ಚಿತ್ರ ಮಂಜರಿ

ಡಾಲಿ ಹುಟ್ಟುಹಬ್ಬಕ್ಕೆ ಸ್ಪೆಷಲ್‌ ಗಿಫ್ಟ್‌ : ಬಡವ ರಾಸ್ಕಲ್ ತಂಡದಿಂದ ಮತ್ತೊಂದು ಸಿನಿಮಾ ಘೋಷಣೆ

ನಟರಾಕ್ಷಸ ಡಾಲಿ ಧನಂಜಯ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಡಾಲಿ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾಗಳ ಪೋಸ್ಟರ್, ಟೀಸರ್ ಉಡುಗೊರೆಯಾಗಿ ಸಿಕ್ಕಿದೆ. ಅದರಂತೆ ಬಡವ ರಾಸ್ಕಲ್ ಚಿತ್ರತಂಡದಿಂದ ಡಾಲಿ ಬರ್ತ್ ಡೇ ಸ್ಪೆಷಲ್ ಗಿಫ್ಟ್ ಸಿಕ್ಕಿದೆ. ಮಧ್ಯರಾತ್ರಿ 12 ಗಂಟೆಗೆ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಅನೌನ್ಸ್ ಮಾಡಲಾಗಿದೆ. ಈ ಚಿತ್ರಕ್ಕೆ ’ಅಣ್ಣ From Mexico’ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.

2021ರಲ್ಲಿ ತೆರೆಗೆ ಬಂದ ಬಡವ ರಾಸ್ಕಲ್ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಧನಂಜಯ್ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದರು. ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸಿ ನಟಿಸಿದ್ದ ಬಡವ ರಾಸ್ಕಲ್ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ಮೊದಲ ಹೆಜ್ಜೆಯಲ್ಲಿಯೇ ಗೆದ್ದಿದ್ದ ಶಂಕರ್ ಗುರು ಈಗ ಮತ್ತೊಂದು ಚೆಂದದ ಕಥೆ ಮಾಡಿ ಡಾಲಿ ಫ್ಯಾನ್ಸ್ ರಂಜಿಸಲು ಅಣಿಯಾಗಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇಂದು ’ಅಣ್ಣ From Mexico’ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಕೊರಳಿಗೆ ಕರ್ನಾಟಕ ಮ್ಯಾಪ್ ಇರುವ ಪೆಂಡೆಂಟ್ ಆಭರಣ ಧರಿಸಿ, ಸೂಟ್ ತೊಟ್ಟಿರುವ ಧನಂಜಯ್ ಲುಕ್ ರಿವೀಲ್ ಮಾಡದೇ ಚಿತ್ರತಂಡ ನಿರೀಕ್ಷೆ ಹೆಚ್ಚಿಸಿದೆ. ’ಅಣ್ಣ From Mexico’ ಶಂಕರ್ ಗುರು ನಿರ್ದೇಶನದ ಎರಡನೇ ಸಿನಿಮಾ. ಪಕ್ಕ ಆಕ್ಷನ್ ಎಂಟರ್ ಟೈನರ್ ಚಿತ್ರವಾಗಿದ್ದು, ಅಜ್ಜಿ ಮೊಮ್ಮಗನ ಬಾಂಧವ್ಯದ ಕಥೆಯೂ ಸಿನಿಮಾದಲ್ಲಿರಲಿದೆ.

ಸತ್ಯ ರಾಯಲ್ ನಿರ್ಮಾಣದಲ್ಲಿ ತಯಾರಾಗಲಿರುವ ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಲಿದ್ದು, ನವೆಂಬರ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದ್ದು, ಮೆಕ್ಸಿಕೋ ಸೇರಿದಂತೆ ಹಲವೆಡೆ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

lokesh

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

2 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

2 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

2 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

2 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

2 hours ago