ಬೆಂಗಳೂರು: ಕರುನಾಡ ರಾಜರತ್ನ ಪುನೀತ್ ರಾಜ್ಕುಮಾರ್ ಭೌತಿಕವಾಗಿ ನಮ್ಮನ್ನಗಲಿರಬಹುದು. ಆದರೆ ಅಭಿಮಾನಿಗಳ ಎದೆಯಲ್ಲಿ ಎಂದಿಗೂ ಅಜರಾಮರು ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ ಬೀದರ್ನ ಈ ಅಭಿಮಾನಿ. ಅಪ್ಪಟ ಅಪ್ಪು ಅಭಿಮಾನಿಗಳಾಗಿರುವ ಬೀದರ್ನ ಈ ದಂಪತಿ ಇದೀಗ ಮಗುವಿಗೆ ತಮ್ಮ ನೆಚ್ಚಿನ ನಟನ ಹೆಸರನ್ನು ನಾಮಕರಣ ಮಾಡಿದ್ದಾರೆ. ಅದು ಕೂಡ ಶಿವಣ್ಣನ ಬಾಯಾರೆ ಎಂಬುದು ವಿಶೇಷ.
ಮಗುವಿನೊಂದಿಗೆ ಶಿವರಾಜ್ ಕುಮಾರ್ ಮನೆಗೆ ಬಂದಿದ್ದ ದಂಪತಿಗಳು ತಮ್ಮ ಮನದಾಸೆಯನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಮಗುವಿಗೆ ಅಪ್ಪು ಎಂದು ಹೆಸರಿಡಬೇಕೆಂದು ತಮ್ಮ ಬಯಕೆಯನ್ನು ತಿಳಿಸಿದ್ದರು. ಅಲ್ಲದೆ ಈ ನಾಮಕರಣ ಕಾರ್ಯವನ್ನು ನೀವೇ ನೆರವೇರಿಸಿಕೊಡಬೇಕೆಂದು ಶಿವಣ್ಣ ಅವರಲ್ಲಿ ಕೇಳಿಕೊಂಡಿದ್ದಾರೆ.
ಅಪ್ಪು ಅಭಿಮಾನಿಯ ಈ ಮನದಿಂಗಿತವನ್ನು ಕೇಳಿದ ಬಳಿಕ ಶಿವಣ್ಣ ಮಗುವಿಗೆ ಅಪ್ಪು ಅಂತ ಹೆಸರಿಟ್ಟು ಮುತ್ತಿಟ್ಟರು. ಅಲ್ಲದೆ ರಾಜವಂಶದ ಈ ಅಭಿಮಾನಿಗಳಿಗೆ ಆತಿಥ್ಯ ನೀಡಿ ಕಳುಹಿಸಿಕೊಟ್ಟರು. ಇದೀಗ ಶಿವಣ್ಣ ಬಾಯಿಂದ ಅಪ್ಪು ಎಂದು ಕರೆಸಿಕೊಂಡಿರುವ ಪುಟ್ಟ ಪುಟಾಣಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಷ್ಟೇ ಅಲ್ಲದೆ ರಾಜರತ್ನನ ಅಭಿಮಾನಿ ದಂಪತಿ ಕೂಡ ಫುಲ್ ಖುಷಿಯಾಗಿದ್ದಾರೆ.
ಒಟ್ಟಿನಲ್ಲಿ ಭೌತಿಕವಾಗಿ ನಮ್ಮಿಂದ ದೂರವಿರುವ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಮರ ಎಂಬುದನ್ನು ಪ್ರತಿದಿನ ಅಭಿಮಾನಿಗಳು ನಿರೂಪಿಸುತ್ತಾ ಸಾಗುತ್ತಿದ್ದಾರೆ. ಏಕೆಂದರೆ ಕಳೆದ ವರ್ಷ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರು ಗ್ರಾಮದ ಸಿದ್ದು ಮತ್ತು ಕಾವೇರಿ ದಂಪತಿ ಕೂಡ ತಮ್ಮ ಮೊದಲನೇ ಮಗುವಿಗೆ ಪುನೀತ್ ರಾಜ್ಕುಮಾರ್ ಎಂದು ನಾಮಕರಣ ಮಾಡಿದ್ದರು. ಇನ್ನು ಹಲವು ಅಭಿಮಾನಿಗಳು ಕೂಡ ಅಪ್ಪು ಹೆಸರನ್ನು ತಮ್ಮ ಮಕ್ಕಳಿಗೆ ನಿಕ್ ನೇಮ್ ಆಗಿ ಇರಿಸಿಕೊಂಡಿದ್ದಾರೆ.
ಈ ಮೂಲಕ ಪ್ರತಿಕ್ಷಣದಲ್ಲೂ ಪುನೀತ್ ರಾಜ್ಕುಮಾರ್ ಎಂಬ ರಾಜಕುಮಾರನನ್ನು ನೆನೆಯುತ್ತಿದ್ದಾರೆ. ಒಟ್ಟಿನಲ್ಲಿ ಅಪ್ಪು ಅಮರ…ಅಜರಾಮರ ಎಂಬುದನ್ನು ಅಭಿಮಾನಿಗಳು ಪ್ರತಿ ಸಂದರ್ಭದಲ್ಲೂ ನಿರೂಪಿಸುತ್ತಿರುವುದು ಅವರು ಗಳಿಸಿದ ಕೀರ್ತಿಗೆ ಪ್ರೀತಿಗೆ ಸಾಕ್ಷಿ ಎನ್ನಬಹುದು.
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…
ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…
ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…
ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ…