ಚಿತ್ರ ಮಂಜರಿ

ಗಣೇಶ ಹಬ್ಬ ಆಚರಿಸಿ ಸಂಭ್ರಮಿಸಿದ ಶಾರುಖ್‌ ಕುಟುಂಬ

ಮುಂಬೈ: ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಗಣೇಶನನ್ನು ಕೂರಿಸಿ ಅದ್ದೂರಿಯಾಗಿ ಪೂಜಿಸಿ ಭಕ್ತಿಯಿಂದ ಆರಾಧಿಸುತ್ತಿದ್ದಾರೆ. ಸಿನಿಮಾ ಸೆಲೆಬ್ರಿಟಿಗಳು ಕೂಡ ಅದ್ದೂರಿಯಾಗಿ ಗಣೇಶ ಹಬ್ಬವನ್ನುುಆಚರಿಸಿದ್ದಾರೆ. ಬಾಲಿವುಡ್‌ನಲ್ಲಿ ಜಾತಿ, ಧರ್ಮ ಭೇದವಿಲ್ಲದೇ ಹಬ್ಬವನ್ನು ಆಚರಣೆ ಮಾಡುತ್ತಾರೆ. ಬಾಲಿವುಡ್ ಖಾನ್‌ಗಳು ಸಹ ಅದ್ದೂರಿಯಾಗಿ ಗಣೇಶ ಹಬ್ಬವನ್ನು ಆಚರಣೆ ಮಾಡುತ್ತಾರೆ. ಶಾರುಖ್ ಖಾನ್ ಮನೆಯಲ್ಲೂ ಗಣೇಶ ಚತುರ್ಥಿ ಸಂಭ್ರಮ ಜೋರಾಗಿತ್ತು. ಅವರ ಮುಂಬೈ ನಿವಾಸ ಮನ್ನತ್​ನಲ್ಲಿ ಗಣೇಶ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಹಬ್ಬದ ಸಂಭ್ರಮದ ಕಾರಣ ಶೂಟಿಂಗ್​ ಕೆಲಸಗಳಿಗೆ ಶಾರುಖ್ ಖಾನ್ ಬ್ರೇಕ್​ ನೀಡಿದ್ದಾರೆ. ಕುಟುಂಬದ ಜೊತೆ ಸೇರಿ ಹಬ್ಬ ಆಚರಿಸಿದ್ದಾರೆ. ಮನ್ನತ್ ಸಿನಿಮಾದಲ್ಲಿ ಗಣೇಶ ಹಬ್ಬದ ಸಂಭ್ರಮದ ಫೋಟೋಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಗಣಪತಿಯ ಫೋಟೋ ಶೇರ್ ಮಾಡಿ ಮೋದಕದ ಬಗ್ಗೆ ಬರೆದುಕೊಂಡಿದ್ದಾರೆ. ‘ಮನೆಗೆ ಗಣಪತಿಯನ್ನು ಸ್ವಾಗತಿಸಲಾಗಿದೆ. ನಂತರ ಸವಿದ ಮೋದಕ ತುಂಬ ರುಚಿಕರವಾಗಿತ್ತು. ಪರಿಶ್ರಮ ಮತ್ತು ದೇವರ ಮೇಲಿನ ನಂಬಿಕೆಯಿಂದ ನಾವು ನಮ್ಮ ಕನಸನ್ನು ನನಸು ಮಾಡಿಕೊಳ್ಳಬಹುದು. ಎಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು’ ಎಂದು ಶಾರುಖ್​ ಖಾನ್​ ಪೋಸ್ಟ್​ ಮಾಡಿದ್ದಾರೆ. ತಮ್ಮ ಮನೆಯಲ್ಲಿ ಕೂರಿಸಿದ ಗಣೇಶನ ಫೋಟೋವನ್ನು ಹಂಚಿಕೊಂಡಿದ್ದಾರೆ.

ಅಂದಹಾಗೆ ಶಾರುಖ್ ಖಾನ್ ಮನೆಯಲ್ಲಿ ಪ್ರತಿವರ್ಷ ಗಣೇಶ ಹಬ್ಬವನ್ನು ಆಚರಿಸುತ್ತಾರೆ. ಮುಸ್ಲಿಂ ಆಗಿದ್ದರೂ ಹಿಂದು ಹಬ್ಬವನ್ನು ಆಚರಿಸುವ ಶಾರುಖ್ ಖಾನ್ ಕುಟುಂಬಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಶಾರುಖ್ ಮನೆಯ ಗಣಪತಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. 8 ಲಕ್ಷಕ್ಕೂ ಅಧಿಕ ಮಂದಿ ಇದನ್ನು ಲೈಕ್​ ಮಾಡಿದ್ದಾರೆ. 11 ಸಾವಿರಕ್ಕೂ ಹೆಚ್ಚು ಕಮೆಂಟ್​ಗಳು ಬಂದಿವೆ. ಶಾರುಖ್​ ಖಾನ್​ ಅವರು ಎಲ್ಲ ಧರ್ಮವನ್ನು ಗೌರವಿಸುವಂತಹ ವ್ಯಕ್ತಿ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಎಲ್ಲರೂ ಗಣೇಶ ಚತುರ್ಥಿ ಹಬ್ಬದ ಶುಭಾಶಯ ಕೋರಿದ್ದಾರೆ.

ಇನ್ನು ಬಾಲಿವುಡ್‌ನಲ್ಲಿ ಶಾರುಖ್​ ಖಾನ್​ ಮಾತ್ರವಲ್ಲದೇ ಆಲಿಯಾ ಭಟ್​, ಶಿಲ್ಪಾ ಶೆಟ್ಟಿ, ಅಮಿತಾಭ್​ ಬಚ್ಚನ್​, ಶ್ರದ್ಧಾ ಕಪೂರ್​ ಸೇರಿದಂತೆ ಎಲ್ಲ ಸೆಲೆಬ್ರಿಟಿಗಳ ಮನೆಯಲ್ಲೂ ಗಣೇಶ ಚತುರ್ಥಿಯನ್ನು ಸಡಗರದಿಂದ ಆಚರಿಸಲಾಗಿದೆ. ಶಿಲ್ಪಾ ಶೆಟ್ಟಿ ಮನೆಯಲ್ಲೂ ಅದ್ದೂರಿಯಾಗಿ ಗಣೇಶ ಹಬ್ಬ ಸಂಭ್ರಮಿಸು್ತಾರೆ. ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಖಾನ್ ಮನೆಯಲ್ಲೂ ಅದ್ದೂರಿಯಾಗಿ ಗಣೇಶ ಹಬ್ಬ ಆಚರಿಸಲಾಗತ್ತೆ. ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಅರ್ಪಿತಾ ಖಾನ್ ಮನೆಯ ಗಣೇಶ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದರು.

 

 

andolana

Recent Posts

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

2 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

2 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

6 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

6 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

6 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

6 hours ago