ಈಗಾಗಲೇ ಜನರ ಮನ ಗೆದ್ದಿರುವ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾವನ್ನು ನಟ ಕಿಚ್ಚ ಸುದೀಪ್ ಮೆಚ್ಚಿಕೊಂಡಿದ್ದಾರೆ.
ಸಿನಿಮಾ ನೋಡಿದ ಬಳಿಕ ತಮ್ಮ ಅನಿಸಿಕೆಯನ್ನು ಸೋಷಿಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕಿಚ್ಚ, ಚಿತ್ರದ ಬಗ್ಗೆ ಹೊಗಳಿಕೆಯ ಹೂ ಮಳೆಗರೆದಿದ್ದಾರೆ. ನಟನಾಗಿ ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ ಅವರ ಪ್ರಯತ್ನವನ್ನು ಸುದೀಪ್ ಪ್ರಶಂಸಿಸಿದ್ದಾರೆ. ಅದಷ್ಟೇ ಅಲ್ಲದೇ ನಟಿಮಣಿಯರಾದ ರುಕ್ಮಿಣಿ ವಸಂತ್ ಹಾಗೂ ಚೈತ್ರ ಜೆ ಆಚಾರ್ ಅವರ ನಟನೆಯನ್ನೂ ಸಹ ಮೆಚ್ಚಿಕೊಂಡಿದ್ದಾರೆ.
ಚಿತ್ರದ ಬಗ್ಗೆ ತಮ್ಮ ರಿವ್ಯೂ ಹಂಚಿಕೊಂಡಿರುವ ಅಭಿನಯ ಚಕ್ರವರ್ತಿ ಅತ್ಯುತ್ತಮ ನಟನೆ, ಅತ್ಯುತ್ತಮ ನಿರ್ದೇಶನ,ಅತ್ಯುತ್ತಮ ಛಾಯಾಗ್ರಹಣ. ಇಂತಹ ಸಿನಿಮಾ ಮಾಡಲು ಧೈರ್ಯ ತೋರಿಸಿದ ನಿಮ್ಮನ್ನು ನಾನು ಬಹಳಾ ಗೌರವಿಸುತ್ತೇನೆ. ಹೇಮಂತ್ ರಾವ್ ಅವರು ಅದ್ಭುತ ವಿಷನ್ ಇರುವ ನಿರ್ದೇಶಕ. ಕ್ಯಾಪ್ಟನ್ ಸ್ಥಾನದಲ್ಲಿ ಅವರ ಕೆಲಸ ಪರ್ಫೆಕ್ಟ್ ಆಗಿದೆ. ನಿಮ್ಮ ಹಾಗೂ ನಿಮ್ಮ ತಂಡದ ಬಗ್ಗೆ ಹೆಮ್ಮೆ ಮೂಡಿದೆ. ಕತ್ತೆ ಎಂದು ಬರೆದುಕೊಂಡಿದ್ದಾರೆ.
ನವೆಂಬರ್ 17 ರಂದು ಕನ್ನಡದ ಬಹು ನಿರೀಕ್ಷಿತ ಸಿನಿಮಾ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಬಿಡುಗಡೆಗೊಂಡಿತ್ತು. ಸೆಪ್ಟೆಂಬರ್ 1ರಂದು ಬಿಡುಗಡೆಯಾಗಿದ್ದ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಮೊದಲ ಭಾಗ ಸೈಡ್ ಎ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಬಾಕ್ಸ್ ಆಫೀಸ್ನಲ್ಲಿ 20 ಕೋಟಿಗೂ ಹೆಚ್ಚು ಗಳಿಕೆ ಮಾಡಿ ಯಶಸ್ಸು ಸಾಧಿಸಿತ್ತು.
ಕೇವಲ ಕನ್ನಡದಲ್ಲಿ ಮಾತ್ರ ಥಿಯೇಟ್ರಿಕಲ್ ಬಿಡುಗಡೆ ಕಂಡಿದ್ದ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಓಟಿಟಿಯಲ್ಲಿ ಪರಭಾಷೆಗಳಿಗೂ ಸಹ ಡಬ್ ಆಗಿ ಆ ಪ್ರೇಕ್ಷಕರಿಂದಲೂ ಸಹ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡ ಕಾರಣ ಇದೀಗ ಎರಡನೇ ಭಾಗವನ್ನು ಚಿತ್ರತಂಡ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಿಗೂ ಸಹ ಡಬ್ ಮಾಡಿ ಬಿಡುಗಡೆ ಮಾಡಿದೆ.
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…