲವನ್ನೂ ಮಾಡಿದ್ದೇವೆ. ಬೇಕಾದ ಚಿಕಿತ್ಸೆಯನ್ನೂ ನೀಡುತ್ತಿದ್ದೀವಿ’ ಎಂದು ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಕನ್ನಡದ ಹಿರಿಯ ನಟ ಮನ್‌ದೀಪ್ 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಇಂದು ಅವರ ಚಿಕಿತ್ಸೆಗೆ ಹಣಕಾಸಿನ ಸಮಸ್ಯೆ ಎದುರಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಆರ್ಥಿಕ ನೆರವಿನ ಅವಶ್ಯಕತೆ ಇದೆ ಎನ್ನಲಾಗಿದೆ. ಮನ್​ದೀಪ್​ ರಾಯ್​ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅಭಿಮಾನಿಗಳು, ಸ್ನೇಹಿತರು ಸೇರಿದಂತೆ ಅನೇಕರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿರುವ ಮನ್‌ದೀಪ್ ಅವರು ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ದಶಕಗಳಿಂದ ಹಾಸ್ಯ ಕಲಾವಿದರಾಗಿ ಮಿಂಚಿರುವ ಮನದೀಪ್ ರಾಯ್, ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು. ಶಂಕರ್ ನಾಗ್ ಅವರ ಮಾಲ್ಗುಡಿ ಡೇಸ್ ಧಾರಾವಾಹಿಯಲ್ಲಿ ಮನ್ ದೀಪ್ ರಾಯ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಮಿಂಚಿನ ಓಟ , ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ, ಆಂಟಿ ಪ್ರೀತ್ಸೆ , ಪ್ರೀತ್ಸೋದ್ ತಪ್ಪ, ಖುಷಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣು ವರ್ಧನ್ ಸೇರಿದಂತೆ ಬಹುತೇಕ ಎಲ್ಲಾ ದಿಗ್ಗಜರ ಜೊತೆಯೂ ನಟಿಸಿರುವ ಹೆಗ್ಗಳಿಕೆ ಇವರದ್ದು.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago