ಚಿತ್ರ ಮಂಜರಿ

ಶ್ರೀದೇವಿಯದ್ದು ಸಹಜ ಸಾವಲ್ಲ : ಪತಿ ಬೋನಿ ಕಪೂರ್​

ಖ್ಯಾತ ನಟಿ ಶ್ರೀದೇವಿ ಅವರ ಸಾವಿನ ಬಗ್ಗೆ ಜನರಿಗೆ ಹಲವು ಅನುಮಾನಗಳಿವೆ. 2018ರ ಫೆಬ್ರವರಿ 24ರಂದು ದುಬೈನಲ್ಲಿ ಅವರು ನಿಧನರಾದರು. ಸ್ಟಾರ್​ ಹೋಟೆಲ್​ನ ಬಾತ್​ಟಬ್​ನಲ್ಲಿ ಮುಳುಗಿ ಅವರು ಕೊನೆಯುಸಿರು ಎಳೆದರು ಎಂಬುದನ್ನು ತಿಳಿದು ಇಡೀ ಚಿತ್ರರಂಗಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತ ಆಯಿತು. ಆ ಘಟನೆ ನಡೆದು ಇಷ್ಟು ವರ್ಷಗಳು ಕಳೆದ ಬಳಿಕ ಮೊದಲ ಬಾರಿಗೆ ಶ್ರೀದೇವಿ ಪತಿ ಬೋನಿ ಕಪೂರ್​ ಅವರು ಮೌನ ಮುರಿದಿದ್ದಾರೆ. ಪತ್ನಿಯ ಸಾವಿನ ಬಗ್ಗೆ ಅವರು ಮಾತನಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತಾವು ಸುದೀರ್ಘವಾದ ವಿಚಾರಣೆಗೆ ಒಳಪಟ್ಟಿರುವುದಾಗಿ ಬೋನಿ ಕಪೂರ್​ ತಿಳಿಸಿದ್ದಾರೆ. ಅಲ್ಲದೇ ಶ್ರೀದೇವಿಯ ಸಾವಿಗೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ದಿ ನ್ಯೂ ಇಂಡಿಯನ್​ಗೆ ನೀಡಿದ ಸಂದರ್ಶನದಲ್ಲಿ ಬೋನಿ ಕಪೂರ್​ ಅವರು ಈ ವಿಚಾರ ತಿಳಿಸಿದ್ದಾರೆ. ಶ್ರೀದೇವಿಯದ್ದು ಸಹಜ ಸಾವಲ್ಲ. ಅದು ಅನಾಹುತದ ಸಾವು. ಈ ಕುರಿತು ವಿಚಾರಣೆ ವೇಳೆ ನಾನು 48 ಗಂಟೆಗಳ ಕಾಲ ಮಾತನಾಡಿದ್ದೆ. ಹಾಗಾಗಿ ಮತ್ತೆ ಮಾತನಾಡುವುದು ಬೇಡ ಎಂದು ನಿರ್ಧರಿಸಿದೆ. ಭಾರತದ ಮಾಧ್ಯಮಗಳಿಂದ ಸಾಕಷ್ಟು ಒತ್ತಡ ಬರುತ್ತಿದೆ ಎಂಬ ಕಾರಣಕ್ಕೆ ಈ ರೀತಿ ವಿಚಾರಣೆಗೆ ಒಳಗಾಗಬೇಕು ಎಂದು ಅಲ್ಲಿನ ಅಧಿಕಾರಿಗಳು ನನಗೆ ಹೇಳಿದರು. ಕೊಲೆ ಪ್ರಯತ್ನ ನಡೆದಿಲ್ಲ ಎಂಬುದು ಅವರಿಗೆ ತಿಳಿಯಿತು. ಸುಳ್ಳು ಪತ್ತೆ ಪರೀಕ್ಷೆ ಸೇರಿದಂತೆ ಅನೇಕ ಟೆಸ್ಟ್​ಗಳಿಗೆ ನಾನು ಒಳಗಾದೆ. ಕೊನೆಗೂ ವರದಿಯಲ್ಲಿ ಅದು ಆ್ಯಕ್ಸಿಡೆಂಟಲ್​ ಸಾವು ಎಂಬುದು ತಿಳಿಯಿತು’ ಎಂದು ಬೋನಿ ಕಪೂರ್ ಹೇಳಿದ್ದಾರೆ.

ಚೆನ್ನಾಗಿ ಕಾಣಬೇಕು ಎಂಬ ಕಾರಣಕ್ಕೆ ಶ್ರೀದೇವಿ ಪಾಲಿಸುತ್ತಿದ್ದ ಡಯೆಟ್​ನಿಂದಾಗಿ ಈ ಸಾವು ಸಂಭವಿಸಿದೆ ಎಂದು ಬೋನಿ ಕಪೂರ್ ಹೇಳಿದ್ದಾರೆ. ಶ್ರೀದೇವಿ ಯಾವಾಗಲೂ ಉಪವಾಸ ಮಾಡುತ್ತಿದ್ದರು. ತೆರೆ ಮೇಲೆ ಚೆನ್ನಾಗಿ ಕಾಣಬೇಕು, ದೇಹದ ಶೇಪ್​ ಚೆನ್ನಾಗಿ ಇರಬೇಕು ಎಂಬ ಕಾರಣಕ್ಕೆ ಅವರು ಈ ರೀತಿ ಡಯೆಟ್​ ಮಾಡುತ್ತಿದ್ದರು. ನನ್ನನ್ನು ಮದುವೆ ಆದಾಗಿನಿಂದ ಹಲವು ಬಾರಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಅವರಿಗೆ ಲೋ ಬಿಪಿ ಇದೆ ಅಂತ ವೈದ್ಯರು ಹೇಳುತ್ತಲೇ ಇದ್ದರು ಎಂದು ಬೋನಿ ಕಪೂರ್ ಹೇಳಿದ್ದಾರೆ​.

lokesh

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

9 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

12 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago