ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಭಗವಾನ್ ಅವರು ಇಂದು (ಡಿ. 5) ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಯ ICUನಲ್ಲಿ ಭಗವಾನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಭಗವಾನ್ ಅವರಿಗೆ 89 ವರ್ಷ. ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್ ಅಂದರೆ ನಮಗೆ ಅಷ್ಟು ಬೇಗ ಯಾರು ಅಂತ ಗೊತ್ತಾಗುವುದಿಲ್ಲ. ಚಿತ್ರರಂಗದಲ್ಲಿ ಇವರು ಭಗವಾನ್ ಎಂದೇ ಪ್ರಸಿದ್ಧರು. ಕನ್ನಡ ಚಿತ್ರರಂಗದಲ್ಲಿ ಖ್ಯಾತ ನಿರ್ದೇಶಕರಾಗಿ, ನಿರ್ಮಾಪಕರಾಗಿ ಮತ್ತು ನಟರಾಗಿಯೂ ಇವರು ಗುರುತಿಸಿಕೊಂಡಿದ್ದಾರೆ. ತಮ್ಮ ಹದಿಹರಿಯದ ವಯಸ್ಸಿಲ್ಲಿ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಬಳಿಕ 1956 ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರೀ ಅವರಿಗೆ ಸಹಾಯಕರಾಗಿ ಚಿತ್ರರಂಗ ಪ್ರವೇಶಿಸಿದರು. ನಂತರ 1966 ರಲ್ಲಿ ತೆರೆಕಂಡ ‘ಸಂಧ್ಯಾರಾಗ’ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾದರು. ಬಳಿಕ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರರಾಗಿ ಚಿತ್ರನಿರ್ದೇಶಿಸಲು ಪ್ರಾರಂಭಿಸಿದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…