ನವದೆಹಲಿ : ಬಹುಭಾಷಾ ನಟ ಪ್ರಭು ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಅವರನ್ನು ಚೆನ್ನೈನ ಮೆಡ್ವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರಗಳಲ್ಲಿ ನಟ ಪ್ರಭು ನಟಿಸಿದ್ದಾರೆ. ನಟ, ಪೋಷಕ ನಟನಾಗಿ ಪ್ರಭು ಛಾಪು ಮೂಡಿಸಿದ್ದಾರೆ. ಖ್ಯಾತ ನಟ ಶಿವಾಜಿ ಗಣೇಶನ್ ಪುತ್ರ ಪ್ರಭು ಅವರು ಇದೀಗ ಅನಾರೋಗ್ಯದಿಂದ ಬಳಲುತ್ತಿದ್ದಾರೆ.
ಚೆನ್ನೈನ ಮೆಡ್ವೇ ಆಸ್ಪತ್ರೆಗೆ ದಾಖಲಾಗಿರುವ ನಟ ಪ್ರಭು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಪಾಸಣೆಯ ಬಳಿಕ ಕಿಡ್ನಿಯಲ್ಲಿ ಕಲ್ಲು ಇರುವುದು ಪತ್ತೆಯಾಗಿದೆ. ಪ್ರಭು ಅವರನ್ನು ಶಸ್ತ್ರಚಿಕಿತ್ಸೆಗೆ ಕಳುಹಿಸಲಾಗಿದೆ. ಅವರಿಗೆ ಲೇಸರ್ ಎಂಡೋಸ್ಕೋಪಿ ಸಹ ಮಾಡಲಾಗಿದ್ದು, ಇದೀಗ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಆಸ್ಪತ್ರೆಯ ಹೆಲ್ತ್ ಅಪ್ಡೇಟ್ ಬಂದಿದೆ.
ಶಸ್ತ್ರಚಿಕಿತ್ಸೆಯ ಬಳಿಕ ಅವರು ಕೆಲ ದಿನಗಳ ಕಾಲ ವಿಶ್ರಾಂತಿಯನ್ನ ಪಡೆಯಲಿದ್ದಾರೆ. ಒಂದೆರಡು ದಿನಗಳಲ್ಲಿ ನಟ ಪ್ರಭು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್ಒ ಹುದ್ದೆಗೆ ಡಿಎಚ್ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…