ನವದೆಹಲಿ : ಬಹುಭಾಷಾ ನಟ ಪ್ರಭು ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಅವರನ್ನು ಚೆನ್ನೈನ ಮೆಡ್ವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರಗಳಲ್ಲಿ ನಟ ಪ್ರಭು ನಟಿಸಿದ್ದಾರೆ. ನಟ, ಪೋಷಕ ನಟನಾಗಿ ಪ್ರಭು ಛಾಪು ಮೂಡಿಸಿದ್ದಾರೆ. ಖ್ಯಾತ ನಟ ಶಿವಾಜಿ ಗಣೇಶನ್ ಪುತ್ರ ಪ್ರಭು ಅವರು ಇದೀಗ ಅನಾರೋಗ್ಯದಿಂದ ಬಳಲುತ್ತಿದ್ದಾರೆ.
ಚೆನ್ನೈನ ಮೆಡ್ವೇ ಆಸ್ಪತ್ರೆಗೆ ದಾಖಲಾಗಿರುವ ನಟ ಪ್ರಭು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಪಾಸಣೆಯ ಬಳಿಕ ಕಿಡ್ನಿಯಲ್ಲಿ ಕಲ್ಲು ಇರುವುದು ಪತ್ತೆಯಾಗಿದೆ. ಪ್ರಭು ಅವರನ್ನು ಶಸ್ತ್ರಚಿಕಿತ್ಸೆಗೆ ಕಳುಹಿಸಲಾಗಿದೆ. ಅವರಿಗೆ ಲೇಸರ್ ಎಂಡೋಸ್ಕೋಪಿ ಸಹ ಮಾಡಲಾಗಿದ್ದು, ಇದೀಗ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಆಸ್ಪತ್ರೆಯ ಹೆಲ್ತ್ ಅಪ್ಡೇಟ್ ಬಂದಿದೆ.
ಶಸ್ತ್ರಚಿಕಿತ್ಸೆಯ ಬಳಿಕ ಅವರು ಕೆಲ ದಿನಗಳ ಕಾಲ ವಿಶ್ರಾಂತಿಯನ್ನ ಪಡೆಯಲಿದ್ದಾರೆ. ಒಂದೆರಡು ದಿನಗಳಲ್ಲಿ ನಟ ಪ್ರಭು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…