ನಟ ಚಂದನ್ ಕುಮಾರ್ ಕಿರುತೆರೆ ಮತ್ತು ಸಿನಿಮಾದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಧಾರಾವಾಹಿಯಲ್ಲೂ ಅವರು ನಟಿಸಿ ಫೇಮಸ್ ಆಗಿದ್ದಾರೆ. ‘ಶ್ರೀಮತಿ ಶ್ರೀನಿವಾಸ್’ ಧಾರಾವಾಹಿಯ ಶೂಟಿಂಗ್ ವೇಳೆ ಚಂದನ್ ಕುಮಾರ್ ಅವರ ಮೇಲೆ ಹಲ್ಲೆ ಆಗಿದೆ. ಸೀರಿಯಲ್ ತಂತ್ರಜ್ಞರ ಜೊತೆ ಚಂದನ್ ಕಿರಿಕ್ ಮಾಡಿಕೊಂಡಿದ್ದು ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ. ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದು ಬಹಳ ದಿನಗಳಾಗಿದ್ದು, ಈಗ ಪ್ರಕರಣ ಬೆಳಕಿಗೆ ಬಂದಿದೆ.
ಯಾವ ಕಾರಣಕ್ಕಾಗಿ ಈ ಹಲ್ಲೆ ನಡೆದಿದೆ ಎಂಬುದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಮೊದಲು ಚಂದನ್ ಅವರಿಂದ ಕ್ಯಾಮೆರಾಮ್ಯಾನ್ ಮೇಲೆ ಹಲ್ಲೆ ನಡೆಯಿತು. ಆ ಕಾರಣದಿಂದಲೇ ತಂತ್ರಜ್ಞರು ಚಂದನ್ ವಿರುದ್ಧ ತಿರುಗಿ ಬಿದ್ದರು ಎಂದು ಹೇಳಲಾಗುತ್ತಿದೆ. ಬಳಿಕ ಚಂದನ್ ಕ್ಷಮೆ ಕೇಳಿದರೂ ಕೂಡ ಅಲ್ಲಿದ್ದ ಯಾರೊಬ್ಬರೂ ಸಮಾಧಾನಗೊಂಡಿಲ್ಲ. ಪರಿಸ್ಥಿತಿ ಬಿಡಗಾಯಿಸಿದಾಗ ಕೈಕೈ ಮಿಲಾಯಿಸಿದ್ದಾರೆ.
ಹಲವು ವರ್ಷಗಳಿಂದ ಚಂದನ್ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಸಿನಿಮಾ ಮತ್ತು ಸೀರಿಯಲ್ ಎರಡೂ ಕ್ಷೇತ್ರದಲ್ಲಿ ಅವರು ಹೆಸರು ಗಳಿಸಿದ್ದಾರೆ. ಕನ್ನಡದ ‘ರಾಧಾ ಕಲ್ಯಾಣ’, ‘ಲಕ್ಷ್ಮೀ ಬಾರಮ್ಮ’ ಮುಂತಾದ ಧಾರಾವಾಹಿಯಿಂದ ಅವರು ಮನೆಮಾತಾಗಿದ್ದಾರೆ. ‘ಸಾವಿತ್ರಮ್ಮ ಗಾರಿ ಅಬ್ಬಾಯಿ’ ಮೂಲಕ ತೆಲುಗು ಕಿರುತೆರೆಗೂ ಚಂದನ್ ಕುಮಾರ್ ಎಂಟ್ರಿ ನೀಡಿದ್ದರು. ನಂತರ ‘ಶ್ರೀಮತಿ ಶ್ರೀನಿವಾಸ್’ ಧಾರಾವಾಹಿ ಒಪ್ಪಿಕೊಂಡರು. ಅದೇ ಸೀರಿಯಲ್ ಸೆಟ್ನಲ್ಲಿ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ.
ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…
ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…