ಚಿತ್ರ ಮಂಜರಿ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡೊಳ್ಳು ಚಿತ್ರ ವೀಕ್ಷಿಸಿದ ಸಿದ್ದೆರಾಮಯ್ಯ

 ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ,  ಸಿದ್ದರಾಮಯ್ಯ ನಿನ್ನೆ (ಮಂಗಳವಾರ) ಬೆಂಗಳೂರಿನ ಒರಾಯನ್ ಮಾಲ್‌ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜಕೀಯದ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಅವರು, ಸಿನಿಮಾ ತುಂಬಾ ಚೆನ್ನಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಜನಪದ ಕಲೆಯನ್ನು ಬೆಳೆಸಬೇಕು, ಉಳಿಯಬೇಕು ಎಂಬ ನಿಟ್ಟಿನಲ್ಲಿ ಸಿನಿಮಾ ಮಾಡಿದ್ದಾರೆ. ಕಲೆಗೆ ಜಾತಿ ಧರ್ಮ ಲಿಂಗಭೇದ ಯಾವುದು ಇರುವುದಿಲ್ಲ. ನಾಡಿನ ಸಾಂಪ್ರದಾಯಿಕ ಡೊಳ್ಳು ಬಾರಿಸುವ ಕಲೆಯನ್ನು ಪ್ರಧಾನವಾಗಿರಿಸಿಕೊಂಡು ನಿರ್ಮಿಸಿದ ಈ ಸಿನಿಮಾ ಅತ್ಯಂತ ಸೊಗಸಾಗಿ ಮೂಡಿಬಂದಿದೆ. ಚಿತ್ರ ತಂಡಕ್ಕೆ ನನ್ನ ಶುಭ ಹಾರೈಕೆಗಳು.  ಇಂತಹ ಸಿನಿಮಾಗಳು ಬರಬೇಕು. ಇಡೀ ತಂಡ ಒಳ್ಳೆದಾಗಲಿ ಎಂದು ಶುಭ ಹಾರೈಸಿದ್ದಾರೆ.

ಇನ್ನು ವಿಜೇತ ಸಾಗರ್ ಪುರಾಣಿಕ್ ಚಿತ್ರವನ್ನು ನಿರ್ದೆಶನ ಮಾಡಿದ್ದು, ಕಾರ್ತಿಕ್ ಮಹೇಶ್ ಮತ್ತು ನಿಧಿ ಹೆಗಡೆ ಜೊತೆಗೆ ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ಯ ಸುರೇಶ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

andolana

Recent Posts

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

2 mins ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

14 mins ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

18 mins ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

24 mins ago

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

16 hours ago