ಈಗಾಗಲೇ ಜನರ ಮನ ಗೆದ್ದಿರುವ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾವನ್ನು ನಟ ಕಿಚ್ಚ ಸುದೀಪ್ ಮೆಚ್ಚಿಕೊಂಡಿದ್ದಾರೆ.
ಸಿನಿಮಾ ನೋಡಿದ ಬಳಿಕ ತಮ್ಮ ಅನಿಸಿಕೆಯನ್ನು ಸೋಷಿಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕಿಚ್ಚ, ಚಿತ್ರದ ಬಗ್ಗೆ ಹೊಗಳಿಕೆಯ ಹೂ ಮಳೆಗರೆದಿದ್ದಾರೆ. ನಟನಾಗಿ ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ ಅವರ ಪ್ರಯತ್ನವನ್ನು ಸುದೀಪ್ ಪ್ರಶಂಸಿಸಿದ್ದಾರೆ. ಅದಷ್ಟೇ ಅಲ್ಲದೇ ನಟಿಮಣಿಯರಾದ ರುಕ್ಮಿಣಿ ವಸಂತ್ ಹಾಗೂ ಚೈತ್ರ ಜೆ ಆಚಾರ್ ಅವರ ನಟನೆಯನ್ನೂ ಸಹ ಮೆಚ್ಚಿಕೊಂಡಿದ್ದಾರೆ.
ಚಿತ್ರದ ಬಗ್ಗೆ ತಮ್ಮ ರಿವ್ಯೂ ಹಂಚಿಕೊಂಡಿರುವ ಅಭಿನಯ ಚಕ್ರವರ್ತಿ ಅತ್ಯುತ್ತಮ ನಟನೆ, ಅತ್ಯುತ್ತಮ ನಿರ್ದೇಶನ,ಅತ್ಯುತ್ತಮ ಛಾಯಾಗ್ರಹಣ. ಇಂತಹ ಸಿನಿಮಾ ಮಾಡಲು ಧೈರ್ಯ ತೋರಿಸಿದ ನಿಮ್ಮನ್ನು ನಾನು ಬಹಳಾ ಗೌರವಿಸುತ್ತೇನೆ. ಹೇಮಂತ್ ರಾವ್ ಅವರು ಅದ್ಭುತ ವಿಷನ್ ಇರುವ ನಿರ್ದೇಶಕ. ಕ್ಯಾಪ್ಟನ್ ಸ್ಥಾನದಲ್ಲಿ ಅವರ ಕೆಲಸ ಪರ್ಫೆಕ್ಟ್ ಆಗಿದೆ. ನಿಮ್ಮ ಹಾಗೂ ನಿಮ್ಮ ತಂಡದ ಬಗ್ಗೆ ಹೆಮ್ಮೆ ಮೂಡಿದೆ. ಕತ್ತೆ ಎಂದು ಬರೆದುಕೊಂಡಿದ್ದಾರೆ.
ನವೆಂಬರ್ 17 ರಂದು ಕನ್ನಡದ ಬಹು ನಿರೀಕ್ಷಿತ ಸಿನಿಮಾ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಬಿಡುಗಡೆಗೊಂಡಿತ್ತು. ಸೆಪ್ಟೆಂಬರ್ 1ರಂದು ಬಿಡುಗಡೆಯಾಗಿದ್ದ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಮೊದಲ ಭಾಗ ಸೈಡ್ ಎ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಬಾಕ್ಸ್ ಆಫೀಸ್ನಲ್ಲಿ 20 ಕೋಟಿಗೂ ಹೆಚ್ಚು ಗಳಿಕೆ ಮಾಡಿ ಯಶಸ್ಸು ಸಾಧಿಸಿತ್ತು.
ಕೇವಲ ಕನ್ನಡದಲ್ಲಿ ಮಾತ್ರ ಥಿಯೇಟ್ರಿಕಲ್ ಬಿಡುಗಡೆ ಕಂಡಿದ್ದ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಓಟಿಟಿಯಲ್ಲಿ ಪರಭಾಷೆಗಳಿಗೂ ಸಹ ಡಬ್ ಆಗಿ ಆ ಪ್ರೇಕ್ಷಕರಿಂದಲೂ ಸಹ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡ ಕಾರಣ ಇದೀಗ ಎರಡನೇ ಭಾಗವನ್ನು ಚಿತ್ರತಂಡ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಿಗೂ ಸಹ ಡಬ್ ಮಾಡಿ ಬಿಡುಗಡೆ ಮಾಡಿದೆ.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…