ಚಿತ್ರ ಮಂಜರಿ

ಮೆಗಾಸ್ಟಾರ್ ಸಿನಿಮಾದಲ್ಲಿ ಶ್ರೀಲೀಲಾ ಕಮಾಲ್

ಕನ್ನಡದ ನಟಿ ಶ್ರೀಲೀಲಾಗೆ ತೆಲುಗಿನಲ್ಲಿ ಆಫರ್ ಮೇಲೆ ಆಫರ್ ಬರುತ್ತಿವೆ. ರಶ್ಮಿಕಾ ಮಂದಣ್ಣ – ಪೂಜಾ ಹೆಗ್ಡೆಗೆ ಸೆಡ್ಡು ಹೊಡೆದು ಶ್ರೀಲೀಲಾ ಈಗ ಟಾಲಿವುಡ್‌ನಲ್ಲಿ ಮಿಂಚುತ್ತಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ- ತ್ರಿಷಾ ನಟನೆಯ ಸಿನಿಮಾದಲ್ಲಿ ಭರಾಟೆ ನಟಿ ನಟಿಸುವ ಬಂಪರ್ ಆಫರ್ ಬಾಚಿಕೊಂಡಿದ್ದಾರೆ.

ಕನ್ನಡದ 3 ಸಿನಿಮಾ, ತೆಲುಗಿನಲ್ಲಿ 8ಕ್ಕೂ ಹೆಚ್ಚು ಚಿತ್ರಗಳಿಗೆ ಲೀಲಾ ನಾಯಕಿಯಾಗಿದ್ದಾರೆ. ತೆಲುಗಿನಲ್ಲಿ ಬಿಗ್ ಬ್ಯಾನರ್ ಚಿತ್ರಗಳಿಗೆ ರಶ್ಮಿಕಾ, ಪೂಜಾ, ಕೃತಿ ಶೆಟ್ಟಿ ಅವರೇ ಬೇಕು ಎಂದು ಭಜನೆ ಮಾಡುತ್ತಿದ್ದ ನಿರ್ಮಾಪಕರ ಪಾಲಿಗೆ ಇಷ್ಟದೇವತೆಯಾಗಿ ಶ್ರೀಲೀಲಾ ಎಂಟ್ರಿ ಕೊಟ್ಟಿದ್ದಾರೆ.

ತೆಲುಗಿನ ಬಿಗ್ ಬಜೆಟ್ ಸಿನಿಮಾವೊಂದಕ್ಕೆ ಮೆಗಾಸ್ಟಾರ್ ಚಿರಂಜೀವಿ- ನಟಿ ತ್ರಿಷಾ ಕೃಷನ್ ಜೋಡಿಯಾಗಿ ಬರುತ್ತಿದ್ದಾರೆ. ಮಲಯಾಳಂ ಬ್ರೋ ಡ್ಯಾಡಿ ಸಿನಿಮಾವನ್ನ ತೆಲುಗಿಗೆ ರಿಮೇಕ್ ಮಾಡಲಾಗುತ್ತಿದೆ. ಹಾಗಾಗಿ ಸಿನಿಮಾದ ಪ್ರಮುಖ ಪಾತ್ರದಲ್ಲಿ ಮೆಗಾಸ್ಟಾರ್, ತ್ರಿಷಾ ಇರಲಿದ್ದಾರೆ. ಇವರ ಜೊತೆ ತೆಲುಗಿನ ಹೀರೋ ಶರ್ವಾನಂದ್ ಕೂಡ ಆಕ್ಟ್ ಮಾಡ್ತಿದ್ದಾರೆ.

ಬ್ರೋ ಡ್ಯಾಡಿ ತಂದೆ-ಮಗನ ಕುರಿತ ಸಿನಿಮಾವಾಗಿದ್ದು ಚಿರಂಜೀವಿ- ತ್ರಿಷಾ, ಪತಿ ಮತ್ತು ಪತ್ನಿ ರೋಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿರಂಜೀವಿ ಮಗನ ಪಾತ್ರಕ್ಕೆ ಶರ್ವಾನಂದ್ ಫೈನಲ್ ಆಗಿದ್ದಾರೆ. ಶರ್ವಾನಂದ್‌ಗೆ ನಾಯಕಿಯಾಗಿ ಶ್ರೀಲೀಲಾ ಫಿಕ್ಸ್ ಆಗಿದ್ದಾರೆ. ಈ ಚಿತ್ರಕ್ಕೆ ಮೆಗಾಸ್ಟಾರ್ ಪುತ್ರಿ ಸುಶ್ಮಿತಾ ಕೊನಿಡೆಲಾ ಅವರು ನಿರ್ಮಾಣ ಮಾಡ್ತಿದ್ದಾರೆ.

ಮಲಯಾಳಂನಲ್ಲಿ 2022ರಲ್ಲಿ ಬ್ರೋ ಡ್ಯಾಡಿ ಸಿನಿಮಾ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನದಲ್ಲಿ ಮೂಡಿ ಬಂದಿತ್ತು. ಮೋಹನ್ ಲಾಲ್, ಪೃಥ್ವಿರಾಜ್ ಸುಕುಮಾರನ್, ಮೀನಾ, ಕಲ್ಯಾಣಿ ಪ್ರಿಯಾದರ್ಶನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈ ಚಿತ್ರ ಮಾಲಿವುಡ್‌ನಲ್ಲಿ ಹಿಟ್ ಆಗಿತ್ತು.ಈಗ ಇದೇ ಚಿತ್ರವನ್ನು ತೆಲುಗಿನಲ್ಲಿ ತರಲು ಪ್ಲ್ಯಾನ್ ಮಾಡಿದ್ದಾರೆ. ಇದು ಸದ್ಯ ಟಾಲಿವುಡ್‌ನ ಹಾಟ್ ಟಾಪಿಕ್ ಆಗಿದ್ದು, ಚಿತ್ರತಂಡ ಈ ಬಗ್ಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.

lokesh

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

10 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

11 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

13 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

16 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

17 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

23 hours ago