ಚಿತ್ರ ಮಂಜರಿ

ಡಾಲಿ ಹುಟ್ಟುಹಬ್ಬಕ್ಕೆ ಸ್ಪೆಷಲ್‌ ಗಿಫ್ಟ್‌ : ಬಡವ ರಾಸ್ಕಲ್ ತಂಡದಿಂದ ಮತ್ತೊಂದು ಸಿನಿಮಾ ಘೋಷಣೆ

ನಟರಾಕ್ಷಸ ಡಾಲಿ ಧನಂಜಯ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಡಾಲಿ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾಗಳ ಪೋಸ್ಟರ್, ಟೀಸರ್ ಉಡುಗೊರೆಯಾಗಿ ಸಿಕ್ಕಿದೆ. ಅದರಂತೆ ಬಡವ ರಾಸ್ಕಲ್ ಚಿತ್ರತಂಡದಿಂದ ಡಾಲಿ ಬರ್ತ್ ಡೇ ಸ್ಪೆಷಲ್ ಗಿಫ್ಟ್ ಸಿಕ್ಕಿದೆ. ಮಧ್ಯರಾತ್ರಿ 12 ಗಂಟೆಗೆ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಅನೌನ್ಸ್ ಮಾಡಲಾಗಿದೆ. ಈ ಚಿತ್ರಕ್ಕೆ ’ಅಣ್ಣ From Mexico’ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.

2021ರಲ್ಲಿ ತೆರೆಗೆ ಬಂದ ಬಡವ ರಾಸ್ಕಲ್ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಧನಂಜಯ್ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದರು. ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸಿ ನಟಿಸಿದ್ದ ಬಡವ ರಾಸ್ಕಲ್ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ಮೊದಲ ಹೆಜ್ಜೆಯಲ್ಲಿಯೇ ಗೆದ್ದಿದ್ದ ಶಂಕರ್ ಗುರು ಈಗ ಮತ್ತೊಂದು ಚೆಂದದ ಕಥೆ ಮಾಡಿ ಡಾಲಿ ಫ್ಯಾನ್ಸ್ ರಂಜಿಸಲು ಅಣಿಯಾಗಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇಂದು ’ಅಣ್ಣ From Mexico’ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಕೊರಳಿಗೆ ಕರ್ನಾಟಕ ಮ್ಯಾಪ್ ಇರುವ ಪೆಂಡೆಂಟ್ ಆಭರಣ ಧರಿಸಿ, ಸೂಟ್ ತೊಟ್ಟಿರುವ ಧನಂಜಯ್ ಲುಕ್ ರಿವೀಲ್ ಮಾಡದೇ ಚಿತ್ರತಂಡ ನಿರೀಕ್ಷೆ ಹೆಚ್ಚಿಸಿದೆ. ’ಅಣ್ಣ From Mexico’ ಶಂಕರ್ ಗುರು ನಿರ್ದೇಶನದ ಎರಡನೇ ಸಿನಿಮಾ. ಪಕ್ಕ ಆಕ್ಷನ್ ಎಂಟರ್ ಟೈನರ್ ಚಿತ್ರವಾಗಿದ್ದು, ಅಜ್ಜಿ ಮೊಮ್ಮಗನ ಬಾಂಧವ್ಯದ ಕಥೆಯೂ ಸಿನಿಮಾದಲ್ಲಿರಲಿದೆ.

ಸತ್ಯ ರಾಯಲ್ ನಿರ್ಮಾಣದಲ್ಲಿ ತಯಾರಾಗಲಿರುವ ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಲಿದ್ದು, ನವೆಂಬರ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದ್ದು, ಮೆಕ್ಸಿಕೋ ಸೇರಿದಂತೆ ಹಲವೆಡೆ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

4 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago