ಚಿತ್ರ ಮಂಜರಿ

ಸಿಂಹ ಪ್ರಿಯ ಬಾಳಲ್ಲಿ ಹೊಸ ಅಧ್ಯಾಯ ಆರಂಭ

ಸ್ಯಾಂಡಲ್‌ವುಡ್  ನಟಿ  ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿ  ಆಪ್ತರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಇಬ್ಬರು ಕ್ರಿಯೇಟಿವ್ ಪೋಸ್ಟ್ ಮೂಲಕ ತಮ್ಮ ಪ್ರೀತಿಯ ವಿಷ್ಯ ತಿಳಿಸಿದ್ದರು. ಇದೀಗ ಎಂಗೇಜ್‌ಮೆಂಟ್ ಫೋಟೋಗಳು ಹೊರಬಿದ್ದಿದೆ.
ಚಂದನವನದ ಸದ್ಯದ ಹಾಟ್ ನ್ಯೂಸ್ ಎಂದರೆ ಹರಿಪ್ರಿಯಾ ಮತ್ತು ವಸಿಷ್ಠ ಜೋಡಿಯ ಪ್ರೇಮ ಕಹಾನಿ. ಇವರಿಬ್ಬರ ಲವ್ ಸ್ಟೋರಿ ವಿಚಾರ ಇದೀಗ ಗುಟ್ಟಾಗಿ ಉಳಿದಿಲ್ಲ. ತಮ್ಮ ಸಂಬಂಧದ ಬಗ್ಗೆ ಈ ಜೋಡಿ ಅಧಿಕೃತವಾಗಿ ತಿಳಿಸದೇ ಇದ್ದರು. ಸದ್ಯ ಪರೋಕ್ಷವಾಗಿ ತಾವು ಎಂಗೇಜ್ ಆಗಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದರು.

ಇದೀಗ ಹರಿಪ್ರಿಯಾ, ವಸಿಷ್ಠ ನಿಶ್ಚಿತಾರ್ಥದ ಫೋಟೋ ಎಲ್ಲೆಡೆ ಸದ್ದು ಮಾಡ್ತಿದೆ. ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ರಿಂಗ್‌ ಬದಲಿಸಿಕೊಂಡಿದ್ದಾರೆ. ಈ ಮೂಲಕ ತಮ್ಮ ಸಂಬಂಧಕ್ಕೆ ಅಧಿಕೃತ ಮುದ್ರೆ ಒತ್ತಿದ್ದಾರೆ.
ಸಿಂಹದ ಮಡಿಲಲ್ಲಿ ಮಲಗಿರುವ ಮಗುವಿನ ಫೋಟೋವನ್ನ ಜೊತೆ `ಚಿನ್ನ ತೋಳಿನಲ್ಲಿ ಕಂದ ನಾನು’ ಎಂದು ಕ್ರಿಯೇಟಿವ್ ಆಗಿ ಮದುವೆ ಬಗೆಗಿನ ಸುದ್ದಿ ಬಗ್ಗೆ ಹರಿಪ್ರಿಯಾ, ಪೋಸ್ಟ್ ಮೂಲಕ ಖಚಿತಪಡಿಸಿದ್ದರು. ಅದೇ ರೀತಿಯ ಪೋಸ್ಟ್‌ ವಸಿಷ್ಠ ಕೂಡ ಶೇರ್ ಮಾಡಿ, ಎಂದು ನಿನ್ನ ನೆರಳಾಗಿ ಕಾಯುವೆ ಅಂತಾ ನಟ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಎಂಗೇಜ್‌ಮೆಂಟ್  ವಿಷ್ಯಕ್ಕೆ ಸ್ಪಷ್ಟನೆ ಕೊಟ್ಟಿದ್ದರು.

andolanait

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

13 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

13 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

13 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

15 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

15 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

23 hours ago