ಖ್ಯಾತ ನಟಿ ಶ್ರೀದೇವಿ ಅವರ ಸಾವಿನ ಬಗ್ಗೆ ಜನರಿಗೆ ಹಲವು ಅನುಮಾನಗಳಿವೆ. 2018ರ ಫೆಬ್ರವರಿ 24ರಂದು ದುಬೈನಲ್ಲಿ ಅವರು ನಿಧನರಾದರು. ಸ್ಟಾರ್ ಹೋಟೆಲ್ನ ಬಾತ್ಟಬ್ನಲ್ಲಿ ಮುಳುಗಿ ಅವರು ಕೊನೆಯುಸಿರು ಎಳೆದರು ಎಂಬುದನ್ನು ತಿಳಿದು ಇಡೀ ಚಿತ್ರರಂಗಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತ ಆಯಿತು. ಆ ಘಟನೆ ನಡೆದು ಇಷ್ಟು ವರ್ಷಗಳು ಕಳೆದ ಬಳಿಕ ಮೊದಲ ಬಾರಿಗೆ ಶ್ರೀದೇವಿ ಪತಿ ಬೋನಿ ಕಪೂರ್ ಅವರು ಮೌನ ಮುರಿದಿದ್ದಾರೆ. ಪತ್ನಿಯ ಸಾವಿನ ಬಗ್ಗೆ ಅವರು ಮಾತನಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತಾವು ಸುದೀರ್ಘವಾದ ವಿಚಾರಣೆಗೆ ಒಳಪಟ್ಟಿರುವುದಾಗಿ ಬೋನಿ ಕಪೂರ್ ತಿಳಿಸಿದ್ದಾರೆ. ಅಲ್ಲದೇ ಶ್ರೀದೇವಿಯ ಸಾವಿಗೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.
ದಿ ನ್ಯೂ ಇಂಡಿಯನ್ಗೆ ನೀಡಿದ ಸಂದರ್ಶನದಲ್ಲಿ ಬೋನಿ ಕಪೂರ್ ಅವರು ಈ ವಿಚಾರ ತಿಳಿಸಿದ್ದಾರೆ. ಶ್ರೀದೇವಿಯದ್ದು ಸಹಜ ಸಾವಲ್ಲ. ಅದು ಅನಾಹುತದ ಸಾವು. ಈ ಕುರಿತು ವಿಚಾರಣೆ ವೇಳೆ ನಾನು 48 ಗಂಟೆಗಳ ಕಾಲ ಮಾತನಾಡಿದ್ದೆ. ಹಾಗಾಗಿ ಮತ್ತೆ ಮಾತನಾಡುವುದು ಬೇಡ ಎಂದು ನಿರ್ಧರಿಸಿದೆ. ಭಾರತದ ಮಾಧ್ಯಮಗಳಿಂದ ಸಾಕಷ್ಟು ಒತ್ತಡ ಬರುತ್ತಿದೆ ಎಂಬ ಕಾರಣಕ್ಕೆ ಈ ರೀತಿ ವಿಚಾರಣೆಗೆ ಒಳಗಾಗಬೇಕು ಎಂದು ಅಲ್ಲಿನ ಅಧಿಕಾರಿಗಳು ನನಗೆ ಹೇಳಿದರು. ಕೊಲೆ ಪ್ರಯತ್ನ ನಡೆದಿಲ್ಲ ಎಂಬುದು ಅವರಿಗೆ ತಿಳಿಯಿತು. ಸುಳ್ಳು ಪತ್ತೆ ಪರೀಕ್ಷೆ ಸೇರಿದಂತೆ ಅನೇಕ ಟೆಸ್ಟ್ಗಳಿಗೆ ನಾನು ಒಳಗಾದೆ. ಕೊನೆಗೂ ವರದಿಯಲ್ಲಿ ಅದು ಆ್ಯಕ್ಸಿಡೆಂಟಲ್ ಸಾವು ಎಂಬುದು ತಿಳಿಯಿತು’ ಎಂದು ಬೋನಿ ಕಪೂರ್ ಹೇಳಿದ್ದಾರೆ.
ಚೆನ್ನಾಗಿ ಕಾಣಬೇಕು ಎಂಬ ಕಾರಣಕ್ಕೆ ಶ್ರೀದೇವಿ ಪಾಲಿಸುತ್ತಿದ್ದ ಡಯೆಟ್ನಿಂದಾಗಿ ಈ ಸಾವು ಸಂಭವಿಸಿದೆ ಎಂದು ಬೋನಿ ಕಪೂರ್ ಹೇಳಿದ್ದಾರೆ. ಶ್ರೀದೇವಿ ಯಾವಾಗಲೂ ಉಪವಾಸ ಮಾಡುತ್ತಿದ್ದರು. ತೆರೆ ಮೇಲೆ ಚೆನ್ನಾಗಿ ಕಾಣಬೇಕು, ದೇಹದ ಶೇಪ್ ಚೆನ್ನಾಗಿ ಇರಬೇಕು ಎಂಬ ಕಾರಣಕ್ಕೆ ಅವರು ಈ ರೀತಿ ಡಯೆಟ್ ಮಾಡುತ್ತಿದ್ದರು. ನನ್ನನ್ನು ಮದುವೆ ಆದಾಗಿನಿಂದ ಹಲವು ಬಾರಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಅವರಿಗೆ ಲೋ ಬಿಪಿ ಇದೆ ಅಂತ ವೈದ್ಯರು ಹೇಳುತ್ತಲೇ ಇದ್ದರು ಎಂದು ಬೋನಿ ಕಪೂರ್ ಹೇಳಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…