ಚಿತ್ರ ಮಂಜರಿ

ಡಾಲಿ ಹುಟ್ಟುಹಬ್ಬಕ್ಕೆ ಸ್ಪೆಷಲ್‌ ಗಿಫ್ಟ್‌ : ಬಡವ ರಾಸ್ಕಲ್ ತಂಡದಿಂದ ಮತ್ತೊಂದು ಸಿನಿಮಾ ಘೋಷಣೆ

ನಟರಾಕ್ಷಸ ಡಾಲಿ ಧನಂಜಯ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಡಾಲಿ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾಗಳ ಪೋಸ್ಟರ್, ಟೀಸರ್ ಉಡುಗೊರೆಯಾಗಿ ಸಿಕ್ಕಿದೆ. ಅದರಂತೆ ಬಡವ ರಾಸ್ಕಲ್ ಚಿತ್ರತಂಡದಿಂದ ಡಾಲಿ ಬರ್ತ್ ಡೇ ಸ್ಪೆಷಲ್ ಗಿಫ್ಟ್ ಸಿಕ್ಕಿದೆ. ಮಧ್ಯರಾತ್ರಿ 12 ಗಂಟೆಗೆ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಅನೌನ್ಸ್ ಮಾಡಲಾಗಿದೆ. ಈ ಚಿತ್ರಕ್ಕೆ ’ಅಣ್ಣ From Mexico’ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.

2021ರಲ್ಲಿ ತೆರೆಗೆ ಬಂದ ಬಡವ ರಾಸ್ಕಲ್ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಧನಂಜಯ್ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದರು. ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸಿ ನಟಿಸಿದ್ದ ಬಡವ ರಾಸ್ಕಲ್ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ಮೊದಲ ಹೆಜ್ಜೆಯಲ್ಲಿಯೇ ಗೆದ್ದಿದ್ದ ಶಂಕರ್ ಗುರು ಈಗ ಮತ್ತೊಂದು ಚೆಂದದ ಕಥೆ ಮಾಡಿ ಡಾಲಿ ಫ್ಯಾನ್ಸ್ ರಂಜಿಸಲು ಅಣಿಯಾಗಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇಂದು ’ಅಣ್ಣ From Mexico’ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಕೊರಳಿಗೆ ಕರ್ನಾಟಕ ಮ್ಯಾಪ್ ಇರುವ ಪೆಂಡೆಂಟ್ ಆಭರಣ ಧರಿಸಿ, ಸೂಟ್ ತೊಟ್ಟಿರುವ ಧನಂಜಯ್ ಲುಕ್ ರಿವೀಲ್ ಮಾಡದೇ ಚಿತ್ರತಂಡ ನಿರೀಕ್ಷೆ ಹೆಚ್ಚಿಸಿದೆ. ’ಅಣ್ಣ From Mexico’ ಶಂಕರ್ ಗುರು ನಿರ್ದೇಶನದ ಎರಡನೇ ಸಿನಿಮಾ. ಪಕ್ಕ ಆಕ್ಷನ್ ಎಂಟರ್ ಟೈನರ್ ಚಿತ್ರವಾಗಿದ್ದು, ಅಜ್ಜಿ ಮೊಮ್ಮಗನ ಬಾಂಧವ್ಯದ ಕಥೆಯೂ ಸಿನಿಮಾದಲ್ಲಿರಲಿದೆ.

ಸತ್ಯ ರಾಯಲ್ ನಿರ್ಮಾಣದಲ್ಲಿ ತಯಾರಾಗಲಿರುವ ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಲಿದ್ದು, ನವೆಂಬರ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದ್ದು, ಮೆಕ್ಸಿಕೋ ಸೇರಿದಂತೆ ಹಲವೆಡೆ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

lokesh

Recent Posts

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

12 mins ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

56 mins ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

1 hour ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

7 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

7 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

10 hours ago