ಚಿತ್ರ ಮಂಜರಿ

ನಟಿ ಲೀಲಾವತಿ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಶಿವರಾಜ್ ಕುಮಾರ್

ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ಹಿರಿಯನಟಿ ಲೀಲಾವತಿ ಅವರ ಮನೆಗೆ ನಟ ಶಿವರಾಜ್‌ ಕುಮಾರ್‌ ದಂಪತಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿರುವ ನಟ ವಿನೋದ್‌ ರಾಜ್‌ ಅವರ ಮನೆಗೆ ಪತ್ನಿಯೋಂದಿಗೆ ಆಗಮಿಸಿದ ಶಿವಣ್ಣ ಲೀಲಾವತಿ ಅವರನ್ನು ಮಾತನಾಡಿಸುವ ಪ್ರಯತ್ನ ಮಾಡಿದರು. ನಂತರ ವಿನೋದ್‌ ರಾಜ್‌ ಅವರ ಬಳಿ ತಾಯಿಯ ಆರೋಗ್ಯ ವಿಚಾರಿಸಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸಹ ಲೀಲಾವತಿಯವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಮನೆಗೆ ಆಗಮಿಸಿದ ಉಪ ಮುಖ್ಯಮಂರಿಗಳನ್ನು ವಿನೋದ್‌ ರಾಜ್‌ ಅವರು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

ಭಾನುವಾರ ನಟ ದರ್ಶನ್‌ ಅವರು ಕೂಡ ಲೀಲಾವತಿಯವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.

ಇತ್ತೀಚೆಗೆ ಚಿತ್ರರಂಗದ ಹಲವು ನಟ ನಟಿಯರು ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ಮನೆಗೆ ತೆರಳಿ ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿಯ ಆರೋಗ್ಯ ವಿಚಾರಿಸುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಟ ಅರ್ಜುನ್‌ ಸರ್ಜಾ ಅವರು ಕೂಡ ಲೀಲಾವತಿಯವರ ಮನೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದ್ದರು.

ಕೆಲದಿನಗಳ ಹಿಂದೆ ಲೀಲಾವತಿಯವರು ನಿಧನರಾದರೆಂಬ ಸುಳ್ಳು ವದಂತಿಯನ್ನು ಹಬ್ಬಿಸಲಾಗಿತ್ತು. ಇದು ಅವರ ಪುತ್ರ ವಿನೋದ್‌ ರಾಜ್‌ ಅವರಿಗೆ ಬಹಳ ಬೇಸರ ತರಿಸಿತ್ತು. ಈ ಬಗ್ಗೆ ವಿನೋದ್‌ ರಾಜ್‌ ಅವರು ಸಂದರ್ಶನವೊಂದರಲ್ಲಿ ತಮ್ಮ ತಾಯಿಯ ಆರೋಗ್ಯದ ಬಗೆಗಿನ ಮಾಹಿತಿ ಹಂಚಿಕೊಂಡಿದ್ದರು. ಅಮ್ಮ ಆರೋಗ್ಯವಾಗಿದ್ದಾರೆ. ಅವರ ವಯಸ್ಸಿಗೆ ತಕ್ಕಂತೆ ಹೇಗೆ ಇರಬೇಕೋ ಹಾಗೆ ಇದ್ದಾರೆ ಅಮ್ಮ 86-87 ವಯಸ್ಸು ಮುಟ್ಟಿದ್ದಾರೆ. ಅವರ ಕಾಲದಲ್ಲಿ ಒಂದು ದಿನಕ್ಕೆ ನಾಲ್ಕು ಸಿನಿಮಾಗೆ ಪಾತ್ರ ಮಾಡಿದವರು. ಅಮ್ಮ ಒಟ್ಟು 650 ಸಿನಿಮಾಗಳಲ್ಲಿ ಅಭಿನಯ ಮಾಡಿದ್ದಾರೆ. ಜನ ಯಾಕೆ ಅಮ್ಮನ ಸಾವಿನ ಸುದ್ದಿ ಹಬ್ಬಿಸಿದ್ರು ಅನ್ನೋದನ್ನು ಮಂಜುನಾಥನಿಗೆ ಬಿಟ್ಟಿದ್ದೀವಿ. ಅವನೇ ನೋಡಿಕೊಳ್ಳಬೇಕು ಅಷ್ಟೇ ಎಂದು ಹೇಳಿದ್ದರು.

ನಟಿ ಲೀಲಾವತಿಯವರು ಕಳೆದ ಕೆಲ ವರ್ಷಗಳಿಂದ ವಯೋಸಹಜ ಅನಾರೋಗ್ಯದಿಂದ ತಮ್ಮ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ದಶಕಗಳಕಾಲ ಬಹುಬೇಡಿಕೆಯ ನಟಿಯಾಗಿ ಮಿಂಚಿದ್ದ ಲೀಲಾವತಿಯವರು ತಮ್ಮ ಅತ್ಯದ್ಭುತ ನಟನೆಯ ಮೂಲಕ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

lokesh

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

9 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

9 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

9 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

9 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago