ಚಿತ್ರ ಮಂಜರಿ

ಅಪ್ಪು ಅಭಿಮಾನಿ ಕುಟುಂಬದ ಮಗುವಿಗೆ ಅಪ್ಪು ಎಂದು ನಾಮಕರಣ ಮಾಡಿದ ಶಿವಣ್ಣ

ಬೆಂಗಳೂರು: ಕರುನಾಡ ರಾಜರತ್ನ ಪುನೀತ್ ರಾಜ್​ಕುಮಾರ್ ಭೌತಿಕವಾಗಿ ನಮ್ಮನ್ನಗಲಿರಬಹುದು. ಆದರೆ ಅಭಿಮಾನಿಗಳ ಎದೆಯಲ್ಲಿ ಎಂದಿಗೂ ಅಜರಾಮರು ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ ಬೀದರ್​ನ ಈ ಅಭಿಮಾನಿ. ಅಪ್ಪಟ ಅಪ್ಪು ಅಭಿಮಾನಿಗಳಾಗಿರುವ ಬೀದರ್​ನ ಈ ದಂಪತಿ ಇದೀಗ ಮಗುವಿಗೆ ತಮ್ಮ ನೆಚ್ಚಿನ ನಟನ ಹೆಸರನ್ನು ನಾಮಕರಣ ಮಾಡಿದ್ದಾರೆ. ಅದು ಕೂಡ ಶಿವಣ್ಣನ ಬಾಯಾರೆ ಎಂಬುದು ವಿಶೇಷ.

ಮಗುವಿನೊಂದಿಗೆ ಶಿವರಾಜ್ ಕುಮಾರ್ ಮನೆಗೆ ಬಂದಿದ್ದ ದಂಪತಿಗಳು ತಮ್ಮ ಮನದಾಸೆಯನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಮಗುವಿಗೆ ಅಪ್ಪು ಎಂದು ಹೆಸರಿಡಬೇಕೆಂದು ತಮ್ಮ ಬಯಕೆಯನ್ನು ತಿಳಿಸಿದ್ದರು. ಅಲ್ಲದೆ ಈ ನಾಮಕರಣ ಕಾರ್ಯವನ್ನು ನೀವೇ ನೆರವೇರಿಸಿಕೊಡಬೇಕೆಂದು ಶಿವಣ್ಣ ಅವರಲ್ಲಿ ಕೇಳಿಕೊಂಡಿದ್ದಾರೆ.

ಅಪ್ಪು ಅಭಿಮಾನಿಯ ಈ ಮನದಿಂಗಿತವನ್ನು ಕೇಳಿದ ಬಳಿಕ ಶಿವಣ್ಣ ಮಗುವಿಗೆ ಅಪ್ಪು ಅಂತ ಹೆಸರಿಟ್ಟು ಮುತ್ತಿಟ್ಟರು. ಅಲ್ಲದೆ ರಾಜವಂಶದ ಈ ಅಭಿಮಾನಿಗಳಿಗೆ ಆತಿಥ್ಯ ನೀಡಿ ಕಳುಹಿಸಿಕೊಟ್ಟರು. ಇದೀಗ ಶಿವಣ್ಣ ಬಾಯಿಂದ ಅಪ್ಪು ಎಂದು ಕರೆಸಿಕೊಂಡಿರುವ ಪುಟ್ಟ ಪುಟಾಣಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಷ್ಟೇ ಅಲ್ಲದೆ ರಾಜರತ್ನನ ಅಭಿಮಾನಿ ದಂಪತಿ ಕೂಡ ಫುಲ್ ಖುಷಿಯಾಗಿದ್ದಾರೆ.

ಒಟ್ಟಿನಲ್ಲಿ ಭೌತಿಕವಾಗಿ ನಮ್ಮಿಂದ ದೂರವಿರುವ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅಮರ ಎಂಬುದನ್ನು ಪ್ರತಿದಿನ ಅಭಿಮಾನಿಗಳು ನಿರೂಪಿಸುತ್ತಾ ಸಾಗುತ್ತಿದ್ದಾರೆ. ಏಕೆಂದರೆ ಕಳೆದ ವರ್ಷ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರು ಗ್ರಾಮದ ಸಿದ್ದು ಮತ್ತು ಕಾವೇರಿ ದಂಪತಿ ಕೂಡ ತಮ್ಮ ಮೊದಲನೇ ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ ಮಾಡಿದ್ದರು. ಇನ್ನು ಹಲವು ಅಭಿಮಾನಿಗಳು ಕೂಡ ಅಪ್ಪು ಹೆಸರನ್ನು ತಮ್ಮ ಮಕ್ಕಳಿಗೆ ನಿಕ್ ನೇಮ್ ಆಗಿ ಇರಿಸಿಕೊಂಡಿದ್ದಾರೆ.

ಈ ಮೂಲಕ ಪ್ರತಿಕ್ಷಣದಲ್ಲೂ ಪುನೀತ್ ರಾಜ್​ಕುಮಾರ್ ಎಂಬ ರಾಜಕುಮಾರನನ್ನು ನೆನೆಯುತ್ತಿದ್ದಾರೆ. ಒಟ್ಟಿನಲ್ಲಿ ಅಪ್ಪು ಅಮರ…ಅಜರಾಮರ ಎಂಬುದನ್ನು ಅಭಿಮಾನಿಗಳು ಪ್ರತಿ ಸಂದರ್ಭದಲ್ಲೂ ನಿರೂಪಿಸುತ್ತಿರುವುದು ಅವರು ಗಳಿಸಿದ ಕೀರ್ತಿಗೆ ಪ್ರೀತಿಗೆ ಸಾಕ್ಷಿ ಎನ್ನಬಹುದು.

andolana

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

8 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

9 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

9 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

9 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

9 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

10 hours ago