ಚಿತ್ರ ಮಂಜರಿ

ಮೆಗಾಸ್ಟಾರ್ ಸಿನಿಮಾದಲ್ಲಿ ಶ್ರೀಲೀಲಾ ಕಮಾಲ್

ಕನ್ನಡದ ನಟಿ ಶ್ರೀಲೀಲಾಗೆ ತೆಲುಗಿನಲ್ಲಿ ಆಫರ್ ಮೇಲೆ ಆಫರ್ ಬರುತ್ತಿವೆ. ರಶ್ಮಿಕಾ ಮಂದಣ್ಣ – ಪೂಜಾ ಹೆಗ್ಡೆಗೆ ಸೆಡ್ಡು ಹೊಡೆದು ಶ್ರೀಲೀಲಾ ಈಗ ಟಾಲಿವುಡ್‌ನಲ್ಲಿ ಮಿಂಚುತ್ತಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ- ತ್ರಿಷಾ ನಟನೆಯ ಸಿನಿಮಾದಲ್ಲಿ ಭರಾಟೆ ನಟಿ ನಟಿಸುವ ಬಂಪರ್ ಆಫರ್ ಬಾಚಿಕೊಂಡಿದ್ದಾರೆ.

ಕನ್ನಡದ 3 ಸಿನಿಮಾ, ತೆಲುಗಿನಲ್ಲಿ 8ಕ್ಕೂ ಹೆಚ್ಚು ಚಿತ್ರಗಳಿಗೆ ಲೀಲಾ ನಾಯಕಿಯಾಗಿದ್ದಾರೆ. ತೆಲುಗಿನಲ್ಲಿ ಬಿಗ್ ಬ್ಯಾನರ್ ಚಿತ್ರಗಳಿಗೆ ರಶ್ಮಿಕಾ, ಪೂಜಾ, ಕೃತಿ ಶೆಟ್ಟಿ ಅವರೇ ಬೇಕು ಎಂದು ಭಜನೆ ಮಾಡುತ್ತಿದ್ದ ನಿರ್ಮಾಪಕರ ಪಾಲಿಗೆ ಇಷ್ಟದೇವತೆಯಾಗಿ ಶ್ರೀಲೀಲಾ ಎಂಟ್ರಿ ಕೊಟ್ಟಿದ್ದಾರೆ.

ತೆಲುಗಿನ ಬಿಗ್ ಬಜೆಟ್ ಸಿನಿಮಾವೊಂದಕ್ಕೆ ಮೆಗಾಸ್ಟಾರ್ ಚಿರಂಜೀವಿ- ನಟಿ ತ್ರಿಷಾ ಕೃಷನ್ ಜೋಡಿಯಾಗಿ ಬರುತ್ತಿದ್ದಾರೆ. ಮಲಯಾಳಂ ಬ್ರೋ ಡ್ಯಾಡಿ ಸಿನಿಮಾವನ್ನ ತೆಲುಗಿಗೆ ರಿಮೇಕ್ ಮಾಡಲಾಗುತ್ತಿದೆ. ಹಾಗಾಗಿ ಸಿನಿಮಾದ ಪ್ರಮುಖ ಪಾತ್ರದಲ್ಲಿ ಮೆಗಾಸ್ಟಾರ್, ತ್ರಿಷಾ ಇರಲಿದ್ದಾರೆ. ಇವರ ಜೊತೆ ತೆಲುಗಿನ ಹೀರೋ ಶರ್ವಾನಂದ್ ಕೂಡ ಆಕ್ಟ್ ಮಾಡ್ತಿದ್ದಾರೆ.

ಬ್ರೋ ಡ್ಯಾಡಿ ತಂದೆ-ಮಗನ ಕುರಿತ ಸಿನಿಮಾವಾಗಿದ್ದು ಚಿರಂಜೀವಿ- ತ್ರಿಷಾ, ಪತಿ ಮತ್ತು ಪತ್ನಿ ರೋಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿರಂಜೀವಿ ಮಗನ ಪಾತ್ರಕ್ಕೆ ಶರ್ವಾನಂದ್ ಫೈನಲ್ ಆಗಿದ್ದಾರೆ. ಶರ್ವಾನಂದ್‌ಗೆ ನಾಯಕಿಯಾಗಿ ಶ್ರೀಲೀಲಾ ಫಿಕ್ಸ್ ಆಗಿದ್ದಾರೆ. ಈ ಚಿತ್ರಕ್ಕೆ ಮೆಗಾಸ್ಟಾರ್ ಪುತ್ರಿ ಸುಶ್ಮಿತಾ ಕೊನಿಡೆಲಾ ಅವರು ನಿರ್ಮಾಣ ಮಾಡ್ತಿದ್ದಾರೆ.

ಮಲಯಾಳಂನಲ್ಲಿ 2022ರಲ್ಲಿ ಬ್ರೋ ಡ್ಯಾಡಿ ಸಿನಿಮಾ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನದಲ್ಲಿ ಮೂಡಿ ಬಂದಿತ್ತು. ಮೋಹನ್ ಲಾಲ್, ಪೃಥ್ವಿರಾಜ್ ಸುಕುಮಾರನ್, ಮೀನಾ, ಕಲ್ಯಾಣಿ ಪ್ರಿಯಾದರ್ಶನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈ ಚಿತ್ರ ಮಾಲಿವುಡ್‌ನಲ್ಲಿ ಹಿಟ್ ಆಗಿತ್ತು.ಈಗ ಇದೇ ಚಿತ್ರವನ್ನು ತೆಲುಗಿನಲ್ಲಿ ತರಲು ಪ್ಲ್ಯಾನ್ ಮಾಡಿದ್ದಾರೆ. ಇದು ಸದ್ಯ ಟಾಲಿವುಡ್‌ನ ಹಾಟ್ ಟಾಪಿಕ್ ಆಗಿದ್ದು, ಚಿತ್ರತಂಡ ಈ ಬಗ್ಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.

lokesh

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

9 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

10 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

10 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

16 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

16 hours ago