ನಟ ಚಂದನ್ ಕುಮಾರ್ ಕಿರುತೆರೆ ಮತ್ತು ಸಿನಿಮಾದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಧಾರಾವಾಹಿಯಲ್ಲೂ ಅವರು ನಟಿಸಿ ಫೇಮಸ್ ಆಗಿದ್ದಾರೆ. ‘ಶ್ರೀಮತಿ ಶ್ರೀನಿವಾಸ್’ ಧಾರಾವಾಹಿಯ ಶೂಟಿಂಗ್ ವೇಳೆ ಚಂದನ್ ಕುಮಾರ್ ಅವರ ಮೇಲೆ ಹಲ್ಲೆ ಆಗಿದೆ. ಸೀರಿಯಲ್ ತಂತ್ರಜ್ಞರ ಜೊತೆ ಚಂದನ್ ಕಿರಿಕ್ ಮಾಡಿಕೊಂಡಿದ್ದು ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ. ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದು ಬಹಳ ದಿನಗಳಾಗಿದ್ದು, ಈಗ ಪ್ರಕರಣ ಬೆಳಕಿಗೆ ಬಂದಿದೆ.
ಯಾವ ಕಾರಣಕ್ಕಾಗಿ ಈ ಹಲ್ಲೆ ನಡೆದಿದೆ ಎಂಬುದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಮೊದಲು ಚಂದನ್ ಅವರಿಂದ ಕ್ಯಾಮೆರಾಮ್ಯಾನ್ ಮೇಲೆ ಹಲ್ಲೆ ನಡೆಯಿತು. ಆ ಕಾರಣದಿಂದಲೇ ತಂತ್ರಜ್ಞರು ಚಂದನ್ ವಿರುದ್ಧ ತಿರುಗಿ ಬಿದ್ದರು ಎಂದು ಹೇಳಲಾಗುತ್ತಿದೆ. ಬಳಿಕ ಚಂದನ್ ಕ್ಷಮೆ ಕೇಳಿದರೂ ಕೂಡ ಅಲ್ಲಿದ್ದ ಯಾರೊಬ್ಬರೂ ಸಮಾಧಾನಗೊಂಡಿಲ್ಲ. ಪರಿಸ್ಥಿತಿ ಬಿಡಗಾಯಿಸಿದಾಗ ಕೈಕೈ ಮಿಲಾಯಿಸಿದ್ದಾರೆ.
ಹಲವು ವರ್ಷಗಳಿಂದ ಚಂದನ್ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಸಿನಿಮಾ ಮತ್ತು ಸೀರಿಯಲ್ ಎರಡೂ ಕ್ಷೇತ್ರದಲ್ಲಿ ಅವರು ಹೆಸರು ಗಳಿಸಿದ್ದಾರೆ. ಕನ್ನಡದ ‘ರಾಧಾ ಕಲ್ಯಾಣ’, ‘ಲಕ್ಷ್ಮೀ ಬಾರಮ್ಮ’ ಮುಂತಾದ ಧಾರಾವಾಹಿಯಿಂದ ಅವರು ಮನೆಮಾತಾಗಿದ್ದಾರೆ. ‘ಸಾವಿತ್ರಮ್ಮ ಗಾರಿ ಅಬ್ಬಾಯಿ’ ಮೂಲಕ ತೆಲುಗು ಕಿರುತೆರೆಗೂ ಚಂದನ್ ಕುಮಾರ್ ಎಂಟ್ರಿ ನೀಡಿದ್ದರು. ನಂತರ ‘ಶ್ರೀಮತಿ ಶ್ರೀನಿವಾಸ್’ ಧಾರಾವಾಹಿ ಒಪ್ಪಿಕೊಂಡರು. ಅದೇ ಸೀರಿಯಲ್ ಸೆಟ್ನಲ್ಲಿ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…