ಚಿತ್ರ ಮಂಜರಿ

ಗಣೇಶ ಹಬ್ಬ ಆಚರಿಸಿ ಸಂಭ್ರಮಿಸಿದ ಶಾರುಖ್‌ ಕುಟುಂಬ

ಮುಂಬೈ: ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಗಣೇಶನನ್ನು ಕೂರಿಸಿ ಅದ್ದೂರಿಯಾಗಿ ಪೂಜಿಸಿ ಭಕ್ತಿಯಿಂದ ಆರಾಧಿಸುತ್ತಿದ್ದಾರೆ. ಸಿನಿಮಾ ಸೆಲೆಬ್ರಿಟಿಗಳು ಕೂಡ ಅದ್ದೂರಿಯಾಗಿ ಗಣೇಶ ಹಬ್ಬವನ್ನುುಆಚರಿಸಿದ್ದಾರೆ. ಬಾಲಿವುಡ್‌ನಲ್ಲಿ ಜಾತಿ, ಧರ್ಮ ಭೇದವಿಲ್ಲದೇ ಹಬ್ಬವನ್ನು ಆಚರಣೆ ಮಾಡುತ್ತಾರೆ. ಬಾಲಿವುಡ್ ಖಾನ್‌ಗಳು ಸಹ ಅದ್ದೂರಿಯಾಗಿ ಗಣೇಶ ಹಬ್ಬವನ್ನು ಆಚರಣೆ ಮಾಡುತ್ತಾರೆ. ಶಾರುಖ್ ಖಾನ್ ಮನೆಯಲ್ಲೂ ಗಣೇಶ ಚತುರ್ಥಿ ಸಂಭ್ರಮ ಜೋರಾಗಿತ್ತು. ಅವರ ಮುಂಬೈ ನಿವಾಸ ಮನ್ನತ್​ನಲ್ಲಿ ಗಣೇಶ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಹಬ್ಬದ ಸಂಭ್ರಮದ ಕಾರಣ ಶೂಟಿಂಗ್​ ಕೆಲಸಗಳಿಗೆ ಶಾರುಖ್ ಖಾನ್ ಬ್ರೇಕ್​ ನೀಡಿದ್ದಾರೆ. ಕುಟುಂಬದ ಜೊತೆ ಸೇರಿ ಹಬ್ಬ ಆಚರಿಸಿದ್ದಾರೆ. ಮನ್ನತ್ ಸಿನಿಮಾದಲ್ಲಿ ಗಣೇಶ ಹಬ್ಬದ ಸಂಭ್ರಮದ ಫೋಟೋಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಗಣಪತಿಯ ಫೋಟೋ ಶೇರ್ ಮಾಡಿ ಮೋದಕದ ಬಗ್ಗೆ ಬರೆದುಕೊಂಡಿದ್ದಾರೆ. ‘ಮನೆಗೆ ಗಣಪತಿಯನ್ನು ಸ್ವಾಗತಿಸಲಾಗಿದೆ. ನಂತರ ಸವಿದ ಮೋದಕ ತುಂಬ ರುಚಿಕರವಾಗಿತ್ತು. ಪರಿಶ್ರಮ ಮತ್ತು ದೇವರ ಮೇಲಿನ ನಂಬಿಕೆಯಿಂದ ನಾವು ನಮ್ಮ ಕನಸನ್ನು ನನಸು ಮಾಡಿಕೊಳ್ಳಬಹುದು. ಎಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು’ ಎಂದು ಶಾರುಖ್​ ಖಾನ್​ ಪೋಸ್ಟ್​ ಮಾಡಿದ್ದಾರೆ. ತಮ್ಮ ಮನೆಯಲ್ಲಿ ಕೂರಿಸಿದ ಗಣೇಶನ ಫೋಟೋವನ್ನು ಹಂಚಿಕೊಂಡಿದ್ದಾರೆ.

ಅಂದಹಾಗೆ ಶಾರುಖ್ ಖಾನ್ ಮನೆಯಲ್ಲಿ ಪ್ರತಿವರ್ಷ ಗಣೇಶ ಹಬ್ಬವನ್ನು ಆಚರಿಸುತ್ತಾರೆ. ಮುಸ್ಲಿಂ ಆಗಿದ್ದರೂ ಹಿಂದು ಹಬ್ಬವನ್ನು ಆಚರಿಸುವ ಶಾರುಖ್ ಖಾನ್ ಕುಟುಂಬಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಶಾರುಖ್ ಮನೆಯ ಗಣಪತಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. 8 ಲಕ್ಷಕ್ಕೂ ಅಧಿಕ ಮಂದಿ ಇದನ್ನು ಲೈಕ್​ ಮಾಡಿದ್ದಾರೆ. 11 ಸಾವಿರಕ್ಕೂ ಹೆಚ್ಚು ಕಮೆಂಟ್​ಗಳು ಬಂದಿವೆ. ಶಾರುಖ್​ ಖಾನ್​ ಅವರು ಎಲ್ಲ ಧರ್ಮವನ್ನು ಗೌರವಿಸುವಂತಹ ವ್ಯಕ್ತಿ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಎಲ್ಲರೂ ಗಣೇಶ ಚತುರ್ಥಿ ಹಬ್ಬದ ಶುಭಾಶಯ ಕೋರಿದ್ದಾರೆ.

ಇನ್ನು ಬಾಲಿವುಡ್‌ನಲ್ಲಿ ಶಾರುಖ್​ ಖಾನ್​ ಮಾತ್ರವಲ್ಲದೇ ಆಲಿಯಾ ಭಟ್​, ಶಿಲ್ಪಾ ಶೆಟ್ಟಿ, ಅಮಿತಾಭ್​ ಬಚ್ಚನ್​, ಶ್ರದ್ಧಾ ಕಪೂರ್​ ಸೇರಿದಂತೆ ಎಲ್ಲ ಸೆಲೆಬ್ರಿಟಿಗಳ ಮನೆಯಲ್ಲೂ ಗಣೇಶ ಚತುರ್ಥಿಯನ್ನು ಸಡಗರದಿಂದ ಆಚರಿಸಲಾಗಿದೆ. ಶಿಲ್ಪಾ ಶೆಟ್ಟಿ ಮನೆಯಲ್ಲೂ ಅದ್ದೂರಿಯಾಗಿ ಗಣೇಶ ಹಬ್ಬ ಸಂಭ್ರಮಿಸು್ತಾರೆ. ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಖಾನ್ ಮನೆಯಲ್ಲೂ ಅದ್ದೂರಿಯಾಗಿ ಗಣೇಶ ಹಬ್ಬ ಆಚರಿಸಲಾಗತ್ತೆ. ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಅರ್ಪಿತಾ ಖಾನ್ ಮನೆಯ ಗಣೇಶ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದರು.

 

 

andolana

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

8 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

8 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

8 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

9 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

9 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

9 hours ago