ಚಿತ್ರ ಮಂಜರಿ

ತೆಲುಗು ಧಾರಾವಾಹಿ ಶೂಟಿಂಗ್‌ ವೇಳೆ ಚಂದನ್‌ ಗೆ ಕಪಾಳಮೋಕ್ಷ

ನಟ ಚಂದನ್​ ಕುಮಾರ್​  ಕಿರುತೆರೆ ಮತ್ತು ಸಿನಿಮಾದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಧಾರಾವಾಹಿಯಲ್ಲೂ ಅವರು ನಟಿಸಿ ಫೇಮಸ್​ ಆಗಿದ್ದಾರೆ. ‘ಶ್ರೀಮತಿ ಶ್ರೀನಿವಾಸ್​’  ಧಾರಾವಾಹಿಯ ಶೂಟಿಂಗ್​ ವೇಳೆ ಚಂದನ್ ​ಕುಮಾರ್​ ಅವರ ಮೇಲೆ ಹಲ್ಲೆ ಆಗಿದೆ. ಸೀರಿಯಲ್​ ತಂತ್ರಜ್ಞರ ಜೊತೆ ಚಂದನ್​ ಕಿರಿಕ್​ ಮಾಡಿಕೊಂಡಿದ್ದು ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ. ಈ ಘಟನೆಯ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ಘಟನೆ ನಡೆದು ಬಹಳ ದಿನಗಳಾಗಿದ್ದು, ಈಗ ಪ್ರಕರಣ ಬೆಳಕಿಗೆ ಬಂದಿದೆ.

ಯಾವ ಕಾರಣಕ್ಕಾಗಿ ಈ ಹಲ್ಲೆ ನಡೆದಿದೆ ಎಂಬುದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಮೊದಲು ಚಂದನ್​ ಅವರಿಂದ ಕ್ಯಾಮೆರಾಮ್ಯಾನ್​ ಮೇಲೆ ಹಲ್ಲೆ ನಡೆಯಿತು. ಆ ಕಾರಣದಿಂದಲೇ ತಂತ್ರಜ್ಞರು ಚಂದನ್​ ವಿರುದ್ಧ ತಿರುಗಿ ಬಿದ್ದರು ಎಂದು ಹೇಳಲಾಗುತ್ತಿದೆ. ಬಳಿಕ ಚಂದನ್​ ಕ್ಷಮೆ ಕೇಳಿದರೂ ಕೂಡ ಅಲ್ಲಿದ್ದ ಯಾರೊಬ್ಬರೂ ಸಮಾಧಾನಗೊಂಡಿಲ್ಲ. ಪರಿಸ್ಥಿತಿ ಬಿಡಗಾಯಿಸಿದಾಗ ಕೈಕೈ ಮಿಲಾಯಿಸಿದ್ದಾರೆ.

ಹಲವು ವರ್ಷಗಳಿಂದ ಚಂದನ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಸಿನಿಮಾ ಮತ್ತು ಸೀರಿಯಲ್​ ಎರಡೂ ಕ್ಷೇತ್ರದಲ್ಲಿ ಅವರು ಹೆಸರು ಗಳಿಸಿದ್ದಾರೆ. ಕನ್ನಡದ ‘ರಾಧಾ ಕಲ್ಯಾಣ’, ‘ಲಕ್ಷ್ಮೀ ಬಾರಮ್ಮ’ ಮುಂತಾದ ಧಾರಾವಾಹಿಯಿಂದ ಅವರು ಮನೆಮಾತಾಗಿದ್ದಾರೆ. ‘ಸಾವಿತ್ರಮ್ಮ ಗಾರಿ ಅಬ್ಬಾಯಿ’ ಮೂಲಕ ತೆಲುಗು ಕಿರುತೆರೆಗೂ ಚಂದನ್​ ಕುಮಾರ್​ ಎಂಟ್ರಿ ನೀಡಿದ್ದರು. ನಂತರ  ‘ಶ್ರೀಮತಿ ಶ್ರೀನಿವಾಸ್​’ ಧಾರಾವಾಹಿ ಒಪ್ಪಿಕೊಂಡರು. ಅದೇ ಸೀರಿಯಲ್​ ಸೆಟ್​ನಲ್ಲಿ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ.

 

andolana

Recent Posts

ಸರ್ಕಾರ ಮಕ್ಕಳಿಗೆ ವೈಚಾರಿಕ ಶಿಕ್ಷಣ ನೀಡಲಿ: ಪ್ರೊ.ಕೆ.ಎಸ್ ಭಗವಾನ್

ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…

10 mins ago

ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…

1 hour ago

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ: ಡಿಸಿಎಂ ಡಿ.ಕೆ.ಶಿ ಆಕ್ರೋಶ

ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್‌ ಬಗ್ಗೆ…

2 hours ago

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

4 hours ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

4 hours ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

5 hours ago