ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರು ಕನ್ನಡ ಚಿತ್ರದಿಂದ ನಟನೆಗೆ ಎಂಟ್ರಿ ಕೊಟ್ಟಿದ್ದರು ಕೂಡ. ಸೌತ್ ಸಿನಿಮಾಗಳ ಮೂಲಕ ಹೆಚ್ಚು ಜನಪ್ರಿಯತೆ ಪಡೆದುಕೊಂಡವರು. ರಶ್ಮಿಕಾ ನಟಿಸಬೇಕಿದ್ದ ಸಿನಿಮಾಗಳು ಒಂದೊಂದೇ ಪ್ರಾಜೆಕ್ಟ್ಗಳು ಶ್ರೀಲೀಲಾ ಕೈ ಸೇರುತ್ತಿದೆ. ನಿತಿನ್ ಸಿನಿಮಾಶದಿಂದ ರಶ್ಮಿಕಾ ಹೊರಬಂದಿದ್ದರು. ಈ ಚಿತ್ರಕ್ಕೆ ಶ್ರೀಲೀಲಾ ನಾಯಕಿಯಾಗಿದ್ದಾರೆ. ಈ ಬೆನ್ನಲ್ಲೇ ರಶ್ಮಿಕಾ ಬಾಲಿವುಡ್ನತ್ತ ಮುಖ ಮಾಡಿದ್ದಾರೆ.
ಕಿರಿಕ್ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣ ಅವರ ಮೇಲಿರುವ ಕ್ರೇಜ್ ಎಲ್ಲೂ ಕಮ್ಮಿ ಆಗಿಲ್ಲ. ಪುಷ್ಪ 2, ಅನಿಮಲ್, ರೈನ್ ಬೋ ಸಿನಿಮಾ ಅಂತಾ ನಟಿ ಬ್ಯುಸಿಯಾಗಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಶ್ರೀಲೀಲಾ ಎಂಟ್ರಿಯಿಂದ ರಶ್ಮಿಕಾ ಮಂದಣ್ಣಗೆ ಕೊಂಚ ಎಫೆಕ್ಟ್ ಆದಂತಿದೆ. ರಶ್ಮಿಕಾ ಕೈಯಲ್ಲಿ 4-5 ಪ್ರಾಜೆಕ್ಟ್ ಇದ್ರೆ, ಶ್ರೀಲೀಲಾ ಕೈಯಲ್ಲಿ 10ಕ್ಕೂ ಹೆಚ್ಚು ಸಿನಿಮಾಗಳಿವೆ.
ಈ ಹಿಂದೆ ತೆಲುಗು ನಟ ನಿತಿನ್ ಚಿತ್ರಕ್ಕೆ ರಶ್ಮಿಕಾ ನಾಯಕಿಯಾಗಿ ಫೈನಲ್ ಆಗಿದ್ದರು. ಆದರೆ ಏಕಾಏಕಿ ಏನಾಯ್ತೋ ಏನೋ ಸಿನಿಮಾ ತಂಡಕ್ಕೆ ನಟಿ ಗುಡ್ ಬೈ ಹೇಳಿದ್ದರು. ಹೀಗೆ ರಶ್ಮಿಕಾ ಕೈಬಿಟ್ಟ ಸಿನಿಮಾಗಳೆಲ್ಲ ಶ್ರೀಲೀಲಾ ಪಾಲಾಗುತ್ತಿದೆ. ಇದೆಲ್ಲದರನಡುವೆ ತೆಲುಗಿನಲ್ಲಿ ಡಿಮ್ಯಾಂಡ್ ಕಮ್ಮಿಯಾಗುತ್ತಿದ್ದಂತೆ ಕೊಡಗಿನ ಕುವರಿ ಬಾಲಿವುಡ್ನತ್ತ ಮುಖ ಮಾಡಿದ್ದಾರೆ. ರಶ್ಮಿಕಾ ನಟನೆಯ ಹೊಸ ಹಿಂದಿ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಅನೀಸ್ ಬಾಜ್ಮೀ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರಲಿದೆ.
ಗುಡ್ ಬೈ, ಮಿಷನ್ ಮಜ್ನು, ಅನಿಮಲ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ಶಾಹಿದ್ ಕಪೂರ್ ಜೊತೆ ನಟಿಸಲು ರಶ್ಮಿಕಾ ಸಜ್ಜಾಗಿದ್ದಾರೆ. ಹೊಸ ಪ್ರೇಮಕಥೆಯನ್ನ ಹೇಳಲು ಈ ಜೋಡಿ ಸಜ್ಜಾಗಿದೆ. `ಏಕ್ ಸಾಥ್ ದೋ ದೋ’ ಎಂದು ಈ ಚಿತ್ರಕ್ಕೆ ಟೈಟಲ್ ಫಿಕ್ಸ್ ಆಗಿದೆ. ಈ ವರ್ಷದ ಅಂತ್ಯದಲ್ಲಿ ಸಿನಿಮಾ ಚಿತ್ರೀಕರಣ ಶುರುವಾಗಿದೆ.
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…
ಬೆಂಗಳೂರು: ನಿಮಗೆಲ್ಲಾ ಡಿಬಾಸ್, ಆ ಡಿಬಾಸ್ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್ ಹೊರಬರುತ್ತಾರೆ ಎಂದು ನಟ ರವಿಚಂದ್ರನ್…