ಚಿತ್ರ ಮಂಜರಿ

‘ಜೈಲರ್‌’ ಚಿತ್ರದಲ್ಲಿ ಶಿವಣ್ಣ ಕಮಾಲ್‌: ತಮಿಳಿನಲ್ಲಿ ನಟಿಸಲು ಶಿವಣ್ಣಗೆ ಅಭಿಮಾನಿಗಳ ಕರೆ

ಬೆಂಗಳೂರು : ರಜಿನಿಕಾಂತ್‌ ಅವರ ಬಹುನಿರೀಕ್ಷಿತ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿರುವ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಅವರು ಭಾರೀ ಸದ್ದನ್ನು ಮಾಡಿದ್ದಾರೆ. ಜೈಲರ್‌ ನೋಡಿ ಬಂದಿರುವ ಸಿನಿಪ್ರಿಯರು ಶಿವರಾಜ್‌ಕುಮಾರ್‌ ಅವರು ಮಾಡಿರುವ ಸಣ್ಣ ಅವಧಿಯ ಪಾತ್ರದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಚಿತ್ರ ರಜಿನಿಕಾಂತ್‌ರದ್ದಾಗಿದ್ದರೂ ಗಮನ ಸೆಳೆದಿದ್ದು ಶಿವರಾಜ್‌ಕುಮಾರ್‌ ಎಂದು ಅಭಿಮಾನಿಗಳು ಟ್ಟೀಟ್ ಮಾಡಿದ್ದು, ಇನ್ನು ಕೆಲವರು ಈ ಚಿತ್ರದಿಂದ ಶಿವರಾಜ್‌ಕುಮಾರ್‌ ಅವರ ಅಭಿಮಾನಿಗಳಾಗಿರುವುದಾಗಿ ಹೇಳಿಕೊಂಡಿದ್ದಾರೆ.

ನಾನು ಇದುವರೆಗೆ ಶಿವರಾಜ್‌ಕುಮಾರ್‌ ಅವರ ಯಾವುದೇ ಚಿತ್ರವನ್ನು ನೋಡಿಲ್ಲ, ಆದರೆ, ಜೈಲರ್‌ನಲ್ಲಿ ಅವರು ಕಣ್ಣಿನ ಮೂಲಕ ನೀಡುವ ರಿಯಾಕ್ಷನ್‌ ನೋಡಿದ ಮೇಲೆ ಇವರೊಳಗಿನ ನಟನ ದೈತ್ಯ ಪ್ರತಿಭೆ ಅರಿವಾಗಿದೆ, ಇವರ ಎಲ್ಲಾ ಸಿನೆಮಾಗಳನ್ನು ನೋಡಬೇಕು ಎಂದು ನೆಟ್ಟಿಗರೊಬ್ಬರು ಟ್ವೀಟ್‌ ಮಾಡಿದ್ದಾರೆ.

ಇನ್ನು ಕೆಲವರು ಶಿವರಾಜ್‌ಕುಮಾರ್‌ ಅವರು ತಮಿಳಿನಲ್ಲಿ ಪೂರ್ಣ ಪ್ರಮಾಣದ ಮಾಸ್‌ ಸಿನೆಮಾ ಮಾಡಬಬೇಕೆಂದು ಆಗ್ರಹ ವ್ಯಕ್ತಪಡಿಸಿದ್ದರೆ, ವೆಟ್ರಿಮಾರನ್‌ ಚಿತ್ರದಲ್ಲಿ ಶಿವರಾಜ್‌ಕುಮಾರ್‌ ಅಭಿನಯಿಸುವುದನ್ನು ನೋಡಬೇಕು ಎಂದು ಇನ್ನೊಬ್ಬರು ಆಸೆ ವ್ಯಕ್ತಪಡಿಸಿದ್ದಾರೆ.

ನೀನು ಗನ್‌ನಿಂದ ಹೆದರಿಸಿರುವುದಕ್ಕಿಂತ ಹೆಚ್ಚಿನ ಜನರನ್ನು ನಾನು ಕಣ್ಣಿಂದಲೇ ಹೆದರಿಸಿದ್ದೀನಿ ಎನ್ನುವ ಶಿವರಾಜ್‌ಕುಮಾರ್‌ ಅವರ ಡೈಲಾಗ್‌ ಅನ್ನು ಹಂಚಿಕೊಂಡಿರುವ ಟ್ವಿಟರ್‌ ಬಳಕೆದಾರರೊಬ್ಬರು ʼನಿರ್ದೇಶಕ ನೆಲ್ಸನ್‌ ದಿಲೀಪ್‌ ಕುಮಾರ್‌ ಇದನ್ನು ಸಾಬೀತು ಪಡಿಸಿ ತೋರಿಸಿದ್ದಾರೆʼ ಎಂದು ಹೇಳಿದ್ದಾರೆ.

ರಜಿನಿಕಾಂತ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಜೈಲರ್‌ ಚಿತ್ರದಲ್ಲಿ ಶಿವರಾಜ್‌ಕುಮಾರ್‌ ಮಾತ್ರವಲ್ಲದೆ, ಮಲಯಾಳಂನಿಂದ ಮೋಹನ್‌ ಲಾಲ್‌, ವಿನಾಯಕನ್, ಹಿಂದಿಯಿಂದ ಜಾಕಿಶ್ರಾಫ್‌, ತೆಲುಗು ನಟ ಸುನಿಲ್‌ ಸೇರಿದಂತೆ ಹಲವಾರು ಘಟಾನುಘಟಿ ನಟ-ನಟಿಯರು ನಟಿಸಿದ್ದಾರೆ.

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago