ಚಿತ್ರ ಮಂಜರಿ

ಶ್ರೀದೇವಿಯದ್ದು ಸಹಜ ಸಾವಲ್ಲ : ಪತಿ ಬೋನಿ ಕಪೂರ್​

ಖ್ಯಾತ ನಟಿ ಶ್ರೀದೇವಿ ಅವರ ಸಾವಿನ ಬಗ್ಗೆ ಜನರಿಗೆ ಹಲವು ಅನುಮಾನಗಳಿವೆ. 2018ರ ಫೆಬ್ರವರಿ 24ರಂದು ದುಬೈನಲ್ಲಿ ಅವರು ನಿಧನರಾದರು. ಸ್ಟಾರ್​ ಹೋಟೆಲ್​ನ ಬಾತ್​ಟಬ್​ನಲ್ಲಿ ಮುಳುಗಿ ಅವರು ಕೊನೆಯುಸಿರು ಎಳೆದರು ಎಂಬುದನ್ನು ತಿಳಿದು ಇಡೀ ಚಿತ್ರರಂಗಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತ ಆಯಿತು. ಆ ಘಟನೆ ನಡೆದು ಇಷ್ಟು ವರ್ಷಗಳು ಕಳೆದ ಬಳಿಕ ಮೊದಲ ಬಾರಿಗೆ ಶ್ರೀದೇವಿ ಪತಿ ಬೋನಿ ಕಪೂರ್​ ಅವರು ಮೌನ ಮುರಿದಿದ್ದಾರೆ. ಪತ್ನಿಯ ಸಾವಿನ ಬಗ್ಗೆ ಅವರು ಮಾತನಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತಾವು ಸುದೀರ್ಘವಾದ ವಿಚಾರಣೆಗೆ ಒಳಪಟ್ಟಿರುವುದಾಗಿ ಬೋನಿ ಕಪೂರ್​ ತಿಳಿಸಿದ್ದಾರೆ. ಅಲ್ಲದೇ ಶ್ರೀದೇವಿಯ ಸಾವಿಗೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ದಿ ನ್ಯೂ ಇಂಡಿಯನ್​ಗೆ ನೀಡಿದ ಸಂದರ್ಶನದಲ್ಲಿ ಬೋನಿ ಕಪೂರ್​ ಅವರು ಈ ವಿಚಾರ ತಿಳಿಸಿದ್ದಾರೆ. ಶ್ರೀದೇವಿಯದ್ದು ಸಹಜ ಸಾವಲ್ಲ. ಅದು ಅನಾಹುತದ ಸಾವು. ಈ ಕುರಿತು ವಿಚಾರಣೆ ವೇಳೆ ನಾನು 48 ಗಂಟೆಗಳ ಕಾಲ ಮಾತನಾಡಿದ್ದೆ. ಹಾಗಾಗಿ ಮತ್ತೆ ಮಾತನಾಡುವುದು ಬೇಡ ಎಂದು ನಿರ್ಧರಿಸಿದೆ. ಭಾರತದ ಮಾಧ್ಯಮಗಳಿಂದ ಸಾಕಷ್ಟು ಒತ್ತಡ ಬರುತ್ತಿದೆ ಎಂಬ ಕಾರಣಕ್ಕೆ ಈ ರೀತಿ ವಿಚಾರಣೆಗೆ ಒಳಗಾಗಬೇಕು ಎಂದು ಅಲ್ಲಿನ ಅಧಿಕಾರಿಗಳು ನನಗೆ ಹೇಳಿದರು. ಕೊಲೆ ಪ್ರಯತ್ನ ನಡೆದಿಲ್ಲ ಎಂಬುದು ಅವರಿಗೆ ತಿಳಿಯಿತು. ಸುಳ್ಳು ಪತ್ತೆ ಪರೀಕ್ಷೆ ಸೇರಿದಂತೆ ಅನೇಕ ಟೆಸ್ಟ್​ಗಳಿಗೆ ನಾನು ಒಳಗಾದೆ. ಕೊನೆಗೂ ವರದಿಯಲ್ಲಿ ಅದು ಆ್ಯಕ್ಸಿಡೆಂಟಲ್​ ಸಾವು ಎಂಬುದು ತಿಳಿಯಿತು’ ಎಂದು ಬೋನಿ ಕಪೂರ್ ಹೇಳಿದ್ದಾರೆ.

ಚೆನ್ನಾಗಿ ಕಾಣಬೇಕು ಎಂಬ ಕಾರಣಕ್ಕೆ ಶ್ರೀದೇವಿ ಪಾಲಿಸುತ್ತಿದ್ದ ಡಯೆಟ್​ನಿಂದಾಗಿ ಈ ಸಾವು ಸಂಭವಿಸಿದೆ ಎಂದು ಬೋನಿ ಕಪೂರ್ ಹೇಳಿದ್ದಾರೆ. ಶ್ರೀದೇವಿ ಯಾವಾಗಲೂ ಉಪವಾಸ ಮಾಡುತ್ತಿದ್ದರು. ತೆರೆ ಮೇಲೆ ಚೆನ್ನಾಗಿ ಕಾಣಬೇಕು, ದೇಹದ ಶೇಪ್​ ಚೆನ್ನಾಗಿ ಇರಬೇಕು ಎಂಬ ಕಾರಣಕ್ಕೆ ಅವರು ಈ ರೀತಿ ಡಯೆಟ್​ ಮಾಡುತ್ತಿದ್ದರು. ನನ್ನನ್ನು ಮದುವೆ ಆದಾಗಿನಿಂದ ಹಲವು ಬಾರಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಅವರಿಗೆ ಲೋ ಬಿಪಿ ಇದೆ ಅಂತ ವೈದ್ಯರು ಹೇಳುತ್ತಲೇ ಇದ್ದರು ಎಂದು ಬೋನಿ ಕಪೂರ್ ಹೇಳಿದ್ದಾರೆ​.

lokesh

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

3 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

3 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

3 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

4 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

4 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

13 hours ago