ಚಿತ್ರ ಮಂಜರಿ

ಗಣೇಶ ಹಬ್ಬ ಆಚರಿಸಿ ಸಂಭ್ರಮಿಸಿದ ಶಾರುಖ್‌ ಕುಟುಂಬ

ಮುಂಬೈ: ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಗಣೇಶನನ್ನು ಕೂರಿಸಿ ಅದ್ದೂರಿಯಾಗಿ ಪೂಜಿಸಿ ಭಕ್ತಿಯಿಂದ ಆರಾಧಿಸುತ್ತಿದ್ದಾರೆ. ಸಿನಿಮಾ ಸೆಲೆಬ್ರಿಟಿಗಳು ಕೂಡ ಅದ್ದೂರಿಯಾಗಿ ಗಣೇಶ ಹಬ್ಬವನ್ನುುಆಚರಿಸಿದ್ದಾರೆ. ಬಾಲಿವುಡ್‌ನಲ್ಲಿ ಜಾತಿ, ಧರ್ಮ ಭೇದವಿಲ್ಲದೇ ಹಬ್ಬವನ್ನು ಆಚರಣೆ ಮಾಡುತ್ತಾರೆ. ಬಾಲಿವುಡ್ ಖಾನ್‌ಗಳು ಸಹ ಅದ್ದೂರಿಯಾಗಿ ಗಣೇಶ ಹಬ್ಬವನ್ನು ಆಚರಣೆ ಮಾಡುತ್ತಾರೆ. ಶಾರುಖ್ ಖಾನ್ ಮನೆಯಲ್ಲೂ ಗಣೇಶ ಚತುರ್ಥಿ ಸಂಭ್ರಮ ಜೋರಾಗಿತ್ತು. ಅವರ ಮುಂಬೈ ನಿವಾಸ ಮನ್ನತ್​ನಲ್ಲಿ ಗಣೇಶ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಹಬ್ಬದ ಸಂಭ್ರಮದ ಕಾರಣ ಶೂಟಿಂಗ್​ ಕೆಲಸಗಳಿಗೆ ಶಾರುಖ್ ಖಾನ್ ಬ್ರೇಕ್​ ನೀಡಿದ್ದಾರೆ. ಕುಟುಂಬದ ಜೊತೆ ಸೇರಿ ಹಬ್ಬ ಆಚರಿಸಿದ್ದಾರೆ. ಮನ್ನತ್ ಸಿನಿಮಾದಲ್ಲಿ ಗಣೇಶ ಹಬ್ಬದ ಸಂಭ್ರಮದ ಫೋಟೋಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಗಣಪತಿಯ ಫೋಟೋ ಶೇರ್ ಮಾಡಿ ಮೋದಕದ ಬಗ್ಗೆ ಬರೆದುಕೊಂಡಿದ್ದಾರೆ. ‘ಮನೆಗೆ ಗಣಪತಿಯನ್ನು ಸ್ವಾಗತಿಸಲಾಗಿದೆ. ನಂತರ ಸವಿದ ಮೋದಕ ತುಂಬ ರುಚಿಕರವಾಗಿತ್ತು. ಪರಿಶ್ರಮ ಮತ್ತು ದೇವರ ಮೇಲಿನ ನಂಬಿಕೆಯಿಂದ ನಾವು ನಮ್ಮ ಕನಸನ್ನು ನನಸು ಮಾಡಿಕೊಳ್ಳಬಹುದು. ಎಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು’ ಎಂದು ಶಾರುಖ್​ ಖಾನ್​ ಪೋಸ್ಟ್​ ಮಾಡಿದ್ದಾರೆ. ತಮ್ಮ ಮನೆಯಲ್ಲಿ ಕೂರಿಸಿದ ಗಣೇಶನ ಫೋಟೋವನ್ನು ಹಂಚಿಕೊಂಡಿದ್ದಾರೆ.

ಅಂದಹಾಗೆ ಶಾರುಖ್ ಖಾನ್ ಮನೆಯಲ್ಲಿ ಪ್ರತಿವರ್ಷ ಗಣೇಶ ಹಬ್ಬವನ್ನು ಆಚರಿಸುತ್ತಾರೆ. ಮುಸ್ಲಿಂ ಆಗಿದ್ದರೂ ಹಿಂದು ಹಬ್ಬವನ್ನು ಆಚರಿಸುವ ಶಾರುಖ್ ಖಾನ್ ಕುಟುಂಬಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಶಾರುಖ್ ಮನೆಯ ಗಣಪತಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. 8 ಲಕ್ಷಕ್ಕೂ ಅಧಿಕ ಮಂದಿ ಇದನ್ನು ಲೈಕ್​ ಮಾಡಿದ್ದಾರೆ. 11 ಸಾವಿರಕ್ಕೂ ಹೆಚ್ಚು ಕಮೆಂಟ್​ಗಳು ಬಂದಿವೆ. ಶಾರುಖ್​ ಖಾನ್​ ಅವರು ಎಲ್ಲ ಧರ್ಮವನ್ನು ಗೌರವಿಸುವಂತಹ ವ್ಯಕ್ತಿ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಎಲ್ಲರೂ ಗಣೇಶ ಚತುರ್ಥಿ ಹಬ್ಬದ ಶುಭಾಶಯ ಕೋರಿದ್ದಾರೆ.

ಇನ್ನು ಬಾಲಿವುಡ್‌ನಲ್ಲಿ ಶಾರುಖ್​ ಖಾನ್​ ಮಾತ್ರವಲ್ಲದೇ ಆಲಿಯಾ ಭಟ್​, ಶಿಲ್ಪಾ ಶೆಟ್ಟಿ, ಅಮಿತಾಭ್​ ಬಚ್ಚನ್​, ಶ್ರದ್ಧಾ ಕಪೂರ್​ ಸೇರಿದಂತೆ ಎಲ್ಲ ಸೆಲೆಬ್ರಿಟಿಗಳ ಮನೆಯಲ್ಲೂ ಗಣೇಶ ಚತುರ್ಥಿಯನ್ನು ಸಡಗರದಿಂದ ಆಚರಿಸಲಾಗಿದೆ. ಶಿಲ್ಪಾ ಶೆಟ್ಟಿ ಮನೆಯಲ್ಲೂ ಅದ್ದೂರಿಯಾಗಿ ಗಣೇಶ ಹಬ್ಬ ಸಂಭ್ರಮಿಸು್ತಾರೆ. ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಖಾನ್ ಮನೆಯಲ್ಲೂ ಅದ್ದೂರಿಯಾಗಿ ಗಣೇಶ ಹಬ್ಬ ಆಚರಿಸಲಾಗತ್ತೆ. ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಅರ್ಪಿತಾ ಖಾನ್ ಮನೆಯ ಗಣೇಶ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದರು.

 

 

andolana

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

6 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

6 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

9 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

10 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

11 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

11 hours ago