ಚಿತ್ರ ಮಂಜರಿ

‘ಜೈಲರ್‌’ ಚಿತ್ರದಲ್ಲಿ ಶಿವಣ್ಣ ಕಮಾಲ್‌: ತಮಿಳಿನಲ್ಲಿ ನಟಿಸಲು ಶಿವಣ್ಣಗೆ ಅಭಿಮಾನಿಗಳ ಕರೆ

ಬೆಂಗಳೂರು : ರಜಿನಿಕಾಂತ್‌ ಅವರ ಬಹುನಿರೀಕ್ಷಿತ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿರುವ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಅವರು ಭಾರೀ ಸದ್ದನ್ನು ಮಾಡಿದ್ದಾರೆ. ಜೈಲರ್‌ ನೋಡಿ ಬಂದಿರುವ ಸಿನಿಪ್ರಿಯರು ಶಿವರಾಜ್‌ಕುಮಾರ್‌ ಅವರು ಮಾಡಿರುವ ಸಣ್ಣ ಅವಧಿಯ ಪಾತ್ರದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಚಿತ್ರ ರಜಿನಿಕಾಂತ್‌ರದ್ದಾಗಿದ್ದರೂ ಗಮನ ಸೆಳೆದಿದ್ದು ಶಿವರಾಜ್‌ಕುಮಾರ್‌ ಎಂದು ಅಭಿಮಾನಿಗಳು ಟ್ಟೀಟ್ ಮಾಡಿದ್ದು, ಇನ್ನು ಕೆಲವರು ಈ ಚಿತ್ರದಿಂದ ಶಿವರಾಜ್‌ಕುಮಾರ್‌ ಅವರ ಅಭಿಮಾನಿಗಳಾಗಿರುವುದಾಗಿ ಹೇಳಿಕೊಂಡಿದ್ದಾರೆ.

ನಾನು ಇದುವರೆಗೆ ಶಿವರಾಜ್‌ಕುಮಾರ್‌ ಅವರ ಯಾವುದೇ ಚಿತ್ರವನ್ನು ನೋಡಿಲ್ಲ, ಆದರೆ, ಜೈಲರ್‌ನಲ್ಲಿ ಅವರು ಕಣ್ಣಿನ ಮೂಲಕ ನೀಡುವ ರಿಯಾಕ್ಷನ್‌ ನೋಡಿದ ಮೇಲೆ ಇವರೊಳಗಿನ ನಟನ ದೈತ್ಯ ಪ್ರತಿಭೆ ಅರಿವಾಗಿದೆ, ಇವರ ಎಲ್ಲಾ ಸಿನೆಮಾಗಳನ್ನು ನೋಡಬೇಕು ಎಂದು ನೆಟ್ಟಿಗರೊಬ್ಬರು ಟ್ವೀಟ್‌ ಮಾಡಿದ್ದಾರೆ.

ಇನ್ನು ಕೆಲವರು ಶಿವರಾಜ್‌ಕುಮಾರ್‌ ಅವರು ತಮಿಳಿನಲ್ಲಿ ಪೂರ್ಣ ಪ್ರಮಾಣದ ಮಾಸ್‌ ಸಿನೆಮಾ ಮಾಡಬಬೇಕೆಂದು ಆಗ್ರಹ ವ್ಯಕ್ತಪಡಿಸಿದ್ದರೆ, ವೆಟ್ರಿಮಾರನ್‌ ಚಿತ್ರದಲ್ಲಿ ಶಿವರಾಜ್‌ಕುಮಾರ್‌ ಅಭಿನಯಿಸುವುದನ್ನು ನೋಡಬೇಕು ಎಂದು ಇನ್ನೊಬ್ಬರು ಆಸೆ ವ್ಯಕ್ತಪಡಿಸಿದ್ದಾರೆ.

ನೀನು ಗನ್‌ನಿಂದ ಹೆದರಿಸಿರುವುದಕ್ಕಿಂತ ಹೆಚ್ಚಿನ ಜನರನ್ನು ನಾನು ಕಣ್ಣಿಂದಲೇ ಹೆದರಿಸಿದ್ದೀನಿ ಎನ್ನುವ ಶಿವರಾಜ್‌ಕುಮಾರ್‌ ಅವರ ಡೈಲಾಗ್‌ ಅನ್ನು ಹಂಚಿಕೊಂಡಿರುವ ಟ್ವಿಟರ್‌ ಬಳಕೆದಾರರೊಬ್ಬರು ʼನಿರ್ದೇಶಕ ನೆಲ್ಸನ್‌ ದಿಲೀಪ್‌ ಕುಮಾರ್‌ ಇದನ್ನು ಸಾಬೀತು ಪಡಿಸಿ ತೋರಿಸಿದ್ದಾರೆʼ ಎಂದು ಹೇಳಿದ್ದಾರೆ.

ರಜಿನಿಕಾಂತ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಜೈಲರ್‌ ಚಿತ್ರದಲ್ಲಿ ಶಿವರಾಜ್‌ಕುಮಾರ್‌ ಮಾತ್ರವಲ್ಲದೆ, ಮಲಯಾಳಂನಿಂದ ಮೋಹನ್‌ ಲಾಲ್‌, ವಿನಾಯಕನ್, ಹಿಂದಿಯಿಂದ ಜಾಕಿಶ್ರಾಫ್‌, ತೆಲುಗು ನಟ ಸುನಿಲ್‌ ಸೇರಿದಂತೆ ಹಲವಾರು ಘಟಾನುಘಟಿ ನಟ-ನಟಿಯರು ನಟಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಕಾನ್ಫಿಡೆಂಟ್ ಮಾಲೀಕನಿಗೆ ಬದುಕುವ ಕಾನ್ಫಿಡೆಂಟ್ ಇಲ್ಲದಾಯಿತೇ?

ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…

44 mins ago

ಓದುಗರ ಪತ್ರ: ಗಬ್ಬು ನಾರುತ್ತಿರುವ ಚಾ.ನಗರದ ಮೋರಿಗಳು

ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ…

48 mins ago

ಓದುಗರ ಪತ್ರ: ಡಾ.ಜಯಮಾಲ ಅವರಿಗೆ ಅಭಿನಂದನೆಗಳು

ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು…

51 mins ago

ಓದುಗರ ಪತ್ರ: ಕಸಾಪ ಗೌರವಕ್ಕೆ ಚ್ಯುತಿ ತಂದ ಜೋಶಿ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ…

53 mins ago

ಫೆ.೫ರಂದು ಶ್ರೀ ಶಂಭುಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…

4 hours ago

ಬಿಪಿಎಲ್ ಕಾರ್ಡ್ ಇಲ್ಲದಿದ್ದರೆ ಜಿಲ್ಲಾಸ್ಪತ್ರೆ ದುಬಾರಿ!

ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …

4 hours ago