ಕನ್ನಡದ ನಟಿ ಶ್ರೀಲೀಲಾಗೆ ತೆಲುಗಿನಲ್ಲಿ ಆಫರ್ ಮೇಲೆ ಆಫರ್ ಬರುತ್ತಿವೆ. ರಶ್ಮಿಕಾ ಮಂದಣ್ಣ – ಪೂಜಾ ಹೆಗ್ಡೆಗೆ ಸೆಡ್ಡು ಹೊಡೆದು ಶ್ರೀಲೀಲಾ ಈಗ ಟಾಲಿವುಡ್ನಲ್ಲಿ ಮಿಂಚುತ್ತಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ- ತ್ರಿಷಾ ನಟನೆಯ ಸಿನಿಮಾದಲ್ಲಿ ಭರಾಟೆ ನಟಿ ನಟಿಸುವ ಬಂಪರ್ ಆಫರ್ ಬಾಚಿಕೊಂಡಿದ್ದಾರೆ.
ಕನ್ನಡದ 3 ಸಿನಿಮಾ, ತೆಲುಗಿನಲ್ಲಿ 8ಕ್ಕೂ ಹೆಚ್ಚು ಚಿತ್ರಗಳಿಗೆ ಲೀಲಾ ನಾಯಕಿಯಾಗಿದ್ದಾರೆ. ತೆಲುಗಿನಲ್ಲಿ ಬಿಗ್ ಬ್ಯಾನರ್ ಚಿತ್ರಗಳಿಗೆ ರಶ್ಮಿಕಾ, ಪೂಜಾ, ಕೃತಿ ಶೆಟ್ಟಿ ಅವರೇ ಬೇಕು ಎಂದು ಭಜನೆ ಮಾಡುತ್ತಿದ್ದ ನಿರ್ಮಾಪಕರ ಪಾಲಿಗೆ ಇಷ್ಟದೇವತೆಯಾಗಿ ಶ್ರೀಲೀಲಾ ಎಂಟ್ರಿ ಕೊಟ್ಟಿದ್ದಾರೆ.
ತೆಲುಗಿನ ಬಿಗ್ ಬಜೆಟ್ ಸಿನಿಮಾವೊಂದಕ್ಕೆ ಮೆಗಾಸ್ಟಾರ್ ಚಿರಂಜೀವಿ- ನಟಿ ತ್ರಿಷಾ ಕೃಷನ್ ಜೋಡಿಯಾಗಿ ಬರುತ್ತಿದ್ದಾರೆ. ಮಲಯಾಳಂ ಬ್ರೋ ಡ್ಯಾಡಿ ಸಿನಿಮಾವನ್ನ ತೆಲುಗಿಗೆ ರಿಮೇಕ್ ಮಾಡಲಾಗುತ್ತಿದೆ. ಹಾಗಾಗಿ ಸಿನಿಮಾದ ಪ್ರಮುಖ ಪಾತ್ರದಲ್ಲಿ ಮೆಗಾಸ್ಟಾರ್, ತ್ರಿಷಾ ಇರಲಿದ್ದಾರೆ. ಇವರ ಜೊತೆ ತೆಲುಗಿನ ಹೀರೋ ಶರ್ವಾನಂದ್ ಕೂಡ ಆಕ್ಟ್ ಮಾಡ್ತಿದ್ದಾರೆ.
ಬ್ರೋ ಡ್ಯಾಡಿ ತಂದೆ-ಮಗನ ಕುರಿತ ಸಿನಿಮಾವಾಗಿದ್ದು ಚಿರಂಜೀವಿ- ತ್ರಿಷಾ, ಪತಿ ಮತ್ತು ಪತ್ನಿ ರೋಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿರಂಜೀವಿ ಮಗನ ಪಾತ್ರಕ್ಕೆ ಶರ್ವಾನಂದ್ ಫೈನಲ್ ಆಗಿದ್ದಾರೆ. ಶರ್ವಾನಂದ್ಗೆ ನಾಯಕಿಯಾಗಿ ಶ್ರೀಲೀಲಾ ಫಿಕ್ಸ್ ಆಗಿದ್ದಾರೆ. ಈ ಚಿತ್ರಕ್ಕೆ ಮೆಗಾಸ್ಟಾರ್ ಪುತ್ರಿ ಸುಶ್ಮಿತಾ ಕೊನಿಡೆಲಾ ಅವರು ನಿರ್ಮಾಣ ಮಾಡ್ತಿದ್ದಾರೆ.
ಮಲಯಾಳಂನಲ್ಲಿ 2022ರಲ್ಲಿ ಬ್ರೋ ಡ್ಯಾಡಿ ಸಿನಿಮಾ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನದಲ್ಲಿ ಮೂಡಿ ಬಂದಿತ್ತು. ಮೋಹನ್ ಲಾಲ್, ಪೃಥ್ವಿರಾಜ್ ಸುಕುಮಾರನ್, ಮೀನಾ, ಕಲ್ಯಾಣಿ ಪ್ರಿಯಾದರ್ಶನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈ ಚಿತ್ರ ಮಾಲಿವುಡ್ನಲ್ಲಿ ಹಿಟ್ ಆಗಿತ್ತು.ಈಗ ಇದೇ ಚಿತ್ರವನ್ನು ತೆಲುಗಿನಲ್ಲಿ ತರಲು ಪ್ಲ್ಯಾನ್ ಮಾಡಿದ್ದಾರೆ. ಇದು ಸದ್ಯ ಟಾಲಿವುಡ್ನ ಹಾಟ್ ಟಾಪಿಕ್ ಆಗಿದ್ದು, ಚಿತ್ರತಂಡ ಈ ಬಗ್ಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.
ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…
ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…
ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…
ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…
ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…