ಚಿತ್ರ ಮಂಜರಿ

ತೆಲುಗಿನಲ್ಲಿ ಶ್ರೀಲೀಲಾ ಕಮಾಲ್ : ಬಾಲಿವುಡ್ ನತ್ತ ಹೆಜ್ಜೆ ಹಾಕಿದ ರಶ್ಮಿಕಾ ಮಂದಣ್ಣ

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರು ಕನ್ನಡ ಚಿತ್ರದಿಂದ ನಟನೆಗೆ ಎಂಟ್ರಿ ಕೊಟ್ಟಿದ್ದರು ಕೂಡ. ಸೌತ್ ಸಿನಿಮಾಗಳ ಮೂಲಕ ಹೆಚ್ಚು ಜನಪ್ರಿಯತೆ ಪಡೆದುಕೊಂಡವರು. ರಶ್ಮಿಕಾ ನಟಿಸಬೇಕಿದ್ದ ಸಿನಿಮಾಗಳು ಒಂದೊಂದೇ ಪ್ರಾಜೆಕ್ಟ್‌ಗಳು ಶ್ರೀಲೀಲಾ ಕೈ ಸೇರುತ್ತಿದೆ. ನಿತಿನ್ ಸಿನಿಮಾಶದಿಂದ ರಶ್ಮಿಕಾ ಹೊರಬಂದಿದ್ದರು. ಈ ಚಿತ್ರಕ್ಕೆ ಶ್ರೀಲೀಲಾ ನಾಯಕಿಯಾಗಿದ್ದಾರೆ. ಈ ಬೆನ್ನಲ್ಲೇ ರಶ್ಮಿಕಾ ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ.

ಕಿರಿಕ್ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣ ಅವರ ಮೇಲಿರುವ ಕ್ರೇಜ್ ಎಲ್ಲೂ ಕಮ್ಮಿ ಆಗಿಲ್ಲ. ಪುಷ್ಪ 2, ಅನಿಮಲ್, ರೈನ್ ಬೋ ಸಿನಿಮಾ ಅಂತಾ ನಟಿ ಬ್ಯುಸಿಯಾಗಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಶ್ರೀಲೀಲಾ ಎಂಟ್ರಿಯಿಂದ ರಶ್ಮಿಕಾ ಮಂದಣ್ಣಗೆ ಕೊಂಚ ಎಫೆಕ್ಟ್ ಆದಂತಿದೆ. ರಶ್ಮಿಕಾ ಕೈಯಲ್ಲಿ 4-5 ಪ್ರಾಜೆಕ್ಟ್ ಇದ್ರೆ, ಶ್ರೀಲೀಲಾ ಕೈಯಲ್ಲಿ 10ಕ್ಕೂ ಹೆಚ್ಚು ಸಿನಿಮಾಗಳಿವೆ.

ಈ ಹಿಂದೆ ತೆಲುಗು ನಟ ನಿತಿನ್ ಚಿತ್ರಕ್ಕೆ ರಶ್ಮಿಕಾ ನಾಯಕಿಯಾಗಿ ಫೈನಲ್ ಆಗಿದ್ದರು. ಆದರೆ ಏಕಾಏಕಿ ಏನಾಯ್ತೋ ಏನೋ ಸಿನಿಮಾ ತಂಡಕ್ಕೆ ನಟಿ ಗುಡ್ ಬೈ ಹೇಳಿದ್ದರು. ಹೀಗೆ ರಶ್ಮಿಕಾ ಕೈಬಿಟ್ಟ ಸಿನಿಮಾಗಳೆಲ್ಲ ಶ್ರೀಲೀಲಾ ಪಾಲಾಗುತ್ತಿದೆ. ಇದೆಲ್ಲದರನಡುವೆ ತೆಲುಗಿನಲ್ಲಿ ಡಿಮ್ಯಾಂಡ್ ಕಮ್ಮಿಯಾಗುತ್ತಿದ್ದಂತೆ ಕೊಡಗಿನ ಕುವರಿ ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ. ರಶ್ಮಿಕಾ ನಟನೆಯ ಹೊಸ ಹಿಂದಿ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಅನೀಸ್ ಬಾಜ್ಮೀ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರಲಿದೆ.

ಗುಡ್ ಬೈ, ಮಿಷನ್ ಮಜ್ನು, ಅನಿಮಲ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ಶಾಹಿದ್ ಕಪೂರ್ ಜೊತೆ ನಟಿಸಲು ರಶ್ಮಿಕಾ ಸಜ್ಜಾಗಿದ್ದಾರೆ. ಹೊಸ ಪ್ರೇಮಕಥೆಯನ್ನ ಹೇಳಲು ಈ ಜೋಡಿ ಸಜ್ಜಾಗಿದೆ. `ಏಕ್ ಸಾಥ್ ದೋ ದೋ’ ಎಂದು ಈ ಚಿತ್ರಕ್ಕೆ ಟೈಟಲ್ ಫಿಕ್ಸ್ ಆಗಿದೆ. ಈ ವರ್ಷದ ಅಂತ್ಯದಲ್ಲಿ ಸಿನಿಮಾ ಚಿತ್ರೀಕರಣ ಶುರುವಾಗಿದೆ.

lokesh

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

4 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

4 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

4 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

4 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

5 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

5 hours ago