ಚಿತ್ರ ಮಂಜರಿ

ಅಪ್ಪು ಅಭಿಮಾನಿ ಕುಟುಂಬದ ಮಗುವಿಗೆ ಅಪ್ಪು ಎಂದು ನಾಮಕರಣ ಮಾಡಿದ ಶಿವಣ್ಣ

ಬೆಂಗಳೂರು: ಕರುನಾಡ ರಾಜರತ್ನ ಪುನೀತ್ ರಾಜ್​ಕುಮಾರ್ ಭೌತಿಕವಾಗಿ ನಮ್ಮನ್ನಗಲಿರಬಹುದು. ಆದರೆ ಅಭಿಮಾನಿಗಳ ಎದೆಯಲ್ಲಿ ಎಂದಿಗೂ ಅಜರಾಮರು ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ ಬೀದರ್​ನ ಈ ಅಭಿಮಾನಿ. ಅಪ್ಪಟ ಅಪ್ಪು ಅಭಿಮಾನಿಗಳಾಗಿರುವ ಬೀದರ್​ನ ಈ ದಂಪತಿ ಇದೀಗ ಮಗುವಿಗೆ ತಮ್ಮ ನೆಚ್ಚಿನ ನಟನ ಹೆಸರನ್ನು ನಾಮಕರಣ ಮಾಡಿದ್ದಾರೆ. ಅದು ಕೂಡ ಶಿವಣ್ಣನ ಬಾಯಾರೆ ಎಂಬುದು ವಿಶೇಷ.

ಮಗುವಿನೊಂದಿಗೆ ಶಿವರಾಜ್ ಕುಮಾರ್ ಮನೆಗೆ ಬಂದಿದ್ದ ದಂಪತಿಗಳು ತಮ್ಮ ಮನದಾಸೆಯನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಮಗುವಿಗೆ ಅಪ್ಪು ಎಂದು ಹೆಸರಿಡಬೇಕೆಂದು ತಮ್ಮ ಬಯಕೆಯನ್ನು ತಿಳಿಸಿದ್ದರು. ಅಲ್ಲದೆ ಈ ನಾಮಕರಣ ಕಾರ್ಯವನ್ನು ನೀವೇ ನೆರವೇರಿಸಿಕೊಡಬೇಕೆಂದು ಶಿವಣ್ಣ ಅವರಲ್ಲಿ ಕೇಳಿಕೊಂಡಿದ್ದಾರೆ.

ಅಪ್ಪು ಅಭಿಮಾನಿಯ ಈ ಮನದಿಂಗಿತವನ್ನು ಕೇಳಿದ ಬಳಿಕ ಶಿವಣ್ಣ ಮಗುವಿಗೆ ಅಪ್ಪು ಅಂತ ಹೆಸರಿಟ್ಟು ಮುತ್ತಿಟ್ಟರು. ಅಲ್ಲದೆ ರಾಜವಂಶದ ಈ ಅಭಿಮಾನಿಗಳಿಗೆ ಆತಿಥ್ಯ ನೀಡಿ ಕಳುಹಿಸಿಕೊಟ್ಟರು. ಇದೀಗ ಶಿವಣ್ಣ ಬಾಯಿಂದ ಅಪ್ಪು ಎಂದು ಕರೆಸಿಕೊಂಡಿರುವ ಪುಟ್ಟ ಪುಟಾಣಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಷ್ಟೇ ಅಲ್ಲದೆ ರಾಜರತ್ನನ ಅಭಿಮಾನಿ ದಂಪತಿ ಕೂಡ ಫುಲ್ ಖುಷಿಯಾಗಿದ್ದಾರೆ.

ಒಟ್ಟಿನಲ್ಲಿ ಭೌತಿಕವಾಗಿ ನಮ್ಮಿಂದ ದೂರವಿರುವ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅಮರ ಎಂಬುದನ್ನು ಪ್ರತಿದಿನ ಅಭಿಮಾನಿಗಳು ನಿರೂಪಿಸುತ್ತಾ ಸಾಗುತ್ತಿದ್ದಾರೆ. ಏಕೆಂದರೆ ಕಳೆದ ವರ್ಷ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರು ಗ್ರಾಮದ ಸಿದ್ದು ಮತ್ತು ಕಾವೇರಿ ದಂಪತಿ ಕೂಡ ತಮ್ಮ ಮೊದಲನೇ ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ ಮಾಡಿದ್ದರು. ಇನ್ನು ಹಲವು ಅಭಿಮಾನಿಗಳು ಕೂಡ ಅಪ್ಪು ಹೆಸರನ್ನು ತಮ್ಮ ಮಕ್ಕಳಿಗೆ ನಿಕ್ ನೇಮ್ ಆಗಿ ಇರಿಸಿಕೊಂಡಿದ್ದಾರೆ.

ಈ ಮೂಲಕ ಪ್ರತಿಕ್ಷಣದಲ್ಲೂ ಪುನೀತ್ ರಾಜ್​ಕುಮಾರ್ ಎಂಬ ರಾಜಕುಮಾರನನ್ನು ನೆನೆಯುತ್ತಿದ್ದಾರೆ. ಒಟ್ಟಿನಲ್ಲಿ ಅಪ್ಪು ಅಮರ…ಅಜರಾಮರ ಎಂಬುದನ್ನು ಅಭಿಮಾನಿಗಳು ಪ್ರತಿ ಸಂದರ್ಭದಲ್ಲೂ ನಿರೂಪಿಸುತ್ತಿರುವುದು ಅವರು ಗಳಿಸಿದ ಕೀರ್ತಿಗೆ ಪ್ರೀತಿಗೆ ಸಾಕ್ಷಿ ಎನ್ನಬಹುದು.

andolana

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

4 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

8 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago