ಚಿತ್ರ ಮಂಜರಿ

ಸಿಂಹ ಪ್ರಿಯ ಬಾಳಲ್ಲಿ ಹೊಸ ಅಧ್ಯಾಯ ಆರಂಭ

ಸ್ಯಾಂಡಲ್‌ವುಡ್  ನಟಿ  ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿ  ಆಪ್ತರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಇಬ್ಬರು ಕ್ರಿಯೇಟಿವ್ ಪೋಸ್ಟ್ ಮೂಲಕ ತಮ್ಮ ಪ್ರೀತಿಯ ವಿಷ್ಯ ತಿಳಿಸಿದ್ದರು. ಇದೀಗ ಎಂಗೇಜ್‌ಮೆಂಟ್ ಫೋಟೋಗಳು ಹೊರಬಿದ್ದಿದೆ.
ಚಂದನವನದ ಸದ್ಯದ ಹಾಟ್ ನ್ಯೂಸ್ ಎಂದರೆ ಹರಿಪ್ರಿಯಾ ಮತ್ತು ವಸಿಷ್ಠ ಜೋಡಿಯ ಪ್ರೇಮ ಕಹಾನಿ. ಇವರಿಬ್ಬರ ಲವ್ ಸ್ಟೋರಿ ವಿಚಾರ ಇದೀಗ ಗುಟ್ಟಾಗಿ ಉಳಿದಿಲ್ಲ. ತಮ್ಮ ಸಂಬಂಧದ ಬಗ್ಗೆ ಈ ಜೋಡಿ ಅಧಿಕೃತವಾಗಿ ತಿಳಿಸದೇ ಇದ್ದರು. ಸದ್ಯ ಪರೋಕ್ಷವಾಗಿ ತಾವು ಎಂಗೇಜ್ ಆಗಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದರು.

ಇದೀಗ ಹರಿಪ್ರಿಯಾ, ವಸಿಷ್ಠ ನಿಶ್ಚಿತಾರ್ಥದ ಫೋಟೋ ಎಲ್ಲೆಡೆ ಸದ್ದು ಮಾಡ್ತಿದೆ. ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ರಿಂಗ್‌ ಬದಲಿಸಿಕೊಂಡಿದ್ದಾರೆ. ಈ ಮೂಲಕ ತಮ್ಮ ಸಂಬಂಧಕ್ಕೆ ಅಧಿಕೃತ ಮುದ್ರೆ ಒತ್ತಿದ್ದಾರೆ.
ಸಿಂಹದ ಮಡಿಲಲ್ಲಿ ಮಲಗಿರುವ ಮಗುವಿನ ಫೋಟೋವನ್ನ ಜೊತೆ `ಚಿನ್ನ ತೋಳಿನಲ್ಲಿ ಕಂದ ನಾನು’ ಎಂದು ಕ್ರಿಯೇಟಿವ್ ಆಗಿ ಮದುವೆ ಬಗೆಗಿನ ಸುದ್ದಿ ಬಗ್ಗೆ ಹರಿಪ್ರಿಯಾ, ಪೋಸ್ಟ್ ಮೂಲಕ ಖಚಿತಪಡಿಸಿದ್ದರು. ಅದೇ ರೀತಿಯ ಪೋಸ್ಟ್‌ ವಸಿಷ್ಠ ಕೂಡ ಶೇರ್ ಮಾಡಿ, ಎಂದು ನಿನ್ನ ನೆರಳಾಗಿ ಕಾಯುವೆ ಅಂತಾ ನಟ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಎಂಗೇಜ್‌ಮೆಂಟ್  ವಿಷ್ಯಕ್ಕೆ ಸ್ಪಷ್ಟನೆ ಕೊಟ್ಟಿದ್ದರು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

35 mins ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

37 mins ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

40 mins ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

42 mins ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

47 mins ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

51 mins ago