ಚಿತ್ರ ಮಂಜರಿ

ಅಪ್ಪು ಅಭಿಮಾನಿ ಕುಟುಂಬದ ಮಗುವಿಗೆ ಅಪ್ಪು ಎಂದು ನಾಮಕರಣ ಮಾಡಿದ ಶಿವಣ್ಣ

ಬೆಂಗಳೂರು: ಕರುನಾಡ ರಾಜರತ್ನ ಪುನೀತ್ ರಾಜ್​ಕುಮಾರ್ ಭೌತಿಕವಾಗಿ ನಮ್ಮನ್ನಗಲಿರಬಹುದು. ಆದರೆ ಅಭಿಮಾನಿಗಳ ಎದೆಯಲ್ಲಿ ಎಂದಿಗೂ ಅಜರಾಮರು ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ ಬೀದರ್​ನ ಈ ಅಭಿಮಾನಿ. ಅಪ್ಪಟ ಅಪ್ಪು ಅಭಿಮಾನಿಗಳಾಗಿರುವ ಬೀದರ್​ನ ಈ ದಂಪತಿ ಇದೀಗ ಮಗುವಿಗೆ ತಮ್ಮ ನೆಚ್ಚಿನ ನಟನ ಹೆಸರನ್ನು ನಾಮಕರಣ ಮಾಡಿದ್ದಾರೆ. ಅದು ಕೂಡ ಶಿವಣ್ಣನ ಬಾಯಾರೆ ಎಂಬುದು ವಿಶೇಷ.

ಮಗುವಿನೊಂದಿಗೆ ಶಿವರಾಜ್ ಕುಮಾರ್ ಮನೆಗೆ ಬಂದಿದ್ದ ದಂಪತಿಗಳು ತಮ್ಮ ಮನದಾಸೆಯನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಮಗುವಿಗೆ ಅಪ್ಪು ಎಂದು ಹೆಸರಿಡಬೇಕೆಂದು ತಮ್ಮ ಬಯಕೆಯನ್ನು ತಿಳಿಸಿದ್ದರು. ಅಲ್ಲದೆ ಈ ನಾಮಕರಣ ಕಾರ್ಯವನ್ನು ನೀವೇ ನೆರವೇರಿಸಿಕೊಡಬೇಕೆಂದು ಶಿವಣ್ಣ ಅವರಲ್ಲಿ ಕೇಳಿಕೊಂಡಿದ್ದಾರೆ.

ಅಪ್ಪು ಅಭಿಮಾನಿಯ ಈ ಮನದಿಂಗಿತವನ್ನು ಕೇಳಿದ ಬಳಿಕ ಶಿವಣ್ಣ ಮಗುವಿಗೆ ಅಪ್ಪು ಅಂತ ಹೆಸರಿಟ್ಟು ಮುತ್ತಿಟ್ಟರು. ಅಲ್ಲದೆ ರಾಜವಂಶದ ಈ ಅಭಿಮಾನಿಗಳಿಗೆ ಆತಿಥ್ಯ ನೀಡಿ ಕಳುಹಿಸಿಕೊಟ್ಟರು. ಇದೀಗ ಶಿವಣ್ಣ ಬಾಯಿಂದ ಅಪ್ಪು ಎಂದು ಕರೆಸಿಕೊಂಡಿರುವ ಪುಟ್ಟ ಪುಟಾಣಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಷ್ಟೇ ಅಲ್ಲದೆ ರಾಜರತ್ನನ ಅಭಿಮಾನಿ ದಂಪತಿ ಕೂಡ ಫುಲ್ ಖುಷಿಯಾಗಿದ್ದಾರೆ.

ಒಟ್ಟಿನಲ್ಲಿ ಭೌತಿಕವಾಗಿ ನಮ್ಮಿಂದ ದೂರವಿರುವ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅಮರ ಎಂಬುದನ್ನು ಪ್ರತಿದಿನ ಅಭಿಮಾನಿಗಳು ನಿರೂಪಿಸುತ್ತಾ ಸಾಗುತ್ತಿದ್ದಾರೆ. ಏಕೆಂದರೆ ಕಳೆದ ವರ್ಷ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರು ಗ್ರಾಮದ ಸಿದ್ದು ಮತ್ತು ಕಾವೇರಿ ದಂಪತಿ ಕೂಡ ತಮ್ಮ ಮೊದಲನೇ ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ ಮಾಡಿದ್ದರು. ಇನ್ನು ಹಲವು ಅಭಿಮಾನಿಗಳು ಕೂಡ ಅಪ್ಪು ಹೆಸರನ್ನು ತಮ್ಮ ಮಕ್ಕಳಿಗೆ ನಿಕ್ ನೇಮ್ ಆಗಿ ಇರಿಸಿಕೊಂಡಿದ್ದಾರೆ.

ಈ ಮೂಲಕ ಪ್ರತಿಕ್ಷಣದಲ್ಲೂ ಪುನೀತ್ ರಾಜ್​ಕುಮಾರ್ ಎಂಬ ರಾಜಕುಮಾರನನ್ನು ನೆನೆಯುತ್ತಿದ್ದಾರೆ. ಒಟ್ಟಿನಲ್ಲಿ ಅಪ್ಪು ಅಮರ…ಅಜರಾಮರ ಎಂಬುದನ್ನು ಅಭಿಮಾನಿಗಳು ಪ್ರತಿ ಸಂದರ್ಭದಲ್ಲೂ ನಿರೂಪಿಸುತ್ತಿರುವುದು ಅವರು ಗಳಿಸಿದ ಕೀರ್ತಿಗೆ ಪ್ರೀತಿಗೆ ಸಾಕ್ಷಿ ಎನ್ನಬಹುದು.

andolana

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

6 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

6 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

6 hours ago