ಚಿತ್ರ ಮಂಜರಿ

‘ಜೈಲರ್‌’ ಚಿತ್ರದಲ್ಲಿ ಶಿವಣ್ಣ ಕಮಾಲ್‌: ತಮಿಳಿನಲ್ಲಿ ನಟಿಸಲು ಶಿವಣ್ಣಗೆ ಅಭಿಮಾನಿಗಳ ಕರೆ

ಬೆಂಗಳೂರು : ರಜಿನಿಕಾಂತ್‌ ಅವರ ಬಹುನಿರೀಕ್ಷಿತ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿರುವ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಅವರು ಭಾರೀ ಸದ್ದನ್ನು ಮಾಡಿದ್ದಾರೆ. ಜೈಲರ್‌ ನೋಡಿ ಬಂದಿರುವ ಸಿನಿಪ್ರಿಯರು ಶಿವರಾಜ್‌ಕುಮಾರ್‌ ಅವರು ಮಾಡಿರುವ ಸಣ್ಣ ಅವಧಿಯ ಪಾತ್ರದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಚಿತ್ರ ರಜಿನಿಕಾಂತ್‌ರದ್ದಾಗಿದ್ದರೂ ಗಮನ ಸೆಳೆದಿದ್ದು ಶಿವರಾಜ್‌ಕುಮಾರ್‌ ಎಂದು ಅಭಿಮಾನಿಗಳು ಟ್ಟೀಟ್ ಮಾಡಿದ್ದು, ಇನ್ನು ಕೆಲವರು ಈ ಚಿತ್ರದಿಂದ ಶಿವರಾಜ್‌ಕುಮಾರ್‌ ಅವರ ಅಭಿಮಾನಿಗಳಾಗಿರುವುದಾಗಿ ಹೇಳಿಕೊಂಡಿದ್ದಾರೆ.

ನಾನು ಇದುವರೆಗೆ ಶಿವರಾಜ್‌ಕುಮಾರ್‌ ಅವರ ಯಾವುದೇ ಚಿತ್ರವನ್ನು ನೋಡಿಲ್ಲ, ಆದರೆ, ಜೈಲರ್‌ನಲ್ಲಿ ಅವರು ಕಣ್ಣಿನ ಮೂಲಕ ನೀಡುವ ರಿಯಾಕ್ಷನ್‌ ನೋಡಿದ ಮೇಲೆ ಇವರೊಳಗಿನ ನಟನ ದೈತ್ಯ ಪ್ರತಿಭೆ ಅರಿವಾಗಿದೆ, ಇವರ ಎಲ್ಲಾ ಸಿನೆಮಾಗಳನ್ನು ನೋಡಬೇಕು ಎಂದು ನೆಟ್ಟಿಗರೊಬ್ಬರು ಟ್ವೀಟ್‌ ಮಾಡಿದ್ದಾರೆ.

ಇನ್ನು ಕೆಲವರು ಶಿವರಾಜ್‌ಕುಮಾರ್‌ ಅವರು ತಮಿಳಿನಲ್ಲಿ ಪೂರ್ಣ ಪ್ರಮಾಣದ ಮಾಸ್‌ ಸಿನೆಮಾ ಮಾಡಬಬೇಕೆಂದು ಆಗ್ರಹ ವ್ಯಕ್ತಪಡಿಸಿದ್ದರೆ, ವೆಟ್ರಿಮಾರನ್‌ ಚಿತ್ರದಲ್ಲಿ ಶಿವರಾಜ್‌ಕುಮಾರ್‌ ಅಭಿನಯಿಸುವುದನ್ನು ನೋಡಬೇಕು ಎಂದು ಇನ್ನೊಬ್ಬರು ಆಸೆ ವ್ಯಕ್ತಪಡಿಸಿದ್ದಾರೆ.

ನೀನು ಗನ್‌ನಿಂದ ಹೆದರಿಸಿರುವುದಕ್ಕಿಂತ ಹೆಚ್ಚಿನ ಜನರನ್ನು ನಾನು ಕಣ್ಣಿಂದಲೇ ಹೆದರಿಸಿದ್ದೀನಿ ಎನ್ನುವ ಶಿವರಾಜ್‌ಕುಮಾರ್‌ ಅವರ ಡೈಲಾಗ್‌ ಅನ್ನು ಹಂಚಿಕೊಂಡಿರುವ ಟ್ವಿಟರ್‌ ಬಳಕೆದಾರರೊಬ್ಬರು ʼನಿರ್ದೇಶಕ ನೆಲ್ಸನ್‌ ದಿಲೀಪ್‌ ಕುಮಾರ್‌ ಇದನ್ನು ಸಾಬೀತು ಪಡಿಸಿ ತೋರಿಸಿದ್ದಾರೆʼ ಎಂದು ಹೇಳಿದ್ದಾರೆ.

ರಜಿನಿಕಾಂತ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಜೈಲರ್‌ ಚಿತ್ರದಲ್ಲಿ ಶಿವರಾಜ್‌ಕುಮಾರ್‌ ಮಾತ್ರವಲ್ಲದೆ, ಮಲಯಾಳಂನಿಂದ ಮೋಹನ್‌ ಲಾಲ್‌, ವಿನಾಯಕನ್, ಹಿಂದಿಯಿಂದ ಜಾಕಿಶ್ರಾಫ್‌, ತೆಲುಗು ನಟ ಸುನಿಲ್‌ ಸೇರಿದಂತೆ ಹಲವಾರು ಘಟಾನುಘಟಿ ನಟ-ನಟಿಯರು ನಟಿಸಿದ್ದಾರೆ.

andolanait

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

9 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

10 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

10 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

11 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

12 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

12 hours ago