ಚಿತ್ರ ಮಂಜರಿ

ಗಣೇಶ ಹಬ್ಬ ಆಚರಿಸಿ ಸಂಭ್ರಮಿಸಿದ ಶಾರುಖ್‌ ಕುಟುಂಬ

ಮುಂಬೈ: ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಗಣೇಶನನ್ನು ಕೂರಿಸಿ ಅದ್ದೂರಿಯಾಗಿ ಪೂಜಿಸಿ ಭಕ್ತಿಯಿಂದ ಆರಾಧಿಸುತ್ತಿದ್ದಾರೆ. ಸಿನಿಮಾ ಸೆಲೆಬ್ರಿಟಿಗಳು ಕೂಡ ಅದ್ದೂರಿಯಾಗಿ ಗಣೇಶ ಹಬ್ಬವನ್ನುುಆಚರಿಸಿದ್ದಾರೆ. ಬಾಲಿವುಡ್‌ನಲ್ಲಿ ಜಾತಿ, ಧರ್ಮ ಭೇದವಿಲ್ಲದೇ ಹಬ್ಬವನ್ನು ಆಚರಣೆ ಮಾಡುತ್ತಾರೆ. ಬಾಲಿವುಡ್ ಖಾನ್‌ಗಳು ಸಹ ಅದ್ದೂರಿಯಾಗಿ ಗಣೇಶ ಹಬ್ಬವನ್ನು ಆಚರಣೆ ಮಾಡುತ್ತಾರೆ. ಶಾರುಖ್ ಖಾನ್ ಮನೆಯಲ್ಲೂ ಗಣೇಶ ಚತುರ್ಥಿ ಸಂಭ್ರಮ ಜೋರಾಗಿತ್ತು. ಅವರ ಮುಂಬೈ ನಿವಾಸ ಮನ್ನತ್​ನಲ್ಲಿ ಗಣೇಶ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಹಬ್ಬದ ಸಂಭ್ರಮದ ಕಾರಣ ಶೂಟಿಂಗ್​ ಕೆಲಸಗಳಿಗೆ ಶಾರುಖ್ ಖಾನ್ ಬ್ರೇಕ್​ ನೀಡಿದ್ದಾರೆ. ಕುಟುಂಬದ ಜೊತೆ ಸೇರಿ ಹಬ್ಬ ಆಚರಿಸಿದ್ದಾರೆ. ಮನ್ನತ್ ಸಿನಿಮಾದಲ್ಲಿ ಗಣೇಶ ಹಬ್ಬದ ಸಂಭ್ರಮದ ಫೋಟೋಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಗಣಪತಿಯ ಫೋಟೋ ಶೇರ್ ಮಾಡಿ ಮೋದಕದ ಬಗ್ಗೆ ಬರೆದುಕೊಂಡಿದ್ದಾರೆ. ‘ಮನೆಗೆ ಗಣಪತಿಯನ್ನು ಸ್ವಾಗತಿಸಲಾಗಿದೆ. ನಂತರ ಸವಿದ ಮೋದಕ ತುಂಬ ರುಚಿಕರವಾಗಿತ್ತು. ಪರಿಶ್ರಮ ಮತ್ತು ದೇವರ ಮೇಲಿನ ನಂಬಿಕೆಯಿಂದ ನಾವು ನಮ್ಮ ಕನಸನ್ನು ನನಸು ಮಾಡಿಕೊಳ್ಳಬಹುದು. ಎಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು’ ಎಂದು ಶಾರುಖ್​ ಖಾನ್​ ಪೋಸ್ಟ್​ ಮಾಡಿದ್ದಾರೆ. ತಮ್ಮ ಮನೆಯಲ್ಲಿ ಕೂರಿಸಿದ ಗಣೇಶನ ಫೋಟೋವನ್ನು ಹಂಚಿಕೊಂಡಿದ್ದಾರೆ.

ಅಂದಹಾಗೆ ಶಾರುಖ್ ಖಾನ್ ಮನೆಯಲ್ಲಿ ಪ್ರತಿವರ್ಷ ಗಣೇಶ ಹಬ್ಬವನ್ನು ಆಚರಿಸುತ್ತಾರೆ. ಮುಸ್ಲಿಂ ಆಗಿದ್ದರೂ ಹಿಂದು ಹಬ್ಬವನ್ನು ಆಚರಿಸುವ ಶಾರುಖ್ ಖಾನ್ ಕುಟುಂಬಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಶಾರುಖ್ ಮನೆಯ ಗಣಪತಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. 8 ಲಕ್ಷಕ್ಕೂ ಅಧಿಕ ಮಂದಿ ಇದನ್ನು ಲೈಕ್​ ಮಾಡಿದ್ದಾರೆ. 11 ಸಾವಿರಕ್ಕೂ ಹೆಚ್ಚು ಕಮೆಂಟ್​ಗಳು ಬಂದಿವೆ. ಶಾರುಖ್​ ಖಾನ್​ ಅವರು ಎಲ್ಲ ಧರ್ಮವನ್ನು ಗೌರವಿಸುವಂತಹ ವ್ಯಕ್ತಿ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಎಲ್ಲರೂ ಗಣೇಶ ಚತುರ್ಥಿ ಹಬ್ಬದ ಶುಭಾಶಯ ಕೋರಿದ್ದಾರೆ.

ಇನ್ನು ಬಾಲಿವುಡ್‌ನಲ್ಲಿ ಶಾರುಖ್​ ಖಾನ್​ ಮಾತ್ರವಲ್ಲದೇ ಆಲಿಯಾ ಭಟ್​, ಶಿಲ್ಪಾ ಶೆಟ್ಟಿ, ಅಮಿತಾಭ್​ ಬಚ್ಚನ್​, ಶ್ರದ್ಧಾ ಕಪೂರ್​ ಸೇರಿದಂತೆ ಎಲ್ಲ ಸೆಲೆಬ್ರಿಟಿಗಳ ಮನೆಯಲ್ಲೂ ಗಣೇಶ ಚತುರ್ಥಿಯನ್ನು ಸಡಗರದಿಂದ ಆಚರಿಸಲಾಗಿದೆ. ಶಿಲ್ಪಾ ಶೆಟ್ಟಿ ಮನೆಯಲ್ಲೂ ಅದ್ದೂರಿಯಾಗಿ ಗಣೇಶ ಹಬ್ಬ ಸಂಭ್ರಮಿಸು್ತಾರೆ. ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಖಾನ್ ಮನೆಯಲ್ಲೂ ಅದ್ದೂರಿಯಾಗಿ ಗಣೇಶ ಹಬ್ಬ ಆಚರಿಸಲಾಗತ್ತೆ. ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಅರ್ಪಿತಾ ಖಾನ್ ಮನೆಯ ಗಣೇಶ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದರು.

 

 

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago