ಚಿತ್ರ ಮಂಜರಿ

ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ ನೋಡಿ ಹೊಗಳಿಕೆಯ ಹೂ ಮಳೆಗರೆದ ಕಿಚ್ಚ

ಈಗಾಗಲೇ ಜನರ ಮನ ಗೆದ್ದಿರುವ ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ ಸಿನಿಮಾವನ್ನು ನಟ ಕಿಚ್ಚ ಸುದೀಪ್‌ ಮೆಚ್ಚಿಕೊಂಡಿದ್ದಾರೆ.

ಸಿನಿಮಾ ನೋಡಿದ ಬಳಿಕ ತಮ್ಮ ಅನಿಸಿಕೆಯನ್ನು ಸೋಷಿಲ್‌ ಮೀಡಿಯಾದಲ್ಲಿ ಹಂಚಿಕೊಂಡಿರುವ ಕಿಚ್ಚ, ಚಿತ್ರದ ಬಗ್ಗೆ ಹೊಗಳಿಕೆಯ ಹೂ ಮಳೆಗರೆದಿದ್ದಾರೆ. ನಟನಾಗಿ ನಿರ್ಮಾಪಕನಾಗಿ ರಕ್ಷಿತ್‌ ಶೆಟ್ಟಿ ಅವರ ಪ್ರಯತ್ನವನ್ನು ಸುದೀಪ್‌ ಪ್ರಶಂಸಿಸಿದ್ದಾರೆ. ಅದಷ್ಟೇ ಅಲ್ಲದೇ ನಟಿಮಣಿಯರಾದ ರುಕ್ಮಿಣಿ ವಸಂತ್‌ ಹಾಗೂ ಚೈತ್ರ ಜೆ ಆಚಾರ್‌ ಅವರ ನಟನೆಯನ್ನೂ ಸಹ ಮೆಚ್ಚಿಕೊಂಡಿದ್ದಾರೆ.

ಚಿತ್ರದ ಬಗ್ಗೆ ತಮ್ಮ ರಿವ್ಯೂ ಹಂಚಿಕೊಂಡಿರುವ ಅಭಿನಯ ಚಕ್ರವರ್ತಿ ಅತ್ಯುತ್ತಮ ನಟನೆ, ಅತ್ಯುತ್ತಮ ನಿರ್ದೇಶನ,ಅತ್ಯುತ್ತಮ ಛಾಯಾಗ್ರಹಣ. ಇಂತಹ ಸಿನಿಮಾ ಮಾಡಲು ಧೈರ್ಯ ತೋರಿಸಿದ ನಿಮ್ಮನ್ನು ನಾನು ಬಹಳಾ ಗೌರವಿಸುತ್ತೇನೆ. ಹೇಮಂತ್‌ ರಾವ್‌ ಅವರು ಅದ್ಭುತ ವಿಷನ್‌ ಇರುವ ನಿರ್ದೇಶಕ. ಕ್ಯಾಪ್ಟನ್‌ ಸ್ಥಾನದಲ್ಲಿ ಅವರ ಕೆಲಸ ಪರ್ಫೆಕ್ಟ್‌ ಆಗಿದೆ. ನಿಮ್ಮ ಹಾಗೂ ನಿಮ್ಮ ತಂಡದ ಬಗ್ಗೆ ಹೆಮ್ಮೆ ಮೂಡಿದೆ. ಕತ್ತೆ ಎಂದು ಬರೆದುಕೊಂಡಿದ್ದಾರೆ.

ನವೆಂಬರ್‌ 17 ರಂದು ಕನ್ನಡದ ಬಹು ನಿರೀಕ್ಷಿತ ಸಿನಿಮಾ ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿ ಬಿಡುಗಡೆಗೊಂಡಿತ್ತು. ಸೆಪ್ಟೆಂಬರ್‌ 1ರಂದು ಬಿಡುಗಡೆಯಾಗಿದ್ದ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಮೊದಲ ಭಾಗ ಸೈಡ್‌ ಎ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಬಾಕ್ಸ್‌ ಆಫೀಸ್‌ನಲ್ಲಿ 20 ಕೋಟಿಗೂ ಹೆಚ್ಚು ಗಳಿಕೆ ಮಾಡಿ ಯಶಸ್ಸು ಸಾಧಿಸಿತ್ತು.

ಕೇವಲ ಕನ್ನಡದಲ್ಲಿ ಮಾತ್ರ ಥಿಯೇಟ್ರಿಕಲ್‌ ಬಿಡುಗಡೆ ಕಂಡಿದ್ದ ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಎ ಓಟಿಟಿಯಲ್ಲಿ ಪರಭಾಷೆಗಳಿಗೂ ಸಹ ಡಬ್‌ ಆಗಿ ಆ ಪ್ರೇಕ್ಷಕರಿಂದಲೂ ಸಹ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡ ಕಾರಣ ಇದೀಗ ಎರಡನೇ ಭಾಗವನ್ನು ಚಿತ್ರತಂಡ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಿಗೂ ಸಹ ಡಬ್‌ ಮಾಡಿ ಬಿಡುಗಡೆ ಮಾಡಿದೆ.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago