ಚಿತ್ರ ಮಂಜರಿ

ನಟಿ ಲೀಲಾವತಿ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಶಿವರಾಜ್ ಕುಮಾರ್

ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ಹಿರಿಯನಟಿ ಲೀಲಾವತಿ ಅವರ ಮನೆಗೆ ನಟ ಶಿವರಾಜ್‌ ಕುಮಾರ್‌ ದಂಪತಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿರುವ ನಟ ವಿನೋದ್‌ ರಾಜ್‌ ಅವರ ಮನೆಗೆ ಪತ್ನಿಯೋಂದಿಗೆ ಆಗಮಿಸಿದ ಶಿವಣ್ಣ ಲೀಲಾವತಿ ಅವರನ್ನು ಮಾತನಾಡಿಸುವ ಪ್ರಯತ್ನ ಮಾಡಿದರು. ನಂತರ ವಿನೋದ್‌ ರಾಜ್‌ ಅವರ ಬಳಿ ತಾಯಿಯ ಆರೋಗ್ಯ ವಿಚಾರಿಸಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸಹ ಲೀಲಾವತಿಯವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಮನೆಗೆ ಆಗಮಿಸಿದ ಉಪ ಮುಖ್ಯಮಂರಿಗಳನ್ನು ವಿನೋದ್‌ ರಾಜ್‌ ಅವರು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

ಭಾನುವಾರ ನಟ ದರ್ಶನ್‌ ಅವರು ಕೂಡ ಲೀಲಾವತಿಯವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.

ಇತ್ತೀಚೆಗೆ ಚಿತ್ರರಂಗದ ಹಲವು ನಟ ನಟಿಯರು ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ಮನೆಗೆ ತೆರಳಿ ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿಯ ಆರೋಗ್ಯ ವಿಚಾರಿಸುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಟ ಅರ್ಜುನ್‌ ಸರ್ಜಾ ಅವರು ಕೂಡ ಲೀಲಾವತಿಯವರ ಮನೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದ್ದರು.

ಕೆಲದಿನಗಳ ಹಿಂದೆ ಲೀಲಾವತಿಯವರು ನಿಧನರಾದರೆಂಬ ಸುಳ್ಳು ವದಂತಿಯನ್ನು ಹಬ್ಬಿಸಲಾಗಿತ್ತು. ಇದು ಅವರ ಪುತ್ರ ವಿನೋದ್‌ ರಾಜ್‌ ಅವರಿಗೆ ಬಹಳ ಬೇಸರ ತರಿಸಿತ್ತು. ಈ ಬಗ್ಗೆ ವಿನೋದ್‌ ರಾಜ್‌ ಅವರು ಸಂದರ್ಶನವೊಂದರಲ್ಲಿ ತಮ್ಮ ತಾಯಿಯ ಆರೋಗ್ಯದ ಬಗೆಗಿನ ಮಾಹಿತಿ ಹಂಚಿಕೊಂಡಿದ್ದರು. ಅಮ್ಮ ಆರೋಗ್ಯವಾಗಿದ್ದಾರೆ. ಅವರ ವಯಸ್ಸಿಗೆ ತಕ್ಕಂತೆ ಹೇಗೆ ಇರಬೇಕೋ ಹಾಗೆ ಇದ್ದಾರೆ ಅಮ್ಮ 86-87 ವಯಸ್ಸು ಮುಟ್ಟಿದ್ದಾರೆ. ಅವರ ಕಾಲದಲ್ಲಿ ಒಂದು ದಿನಕ್ಕೆ ನಾಲ್ಕು ಸಿನಿಮಾಗೆ ಪಾತ್ರ ಮಾಡಿದವರು. ಅಮ್ಮ ಒಟ್ಟು 650 ಸಿನಿಮಾಗಳಲ್ಲಿ ಅಭಿನಯ ಮಾಡಿದ್ದಾರೆ. ಜನ ಯಾಕೆ ಅಮ್ಮನ ಸಾವಿನ ಸುದ್ದಿ ಹಬ್ಬಿಸಿದ್ರು ಅನ್ನೋದನ್ನು ಮಂಜುನಾಥನಿಗೆ ಬಿಟ್ಟಿದ್ದೀವಿ. ಅವನೇ ನೋಡಿಕೊಳ್ಳಬೇಕು ಅಷ್ಟೇ ಎಂದು ಹೇಳಿದ್ದರು.

ನಟಿ ಲೀಲಾವತಿಯವರು ಕಳೆದ ಕೆಲ ವರ್ಷಗಳಿಂದ ವಯೋಸಹಜ ಅನಾರೋಗ್ಯದಿಂದ ತಮ್ಮ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ದಶಕಗಳಕಾಲ ಬಹುಬೇಡಿಕೆಯ ನಟಿಯಾಗಿ ಮಿಂಚಿದ್ದ ಲೀಲಾವತಿಯವರು ತಮ್ಮ ಅತ್ಯದ್ಭುತ ನಟನೆಯ ಮೂಲಕ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

lokesh

Recent Posts

ಕೊಲೆ ಪ್ರಕರಣ | ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋದ ಶಾಸಕ ವಿನಯ್‌ ಕುಲಕರ್ಣಿ

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್…

5 mins ago

ಅಪರಿಚಿತ ವ್ಯಕ್ತಿಯ ಕೊಲೆ ಜಾಡು ಪತ್ತೆ!

ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…

19 mins ago

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…

1 hour ago

ಕೊಡಗು | ಜಿಲ್ಲೆಯಲ್ಲಿ 2-3 ಸಾವಿರ ಅನಧಿಕೃತ ಹೋಂಸ್ಟೇ!

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ  ನವೀನ್…

2 hours ago

ಕೋಟೆ | ರೆಸಾರ್ಟ್‌, ಹೋಂ ಸ್ಟೇಗಳ ಮೇಲೆ ಹೆಚ್ಚಿನ ನಿಗಾ

ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…

2 hours ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…

2 hours ago