ಚಿತ್ರ ಮಂಜರಿ

ಶ್ರೀದೇವಿಯದ್ದು ಸಹಜ ಸಾವಲ್ಲ : ಪತಿ ಬೋನಿ ಕಪೂರ್​

ಖ್ಯಾತ ನಟಿ ಶ್ರೀದೇವಿ ಅವರ ಸಾವಿನ ಬಗ್ಗೆ ಜನರಿಗೆ ಹಲವು ಅನುಮಾನಗಳಿವೆ. 2018ರ ಫೆಬ್ರವರಿ 24ರಂದು ದುಬೈನಲ್ಲಿ ಅವರು ನಿಧನರಾದರು. ಸ್ಟಾರ್​ ಹೋಟೆಲ್​ನ ಬಾತ್​ಟಬ್​ನಲ್ಲಿ ಮುಳುಗಿ ಅವರು ಕೊನೆಯುಸಿರು ಎಳೆದರು ಎಂಬುದನ್ನು ತಿಳಿದು ಇಡೀ ಚಿತ್ರರಂಗಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತ ಆಯಿತು. ಆ ಘಟನೆ ನಡೆದು ಇಷ್ಟು ವರ್ಷಗಳು ಕಳೆದ ಬಳಿಕ ಮೊದಲ ಬಾರಿಗೆ ಶ್ರೀದೇವಿ ಪತಿ ಬೋನಿ ಕಪೂರ್​ ಅವರು ಮೌನ ಮುರಿದಿದ್ದಾರೆ. ಪತ್ನಿಯ ಸಾವಿನ ಬಗ್ಗೆ ಅವರು ಮಾತನಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತಾವು ಸುದೀರ್ಘವಾದ ವಿಚಾರಣೆಗೆ ಒಳಪಟ್ಟಿರುವುದಾಗಿ ಬೋನಿ ಕಪೂರ್​ ತಿಳಿಸಿದ್ದಾರೆ. ಅಲ್ಲದೇ ಶ್ರೀದೇವಿಯ ಸಾವಿಗೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ದಿ ನ್ಯೂ ಇಂಡಿಯನ್​ಗೆ ನೀಡಿದ ಸಂದರ್ಶನದಲ್ಲಿ ಬೋನಿ ಕಪೂರ್​ ಅವರು ಈ ವಿಚಾರ ತಿಳಿಸಿದ್ದಾರೆ. ಶ್ರೀದೇವಿಯದ್ದು ಸಹಜ ಸಾವಲ್ಲ. ಅದು ಅನಾಹುತದ ಸಾವು. ಈ ಕುರಿತು ವಿಚಾರಣೆ ವೇಳೆ ನಾನು 48 ಗಂಟೆಗಳ ಕಾಲ ಮಾತನಾಡಿದ್ದೆ. ಹಾಗಾಗಿ ಮತ್ತೆ ಮಾತನಾಡುವುದು ಬೇಡ ಎಂದು ನಿರ್ಧರಿಸಿದೆ. ಭಾರತದ ಮಾಧ್ಯಮಗಳಿಂದ ಸಾಕಷ್ಟು ಒತ್ತಡ ಬರುತ್ತಿದೆ ಎಂಬ ಕಾರಣಕ್ಕೆ ಈ ರೀತಿ ವಿಚಾರಣೆಗೆ ಒಳಗಾಗಬೇಕು ಎಂದು ಅಲ್ಲಿನ ಅಧಿಕಾರಿಗಳು ನನಗೆ ಹೇಳಿದರು. ಕೊಲೆ ಪ್ರಯತ್ನ ನಡೆದಿಲ್ಲ ಎಂಬುದು ಅವರಿಗೆ ತಿಳಿಯಿತು. ಸುಳ್ಳು ಪತ್ತೆ ಪರೀಕ್ಷೆ ಸೇರಿದಂತೆ ಅನೇಕ ಟೆಸ್ಟ್​ಗಳಿಗೆ ನಾನು ಒಳಗಾದೆ. ಕೊನೆಗೂ ವರದಿಯಲ್ಲಿ ಅದು ಆ್ಯಕ್ಸಿಡೆಂಟಲ್​ ಸಾವು ಎಂಬುದು ತಿಳಿಯಿತು’ ಎಂದು ಬೋನಿ ಕಪೂರ್ ಹೇಳಿದ್ದಾರೆ.

ಚೆನ್ನಾಗಿ ಕಾಣಬೇಕು ಎಂಬ ಕಾರಣಕ್ಕೆ ಶ್ರೀದೇವಿ ಪಾಲಿಸುತ್ತಿದ್ದ ಡಯೆಟ್​ನಿಂದಾಗಿ ಈ ಸಾವು ಸಂಭವಿಸಿದೆ ಎಂದು ಬೋನಿ ಕಪೂರ್ ಹೇಳಿದ್ದಾರೆ. ಶ್ರೀದೇವಿ ಯಾವಾಗಲೂ ಉಪವಾಸ ಮಾಡುತ್ತಿದ್ದರು. ತೆರೆ ಮೇಲೆ ಚೆನ್ನಾಗಿ ಕಾಣಬೇಕು, ದೇಹದ ಶೇಪ್​ ಚೆನ್ನಾಗಿ ಇರಬೇಕು ಎಂಬ ಕಾರಣಕ್ಕೆ ಅವರು ಈ ರೀತಿ ಡಯೆಟ್​ ಮಾಡುತ್ತಿದ್ದರು. ನನ್ನನ್ನು ಮದುವೆ ಆದಾಗಿನಿಂದ ಹಲವು ಬಾರಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಅವರಿಗೆ ಲೋ ಬಿಪಿ ಇದೆ ಅಂತ ವೈದ್ಯರು ಹೇಳುತ್ತಲೇ ಇದ್ದರು ಎಂದು ಬೋನಿ ಕಪೂರ್ ಹೇಳಿದ್ದಾರೆ​.

lokesh

Recent Posts

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

1 hour ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

2 hours ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

2 hours ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

2 hours ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

3 hours ago