ಚಿತ್ರ ಮಂಜರಿ

ತೆಲುಗು ಧಾರಾವಾಹಿ ಶೂಟಿಂಗ್‌ ವೇಳೆ ಚಂದನ್‌ ಗೆ ಕಪಾಳಮೋಕ್ಷ

ನಟ ಚಂದನ್​ ಕುಮಾರ್​  ಕಿರುತೆರೆ ಮತ್ತು ಸಿನಿಮಾದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಧಾರಾವಾಹಿಯಲ್ಲೂ ಅವರು ನಟಿಸಿ ಫೇಮಸ್​ ಆಗಿದ್ದಾರೆ. ‘ಶ್ರೀಮತಿ ಶ್ರೀನಿವಾಸ್​’  ಧಾರಾವಾಹಿಯ ಶೂಟಿಂಗ್​ ವೇಳೆ ಚಂದನ್ ​ಕುಮಾರ್​ ಅವರ ಮೇಲೆ ಹಲ್ಲೆ ಆಗಿದೆ. ಸೀರಿಯಲ್​ ತಂತ್ರಜ್ಞರ ಜೊತೆ ಚಂದನ್​ ಕಿರಿಕ್​ ಮಾಡಿಕೊಂಡಿದ್ದು ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ. ಈ ಘಟನೆಯ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ಘಟನೆ ನಡೆದು ಬಹಳ ದಿನಗಳಾಗಿದ್ದು, ಈಗ ಪ್ರಕರಣ ಬೆಳಕಿಗೆ ಬಂದಿದೆ.

ಯಾವ ಕಾರಣಕ್ಕಾಗಿ ಈ ಹಲ್ಲೆ ನಡೆದಿದೆ ಎಂಬುದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಮೊದಲು ಚಂದನ್​ ಅವರಿಂದ ಕ್ಯಾಮೆರಾಮ್ಯಾನ್​ ಮೇಲೆ ಹಲ್ಲೆ ನಡೆಯಿತು. ಆ ಕಾರಣದಿಂದಲೇ ತಂತ್ರಜ್ಞರು ಚಂದನ್​ ವಿರುದ್ಧ ತಿರುಗಿ ಬಿದ್ದರು ಎಂದು ಹೇಳಲಾಗುತ್ತಿದೆ. ಬಳಿಕ ಚಂದನ್​ ಕ್ಷಮೆ ಕೇಳಿದರೂ ಕೂಡ ಅಲ್ಲಿದ್ದ ಯಾರೊಬ್ಬರೂ ಸಮಾಧಾನಗೊಂಡಿಲ್ಲ. ಪರಿಸ್ಥಿತಿ ಬಿಡಗಾಯಿಸಿದಾಗ ಕೈಕೈ ಮಿಲಾಯಿಸಿದ್ದಾರೆ.

ಹಲವು ವರ್ಷಗಳಿಂದ ಚಂದನ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಸಿನಿಮಾ ಮತ್ತು ಸೀರಿಯಲ್​ ಎರಡೂ ಕ್ಷೇತ್ರದಲ್ಲಿ ಅವರು ಹೆಸರು ಗಳಿಸಿದ್ದಾರೆ. ಕನ್ನಡದ ‘ರಾಧಾ ಕಲ್ಯಾಣ’, ‘ಲಕ್ಷ್ಮೀ ಬಾರಮ್ಮ’ ಮುಂತಾದ ಧಾರಾವಾಹಿಯಿಂದ ಅವರು ಮನೆಮಾತಾಗಿದ್ದಾರೆ. ‘ಸಾವಿತ್ರಮ್ಮ ಗಾರಿ ಅಬ್ಬಾಯಿ’ ಮೂಲಕ ತೆಲುಗು ಕಿರುತೆರೆಗೂ ಚಂದನ್​ ಕುಮಾರ್​ ಎಂಟ್ರಿ ನೀಡಿದ್ದರು. ನಂತರ  ‘ಶ್ರೀಮತಿ ಶ್ರೀನಿವಾಸ್​’ ಧಾರಾವಾಹಿ ಒಪ್ಪಿಕೊಂಡರು. ಅದೇ ಸೀರಿಯಲ್​ ಸೆಟ್​ನಲ್ಲಿ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ.

 

andolana

Recent Posts

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

7 mins ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

26 mins ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

1 hour ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

2 hours ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

2 hours ago

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…

2 hours ago